Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದ ಸಮುದ್ರದಲ್ಲಿ ಅಪರೂಪದ ಕಡಲಾಮೆಗಳ ಸಂತಾನೋತ್ಪತ್ತಿ; ವಿಶಿಷ್ಟ ಜೀವಿಯ ಬಗ್ಗೆ ಕುತೂಹಲಕಾರಿ ಮಾಹಿತಿ

ಅಳಿನಂಚಿನಲ್ಲಿರುವ ಆಲಿವ್ ರಿಡ್ಲೇ ಕಡಲಾಮೆಗಳು ನೂರಾರು ಸಂಖ್ಯೆಯಲ್ಲಿ ಮೊಟ್ಟೆಗಳನ್ನಿಟ್ಟು ತೆರಳಿರುವುದು ಇದೀಗ ಉತ್ತರ ಕನ್ನಡ ಜಿಲ್ಲೆಯ ಕಡಲತೀರಕ್ಕೆ ಇನ್ನಷ್ಟು ಪ್ರಾಮುಖ್ಯತೆ ದೊರಕಿಸಿಕೊಟ್ಟಿದೆ.

ಉತ್ತರ ಕನ್ನಡದ ಸಮುದ್ರದಲ್ಲಿ ಅಪರೂಪದ ಕಡಲಾಮೆಗಳ ಸಂತಾನೋತ್ಪತ್ತಿ; ವಿಶಿಷ್ಟ ಜೀವಿಯ ಬಗ್ಗೆ ಕುತೂಹಲಕಾರಿ ಮಾಹಿತಿ
ಆಲಿವ್ ರಿಡ್ಲೇ ಕಡಲಾಮೆ
Follow us
TV9 Web
| Updated By: ganapathi bhat

Updated on: Jan 25, 2022 | 7:15 AM

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಡಲು ಅನೇಕ ಅಪರೂಪದ ಜೀವಸಂಕುಲಗಳ ವಾಸಸ್ಥಾನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಅಳಿವಿನಂಚಿನಲ್ಲಿರುವ ಅಪರೂಪದ ಆಲಿವ್ ರಿಡ್ಲೇ ಕಡಲಾಮೆಗಳು ಜಿಲ್ಲೆಯ ಕರಾವಳಿ ತಟಗಳನ್ನ ಸಂತಾನೋತ್ಪತ್ತಿಯ ತಾಣವನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ವಿವಿಧೆಡೆ ಮೊಟ್ಟೆಗಳನ್ನಿಟ್ಟು ತೆರಳಿವೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಗೊಳಪಡುವ ಈ ಆಮೆಗಳ ಮೊಟ್ಟೆಗಳನ್ನೀಗ ಸಂರಕ್ಷಿಸುವ ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.

ಹೌದು, 140 ಕಿ.ಮೀ. ವ್ಯಾಪ್ತಿಯ ಉತ್ತರ ಕನ್ನಡದ ಕಡಲು ಸಹಸ್ರಾರು ಅಪರೂಪದ ಜೀವಿಗಳ ವಾಸಸ್ಥಾನ. ಅದರಲ್ಲೂ ಈ ಭಾಗದಲ್ಲಿ ಅಳಿನಂಚಿನಲ್ಲಿರುವ ಆಲಿವ್ ರಿಡ್ಲೇ ಕಡಲಾಮೆಗಳು ನೂರಾರು ಸಂಖ್ಯೆಯಲ್ಲಿ ಮೊಟ್ಟೆಗಳನ್ನಿಟ್ಟು ತೆರಳಿರುವುದು ಇದೀಗ ಜಿಲ್ಲೆಯ ಕಡಲತೀರಕ್ಕೆ ಇನ್ನಷ್ಟು ಪ್ರಾಮುಖ್ಯತೆ ದೊರಕಿಸಿಕೊಟ್ಟಿದೆ. ಜನವರಿಯಿಂದ ಮಾರ್ಚ್ ತಿಂಗಳು ಈ ಆಮೆಗಳ ಸಂತಾನೋತ್ಪತ್ತಿ ಕಾಲವಾಗಿದ್ದು, ಕಾರವಾರದ ದೇವಬಾಗ, ಅಂಕೋಲಾದ ಕೇಣಿ ಕಡಲತೀರದಲ್ಲಿ 250ಕ್ಕೂ ಅಧಿಕ ಮೊಟ್ಟೆಗಳು ಪತ್ತೆಯಾಗಿವೆ.

ಆಮೆಗಳಿಗೆ, ಜೊತೆಗೆ ಆಮೆಗಳ ಮೊಟ್ಟೆಗಳಿಗೆ, ಅದರಲ್ಲೂ ಅಪರೂಪದ ಈ ಆಲಿವ್ ರಿಡ್ಲೇಗಳಿಗೆ ಹೊರ ರಾಜ್ಯಗಳಲ್ಲಿ, ವಿದೇಶಗಳಲ್ಲಿ ಭಾರೀ ಬೇಡಿಕೆಯಿದೆ. ಈ ಆಮೆ ಮೊಟ್ಟೆಗಳನ್ನು ತಿನ್ನುವ ಜನಾಂಗವೂ ಒಂದಿದೆ. ಹೀಗಾಗಿ ಅಂಥವರಿಂದ ಈ ಆಮೆಗಳನ್ನು ಸಂರಕ್ಷಿಸುವುದಕ್ಕಾಗಿ, ಅಳಿವಿನಂಚಿನಲ್ಲಿರುವ ಈ ಪ್ರಭೇದದ ಉಳಿವಿಗಾಗಿ ಶ್ರಮಿಸಲೆಂದೇ ಅರಣ್ಯ ಇಲಾಖೆ ಕರಾವಳಿ ಮತ್ತು ಕಡಲು ಪರಿಸರ ವಿಭಾಗವನ್ನ ಸ್ಥಾಪಿಸಿದೆ. ಈ ವಿಭಾಗದ ಆರ್‌ಎಫ್‌ಒ ಪ್ರಮೋದ್ ಅವರ ನೇತೃತ್ವದ ತಂಡ ಮೀನುಗಾರರ ಸಹಕಾರದೊಂದಿಗೆ ಈ ಮೊಟ್ಟೆಗಳನ್ನು ಸಂರಕ್ಷಿಸಿ, ದಿನವಿಡೀ ಕಾಯುವ ಕಾರ್ಯ ನಡೆಸುತ್ತಿದೆ.

Tortoise Eggs

ಹುಣ್ಣಿಮೆ, ಬೆಳಕಿರುವ ಸಮಯದಲ್ಲಿ ಮೊಟ್ಟೆಗಳನ್ನಿಡುವ ಈ ಆಮೆಗಳು, ಅವುಗಳ ರಕ್ಷಣೆಯ ಜವಾಬ್ದಾರಿಯನ್ನೂ ತಾನೇ ವಹಿಸಿಕೊಂಡಿರುತ್ತದೆ. ಮೊಟ್ಟೆಗಳನ್ನಿಟ್ಟು ಹೋಗುವಾಗ ಮೊಟ್ಟೆಗಳಿರುವ ಜಾಗ ಗೊತ್ತಾಗದಂತೆ ತಾನು ಬಂದ ದಾರಿಯನ್ನೂ ಅಳಿಸಿ ತೆರಳುತ್ತವೆ. ಆದರೂ ಅರಣ್ಯ ಇಲಾಖೆ ಈ ಆಮೆಗಳ ಗೂಡುಗಳನ್ನ ಪತ್ತೆ ಮಾಡಿವೆ. ಅಳಿವಿನಂಚಿನಲ್ಲಿರುವ ಇವುಗಳ ಸಂರಕ್ಷಣೆ ಕೇವಲ ಇಲಾಖೆಯದ್ದಷ್ಟೇ ಅಲ್ಲ, ಸಾರ್ವಜನಿಕರದ್ದೂ ಕೂಡ ಆಗಿದೆ. ಹೀಗಾಗಿ ಸಾರ್ವಜನಿಕರು ಮೊಟ್ಟೆಗಳನ್ನು ಸುರಕ್ಷಿತವಾಗಿ ಪತ್ತೆ ಮಾಡಿಕೊಟ್ಟಲ್ಲಿ ಅರಣ್ಯ ಇಲಾಖೆ ಸಾವಿರ ರೂಪಾಯಿ ನಗದು ಬಹುಮಾನವನ್ನೂ ಘೋಷಿಸಿದೆ. ಅದೇನೆ ಇರಲಿ, ಈ ಮೊಟ್ಟೆಗಳಿಂದ ಮರಿ ಹೊರ ಬರಲು ಇನ್ನೂ ಒಂದು ತಿಂಗಳು ಕಾಯಬೇಕಿದ್ದು, ಸುರಕ್ಷಿತವಾಗಿ ಎಷ್ಟು ಆಮೆಗಳ ಜನನವಾಗಲಿದೆ ಎಂಬುದನ್ನ ಕಾದುನೋಡಬೇಕಿದೆ.

ವಿಶೇಷ ವರಿದ: ವಿನಾಯಕ್ ಬಡಿಗೇರ್, ಟಿವಿ9 ಕನ್ನಡ

ಇದನ್ನೂ ಓದಿ: ಸಮುದ್ರದಲ್ಲಿ ಸ್ಫೋಟಗೊಂಡ ಜ್ವಾಲಾಮುಖಿ: 20 ಕಿಮೀಗಳಷ್ಟು ದೂರ ಹರಡಿದ ಅನಿಲ

ಇದನ್ನೂ ಓದಿ: Nusantara ಸಮುದ್ರ ಪಾಲಾದ ಜಕಾರ್ತಾ: ನುಸಂತರಾ ಈಗ ಇಂಡೋನೇಷ್ಯಾದ ಹೊಸ ರಾಜಧಾನಿ

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ