AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳ: ಗ್ಯಾಸ್ ಏಜೆನ್ಸಿಗೆ ನುಗ್ಗಿ 5 ಲಕ್ಷ ರೂ. ಕಳ್ಳತನ; ದೃಶ್ಯ ಸಿಸಿಟಿಯಲ್ಲಿ ಸೆರೆ

ಭಟ್ಕಳ(Bhatkal) ದ ರಾಷ್ಟ್ರೀಯ ಹೆದ್ದಾರಿ 66ರ ಮಣ್ಕುಳಿ ಪುಷ್ಪಾಂಜಲಿ ಕ್ರಾಸ್ ಸಮೀಪದಲ್ಲಿರುವ ಗ್ಯಾಸ್ ಏಜೆನ್ಸಿಯಲ್ಲಿ ಈ ಘಟನೆ ನಡೆದಿದ್ದು, ಬಾಗಿಲು ಒಡೆದು 5 ಲಕ್ಷ ರೂಪಾಯಿಗೂ ಅಧಿಕ ನಗದನ್ನು ದೋಚಿ ಪರಾರಿ ಆಗಿದ್ದಾರೆ. ಗ್ಯಾಸ್ ಏಜೆನ್ಸಿಯನ್ನು ದೋಚಿದ ಕಳ್ಳರ ಕೈಚಳಕದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ಭಟ್ಕಳ: ಗ್ಯಾಸ್ ಏಜೆನ್ಸಿಗೆ ನುಗ್ಗಿ 5 ಲಕ್ಷ ರೂ. ಕಳ್ಳತನ; ದೃಶ್ಯ ಸಿಸಿಟಿಯಲ್ಲಿ ಸೆರೆ
ಗ್ಯಾಸ್​ ಏಜೆನ್ಸಿಯಲ್ಲಿ ಕಳ್ಳತನ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jan 03, 2024 | 9:45 PM

Share

ಉತ್ತರ ಕನ್ನಡ, ಜ.03: ಶ್ರೀ ಮೂಕಾಂಬಿಕಾ ಭಾರತ್ ಗ್ಯಾಸ್ ಏಜೆನ್ಸಿ(Bharatgas Agencies)ಗೆ ಮೂವರು ಮುಸುಕುಧಾರಿಗಳು ನುಗ್ಗಿ ಕಳ್ಳತನ ಮಾಡಿದ್ದಾರೆ. ಭಟ್ಕಳ(Bhatkal) ದ ರಾಷ್ಟ್ರೀಯ ಹೆದ್ದಾರಿ 66ರ ಮಣ್ಕುಳಿ ಪುಷ್ಪಾಂಜಲಿ ಕ್ರಾಸ್ ಸಮೀಪದಲ್ಲಿರುವ ಗ್ಯಾಸ್ ಏಜೆನ್ಸಿಯಲ್ಲಿ ಈ ಘಟನೆ ನಡೆದಿದ್ದು, ಬಾಗಿಲು ಒಡೆದು 5 ಲಕ್ಷ ರೂಪಾಯಿಗೂ ಅಧಿಕ ನಗದನ್ನು ದೋಚಿ ಪರಾರಿ ಆಗಿದ್ದಾರೆ. ಗ್ಯಾಸ್ ಏಜೆನ್ಸಿಯನ್ನು ದೋಚಿದ ಕಳ್ಳರ ಕೈಚಳಕದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಕಳೆದ ತಿಂಗಳು ಇದೇ ಭಾಗದಲ್ಲಿ ಗ್ಯಾರೇಜ್ ಒಂದರಲ್ಲಿ ಕಳ್ಳತನವಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದ್ದು, ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಎಂದಿನಂತೆ ಏಜೆನ್ಸಿ ಮಾಲೀಕರು ತಮ್ಮ ದಿನನಿತ್ಯದ ವ್ಯವಹಾರದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ, ನಿನ್ನೆ ಕೆಲಸದ ಒತ್ತಡದಿಂದ ಹಣವನ್ನು ತಮ್ಮ ಗ್ಯಾಸ್ ಏಜೆನ್ಸಿ ಅಂಗಡಿಯಲ್ಲೇ ಇಟ್ಟು ಬಾಗಿಲು ಹಾಕಿ ತೆರಳಿದ್ದರು. ಇಂದು ನಸುಕಿನ ಜಾವ ಮೂವರು ಕಳ್ಳರು ಮುಸುಕು ಹಾಗೂ ಕೈಗೆ ಗ್ಲೌಸ್ ಧರಿಸಿ ಗ್ಯಾಸ್ ಏಜೆನ್ಸಿಯ ಬೀಗ ಮುರಿದು ಒಳ ನುಗ್ಗಿದ್ದರು. ಓರ್ವ ಹೊರಗಡೆ ನಿಂತು ಕಾಯುತ್ತಿದ್ದರೆ, ಇನ್ನಿಬ್ಬರು ಏಜೆನ್ಸಿ ಒಳಗೆ ನುಗ್ಗಿದ್ದರು.

ಇದನ್ನೂ ಓದಿ:ಬೈಕ್ ವ್ಹೀಲಿಂಗ್ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್; ವಿಚಾರಣೆ ವೇಳೆ ಕಳ್ಳತನ, ಗಾಂಜಾ ಕೇಸ್ ಪತ್ತೆ

ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ

ಗ್ಲಾಸ್ ಒಡೆದು ಚೇಂಬರ‌್‌ನಲ್ಲಿದ್ದ ಸುಮಾರು 5 ಲಕ್ಷಕ್ಕೂ ನಗದು ದೋಚಿ ಪರಾರಿಯಾಗಿದ್ದು, ಮುಂಜಾನೆ ಗ್ಯಾಸ್ ಏಜೆನ್ಸಿಗೆ ಬಂದ ಮಾಲೀಕರಿಗೆ ಕಳ್ಳತನವಾಗಿರುವುದು ತಿಳಿದುಬಂದಿದೆ. ಕೂಡಲೇ ಭಟ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿದ್ದಾರೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ