Sign In

By signing in or creating an account, you agree with Associated Broadcasting Company's Terms & Conditions and Privacy Policy.

Biporjoy Cyclone: ಜೋರಾದ ಚಂಡಮಾರುತ ಅಬ್ಬರ: ಕಾರವಾರ ಕಡಲತೀರದಲ್ಲಿ ತೀವ್ರವಾದ ಕಡಲ್ಕೊರೆತ

ಅರಬ್ಬೀ ಸಮುದ್ರದಲ್ಲಿ ಬಿಪೋರ್‌ಜಾಯ್ ಚಂಡಮಾರುತ ಅಬ್ಬರ ಜೋರಾದ ಹಿನ್ನೆಲೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಸಮುದ್ರದಲ್ಲಿ ಕಡಲ್ಕೊರೆತ ಉಂಟಾಗಿದೆ.

Biporjoy Cyclone: ಜೋರಾದ ಚಂಡಮಾರುತ ಅಬ್ಬರ: ಕಾರವಾರ ಕಡಲತೀರದಲ್ಲಿ ತೀವ್ರವಾದ ಕಡಲ್ಕೊರೆತ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Jun 12, 2023 | 9:51 AM

ಕಾರವಾರ: ಅರಬ್ಬೀ ಸಮುದ್ರದಲ್ಲಿ ಬಿಪೋರ್‌ಜಾಯ್ ಚಂಡಮಾರುತ (Biporjoy Cyclone) ಅಬ್ಬರ ಜೋರಾದ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ (Uttar Kannada) ರವೀಂದ್ರನಾಥ ಟ್ಯಾಗೋರ್ ಬೀಚ್​​  (Rabindranath Tagore Beach) ಕಡಲ್ಕೊರೆತ (Sea Erosion) ಉಂಟಾಗಿದೆ. ಗಾಳಿಯ ರಭಸಕ್ಕೆ 3 ರಿಂದ 4 ಮೀಟರ್ ಎತ್ತರದಷ್ಟು ಅಲೆಗಳು ಏಳುತ್ತಿದ್ದು, ಕಡಲತೀರಕ್ಕೆ ಅಪ್ಪಳಿಸುತ್ತಿವೆ. ಅಲೆಗಳ ಹೊಡೆತಕ್ಕೆ ತೀರಪ್ರದೇಶದ ಮರಳು ಕೊಚ್ಚಿ ಹೋಗುತ್ತಿದೆ. ಚಂಡಮಾರುತದಿಂದ ಅರಬ್ಬೀ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಇನ್ನು ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಇನ್ನು ಚಂಡಮಾರುತ ಪರಿಣಾಮ ಕರಾವಳಿಯಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಕಡಲಕೊರೆತ ಹಿನ್ನಲೆ ಮೀನುಗಾರರು ದೋಣಿಗಳನ್ನ ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ಅಲೆಗಳ ಹೊಡೆತಕ್ಕೆ ಬೋಟ್‌ಗಳು ಸಿಲುಕದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಜಿಲ್ಲಾಡಳಿತ ಕಡಲತೀರದ ಸಮುದ್ರಕ್ಕಿಳಿಯದಂತೆ ಪ್ರವಾಸಿಗರಿಗೆ ಸೂಚಿಸಿದೆ.

ಇದನ್ನೂ ಓದಿ: Karnataka News Highlights: ಬಿಪರ್​​ಜಾಯ್​​ ಚಂಡಮಾರುತ ಅಬ್ಬರ, ಧರೆಗುರುಳಿದ ತೆಂಗಿನಮರ

ಚಂಡಮಾರುತದ ತೀವ್ರತೆ ತುಸು ಕಂಡು ಬರಲಿದೆ. ಕೆಲವೊಮ್ಮೆ ಗಾಳಿಯ ವೇಳೆಗೆ ಗಾಳಿಯ ವೇಗ 55 ಕಿಲೋ ಮೀಟರ್‌ ನಷ್ಟಕ್ಕೆ ಬದಲಾಗುವ ಸಾಧ್ಯತೆ ಯೂ ಇದೆ. ಆದ್ದರಿಂದ ರಾಜ್ಯದ ಕರಾವಳಿಯ ಮೀನುಗಾರರು ಮೀನುಗಾರಿಕೆಗೆ ಇಳಿಯದಂತೆ ಐಎಂಡಿ ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಜಿಲ್ಲೆಗಳಲ್ಲಿ ಅತಿ ಹಗುರದಿಂದ ಕೆಲವೊಮ್ಮೆ ಲಘು ಮಳೆಯಾಗಲಿದೆ.

ಬಿಪರ್‌ಜಾಯ್ ಚಂಡಮಾರುತವು ತೀವ್ರತೆ ಪಡೆದುಕೊಂಡಿದೆ. ಆದರೆ ಕರ್ನಾಟಕದಲ್ಲಿ ಅದರ ಪ್ರಭಾವ ಅಷ್ಟಾಗಿ ಇರುವುದಿಲ್ಲ, ಬದಲಾಗಿ ಗುಜರಾತ್‌, ಪಾಕಿಸ್ತಾನ ಕರಾವಳಿ ಭಾಗದತ್ತ ಸಾಗಿದೆ. ಗಾಳಿ ತೀವ್ರತೆ ಹೆಚ್ಚಿಸಿಕೊಂಡಿರುವ ಸೈಕ್ಲೋನ್ ಆ ಭಾಗದಲ್ಲಿ ಅಧಿಕ ಹಾನಿ ಉಂಟು ಮಾಡುವ ನಿರೀಕ್ಷೆ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಜೂನ್ 15ರವರೆಗೆ ಈ ಚಂಡಮಾರುತದ ಅಬ್ಬರ ಕಂಡು ಬರಲಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗಬ್ಬೂರು, ಗೋಕರ್ಣ, ಅಂಕೋಲಾ, ಕುಂದಾಪುರ, ಕೋಟ, ಮಂಕಿ, ಭಾಲ್ಕಿ, ಮಂಗಳೂರು, ಸಿದ್ದಾಪುರ, ಕ್ಯಾಸಲ್ ರಾಕ್, ಕದ್ರಾ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಯಲ್ಲಾಪುರ, ಕುಮಟಾ, ಶಿರಾಲಿ, ಉಪ್ಪಿನಂಗಡಿ, ಭಾಗಮಂಡಲ, ಶಿರಹಟ್ಟಿ, ಗಂಗಾವತಿ, ಚಿಂಚೋಳಿ, ಕುಕನೂರು, ಕಾರವಾರ, ಶಿಗ್ಗಾಂವ್, ಮುಂಡರಗಿ, ಧಾರವಾಡ, ಬರಗೂರು, ಕೊಟ್ಟಿಗೆಹಾರ, ಹುಂಚದಕಟ್ಟೆ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 am, Mon, 12 June 23

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ