AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಹಿಂದೂ ಸಮಾಜದ ಪೂಜನೀಯ ಕೊಕ್ತಿ ಕೆರೆಗೆ ಹರಿದು ಬಂತು ರಕ್ತ ಮಿಶ್ರಿತ ನೀರು

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿರುವ ಹಿಂದೂ ಸಮಾಜದ ಪೂಜ್ಯನೀಯ ಕೊಕ್ತಿ ಕೆರೆಗೆ ರಕ್ತ ಮಿಶ್ರಿತ ನೀರು ಹರಿದು ಬಂದಿದೆ. ಈ ಘಟನೆಯ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಗೊಂಡು ಆಕ್ರೋಶ ಹೊರಹಾಕಿದರು.

ಉತ್ತರ ಕನ್ನಡ: ಹಿಂದೂ ಸಮಾಜದ ಪೂಜನೀಯ ಕೊಕ್ತಿ ಕೆರೆಗೆ ಹರಿದು ಬಂತು ರಕ್ತ ಮಿಶ್ರಿತ ನೀರು
ರಕ್ತ ಮಿಶ್ರಿತ ನೀರು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jun 19, 2024 | 8:10 AM

Share

ಕಾರವಾರ, ಜೂನ್​ 19: ಹಿಂದೂ (Hindu) ಸಮಾಜದ ಪೂಜ್ಯನೀಯ ಕೊಕ್ತಿ ಕೆರೆಗೆ (Kokti Lake) ರಕ್ತ ಮಿಶ್ರಿತ ನೀರು ಹರಿದು ಬಂದಿರುವ ಘಟನೆ ಭಟ್ಕಳ (Bhatkal) ಪಟ್ಟಣದಲ್ಲಿ ನಡೆದಿದೆ. ಬಕ್ರಿದ್ ಹಬ್ಬ ಹಿನ್ನೆಲೆಯಲ್ಲಿ ಪ್ರಾಣಿ ವಧೆ ಮಾಡಿ ರಕ್ತವನ್ನು ಇನ್ನೂ ಸಂಪೂರ್ಣಗೊಳ್ಳದ ಚರಂಡಿಗೆ ಹರಿಬಿಟ್ಟರುವ ಶಂಕೆ ವ್ಯಕ್ತವಾಗಿದೆ. ಚರಂಡಿ ನೀರು ಕೆರೆಯಲ್ಲಿ ಮಿಶ್ರಿತವಾಗಿದೆ. ಬಂದರ್​ ರೋಡ್​ ಎರಡನೇ ಕ್ರಾಸ್​ ಕೋಕ್ತಿ ನಗರದ ಅಕ್ಕಪಕ್ಕದ ಮನೆಗಳಿಂದಲೇ ಜಾನುವಾರು, ಕುರಿಯ ರಕ್ತ ಚರಂಡಿಯಲ್ಲಿ ನೀರಿನಂತೆ ಹರಿದಿದೆ. ಬಂದರ ರಸ್ತೆಯಲ್ಲಿ ಕೋಕ್ತಿ ನಗರದ ಅಕ್ಕಪಕ್ಕದ ಇನ್ನೂ ಚರಂಡಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಅದನ್ನು ಸಾರ್ವಜನಿಕರಿಗೆ ಬಳಸಲು ಅನುವು ಮಾಡಿಕೊಟ್ಟಿಲ್ಲ.

ಆದರೆ, ಯಾವುದೊ ಮನೆಯವರೂ ಪ್ರಾಣಿ ವಧೆ ಮಾಡಿ ರಕ್ತವನ್ನು ಚರಂಡಿಯಲ್ಲಿ ಹರಿ ಬಿಟ್ಟಿದ್ದು, ಇದರಿಂದ ಮಳೆ ನೀರಿನೊಂದಿಗೆ ರಕ್ತವೂ ಕೋಕ್ತಿ ಕೆರೆ ಸೇರಿದೆ. ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಿಸಿದ ಕೆರೆಗೆ ರಕ್ತ ಮಿಶ್ರಿತ ನೀರು ಸೇರಿಕೊಂಡಿದ್ದನ್ನು ಕಂಡು ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಅಬ್ದುಲ್​ ಸುಕ್ಕೂರ್ ಎನ್ಐಎ ವಶಕ್ಕೆ

ಈ ಘಟನೆಯ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಗೊಂಡಿದ್ದಾರೆ. ಹಿಂದೂ ಸಮುದಾಯದ ವಿಶೇಷವಾಗಿ ಗೊಂಡ ಸಮುದಾಯವರು ಪೂಜ್ಯ ಭಾವನೆಯಿಂದ ನೋಡುವ ಕೆರೆ ಮಲೀನಗೊಂಡಿರುವುದು ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪುರಸಭೆಯ ಅಧಿಕಾರಿಗಳು, ಒಳಚರಂಡಿ ಇಲಾಖೆ ಅಧಿಕಾರಿಗಳು ಮೊದಲು ರಕ್ತ ಮಿಶ್ರಿತ ನೀರು ಕೆರೆಗೆ ಹರಿಯುವುದನ್ನು ತಪ್ಪಿಸಿದ್ದಾರೆ. ಬಳಿಕ ಚರಂಡಿಯಲ್ಲಿ ಜಮಾಗೊಂಡ ರಕ್ತದ ನೀರನ್ನು ಟ್ಯಾಂಕರ್​ ಮೂಲಕ ಬೇರೆಡೆಗೆ ಸಾಗಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ