AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಹಿಂದೂ ಸಮಾಜದ ಪೂಜನೀಯ ಕೊಕ್ತಿ ಕೆರೆಗೆ ಹರಿದು ಬಂತು ರಕ್ತ ಮಿಶ್ರಿತ ನೀರು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿರುವ ಹಿಂದೂ ಸಮಾಜದ ಪೂಜ್ಯನೀಯ ಕೊಕ್ತಿ ಕೆರೆಗೆ ರಕ್ತ ಮಿಶ್ರಿತ ನೀರು ಹರಿದು ಬಂದಿದೆ. ಈ ಘಟನೆಯ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಗೊಂಡು ಆಕ್ರೋಶ ಹೊರಹಾಕಿದರು.

ಉತ್ತರ ಕನ್ನಡ: ಹಿಂದೂ ಸಮಾಜದ ಪೂಜನೀಯ ಕೊಕ್ತಿ ಕೆರೆಗೆ ಹರಿದು ಬಂತು ರಕ್ತ ಮಿಶ್ರಿತ ನೀರು
ರಕ್ತ ಮಿಶ್ರಿತ ನೀರು
ಸೂರಜ್​, ಮಹಾವೀರ್​ ಉತ್ತರೆ
| Edited By: ವಿವೇಕ ಬಿರಾದಾರ|

Updated on: Jun 19, 2024 | 8:10 AM

Share

ಕಾರವಾರ, ಜೂನ್​ 19: ಹಿಂದೂ (Hindu) ಸಮಾಜದ ಪೂಜ್ಯನೀಯ ಕೊಕ್ತಿ ಕೆರೆಗೆ (Kokti Lake) ರಕ್ತ ಮಿಶ್ರಿತ ನೀರು ಹರಿದು ಬಂದಿರುವ ಘಟನೆ ಭಟ್ಕಳ (Bhatkal) ಪಟ್ಟಣದಲ್ಲಿ ನಡೆದಿದೆ. ಬಕ್ರಿದ್ ಹಬ್ಬ ಹಿನ್ನೆಲೆಯಲ್ಲಿ ಪ್ರಾಣಿ ವಧೆ ಮಾಡಿ ರಕ್ತವನ್ನು ಇನ್ನೂ ಸಂಪೂರ್ಣಗೊಳ್ಳದ ಚರಂಡಿಗೆ ಹರಿಬಿಟ್ಟರುವ ಶಂಕೆ ವ್ಯಕ್ತವಾಗಿದೆ. ಚರಂಡಿ ನೀರು ಕೆರೆಯಲ್ಲಿ ಮಿಶ್ರಿತವಾಗಿದೆ. ಬಂದರ್​ ರೋಡ್​ ಎರಡನೇ ಕ್ರಾಸ್​ ಕೋಕ್ತಿ ನಗರದ ಅಕ್ಕಪಕ್ಕದ ಮನೆಗಳಿಂದಲೇ ಜಾನುವಾರು, ಕುರಿಯ ರಕ್ತ ಚರಂಡಿಯಲ್ಲಿ ನೀರಿನಂತೆ ಹರಿದಿದೆ. ಬಂದರ ರಸ್ತೆಯಲ್ಲಿ ಕೋಕ್ತಿ ನಗರದ ಅಕ್ಕಪಕ್ಕದ ಇನ್ನೂ ಚರಂಡಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಅದನ್ನು ಸಾರ್ವಜನಿಕರಿಗೆ ಬಳಸಲು ಅನುವು ಮಾಡಿಕೊಟ್ಟಿಲ್ಲ.

ಆದರೆ, ಯಾವುದೊ ಮನೆಯವರೂ ಪ್ರಾಣಿ ವಧೆ ಮಾಡಿ ರಕ್ತವನ್ನು ಚರಂಡಿಯಲ್ಲಿ ಹರಿ ಬಿಟ್ಟಿದ್ದು, ಇದರಿಂದ ಮಳೆ ನೀರಿನೊಂದಿಗೆ ರಕ್ತವೂ ಕೋಕ್ತಿ ಕೆರೆ ಸೇರಿದೆ. ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಿಸಿದ ಕೆರೆಗೆ ರಕ್ತ ಮಿಶ್ರಿತ ನೀರು ಸೇರಿಕೊಂಡಿದ್ದನ್ನು ಕಂಡು ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಅಬ್ದುಲ್​ ಸುಕ್ಕೂರ್ ಎನ್ಐಎ ವಶಕ್ಕೆ

ಈ ಘಟನೆಯ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಗೊಂಡಿದ್ದಾರೆ. ಹಿಂದೂ ಸಮುದಾಯದ ವಿಶೇಷವಾಗಿ ಗೊಂಡ ಸಮುದಾಯವರು ಪೂಜ್ಯ ಭಾವನೆಯಿಂದ ನೋಡುವ ಕೆರೆ ಮಲೀನಗೊಂಡಿರುವುದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪುರಸಭೆಯ ಅಧಿಕಾರಿಗಳು, ಒಳಚರಂಡಿ ಇಲಾಖೆ ಅಧಿಕಾರಿಗಳು ಮೊದಲು ರಕ್ತ ಮಿಶ್ರಿತ ನೀರು ಕೆರೆಗೆ ಹರಿಯುವುದನ್ನು ತಪ್ಪಿಸಿದ್ದಾರೆ. ಬಳಿಕ ಚರಂಡಿಯಲ್ಲಿ ಜಮಾಗೊಂಡ ರಕ್ತದ ನೀರನ್ನು ಟ್ಯಾಂಕರ್​ ಮೂಲಕ ಬೇರೆಡೆಗೆ ಸಾಗಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸೂರಜ್​, ಮಹಾವೀರ್​ ಉತ್ತರೆ
ಸೂರಜ್​, ಮಹಾವೀರ್​ ಉತ್ತರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!