AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

River Rafting: ಕಾಳಿ ನದಿಯಲ್ಲಿ ಬೋಟ್​ ಮುಳುಗಡೆ, ಮಕ್ಕಳು ಸೇರಿ 12 ಪ್ರವಾಸಿಗರು ಗ್ರೇಟ್​ ಎಸ್ಕೇಪ್​- ವಿಡಿಯೋ ಇದೆ

ಬೋಟ್​ ಬಾರ ಹೆಚ್ಚಾಗಿ ಮುಳುಗುವ ಹಂತ ತಲುಪಿದ್ದು, ನೀರಿನಲ್ಲಿ ಬಿದ್ದಿದ್ದ ಮಕ್ಕಳು ಸೇರಿ 12 ಜನ ಪ್ರವಾಸಿಗರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ. ಪ್ರವಾಸಿಗರು ಲೈಫ್ ಜಾಕೇಟ್ ಹಾಕಿದ ಪರಿಣಾಮ ಅನಾಹುತ ತಪ್ಪಿದೆ. ಘಟನೆ ಸಂಬಂಧ ಜೋಯಿಡಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ. 

River Rafting: ಕಾಳಿ ನದಿಯಲ್ಲಿ ಬೋಟ್​ ಮುಳುಗಡೆ, ಮಕ್ಕಳು ಸೇರಿ 12 ಪ್ರವಾಸಿಗರು ಗ್ರೇಟ್​ ಎಸ್ಕೇಪ್​- ವಿಡಿಯೋ ಇದೆ
ಮಕ್ಕಳು ಸೇರಿ12 ಜನ ಪ್ರವಾಸಿಗರ ರಕ್ಷಣೆ
TV9 Web
| Edited By: |

Updated on:Apr 15, 2022 | 4:45 PM

Share

ಕಾರವಾರ: ನಿಗದಿ ಪ್ರಮಾಣಕ್ಕಿಂತ ಹೆಚ್ಚಿನ ಜನರನ್ನು ರಿವರ್ ರ್ಯಾಪ್ಟಿಂಗ್ (River Rafting) ಬೋಟ್​ನಲ್ಲಿ ಕುಳ್ಳಿರಿಸಿ ರ್ಯಾಪ್ಟಿಂಗ್ ಮಾಡಿದ ಪರಿಣಾಮ ನದಿಯಲ್ಲಿ ಬೋಟ್ ಮುಳುಗುವ ಹಂತ ತಲುಪಿ ಮಕ್ಕಳು ಸೇರಿದಂತೆ 12 ಜನ ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶಗುಡಿಯ ಕಾಳಿ ನದಿಯಲ್ಲಿ ನಡೆದಿದೆ. ರಬ್ಬರ್ ಬೋಟ್​ನಲ್ಲಿ ಆರು ಜನಕ್ಕಿಂತ ಹೆಚ್ಚು ಜನರನ್ನು ಹಾಕಿ ರಿವರ್ ರ್ಯಾಪ್ಟಿಂಗ್ ಮಾಡುವಂತಿಲ್ಲ. ಆದರೆ ಖಾಸಗಿ ಆಯೋಜಕರು ಅನುಮತಿ ಇಲ್ಲದೇ 12 ಜನ ಪ್ರವಾಸಿಗರನ್ನು ಬೋಟ್​ನಲ್ಲಿ ರ್ಯಾಪ್ಟಿಂಗ್​ಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಬೋಟ್​ ಬಾರ ಹೆಚ್ಚಾಗಿ ಮುಳುಗುವ ಹಂತ ತಲುಪಿದ್ದು, ನೀರಿನಲ್ಲಿ ಬಿದ್ದಿದ್ದ ಮಕ್ಕಳು ಸೇರಿ 12 ಜನರು ಕೊಚ್ಚಿ ಹೋಗುವ ಮುನ್ನ ಕೂದಲೆಳೆ ಅಂತರದಲ್ಲಿ ಪ್ರವಾಸಿಗರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ. ಪ್ರವಾಸಿಗರು ಲೈಫ್ ಜಾಕೇಟ್ ಹಾಕಿದ ಪರಿಣಾಮ ಅನಾಹುತ ತಪ್ಪಿದೆ. ಘಟನೆ ಸಂಬಂಧ ಜೋಯಿಡಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಲ್ಲಿನ ನಡುವೆ ಸಿಲುಕಿಕೊಂಡಿದ್ದ ಟ್ಯೂಬ್ ಬೋಟ್‌ನಿಂದ ಪ್ರಯಾಣಿಕರನ್ನು ಹರಸಾಹಸಪಟ್ಟು ಸಿಬ್ಬಂದಿ ಹೊರಗೆಳೆದಿದ್ದು, ರಕ್ಷಣೆಯ ವೇಳೆ ನೀರು ಕುಡಿದು ಯುವತಿ ಅಸ್ವಸ್ಥಳಾಗಿದ್ದಾಳೆ. ಕುಟುಂಬ ಹಾಗೂ ಗೆಳೆಯರ ಜತೆ ಹೆಚ್ಚಾಗಿ ದಾಂಡೇಲಿ ಹಾಗೂ ಜೊಯಿಡಾ ಭಾಗಕ್ಕೆ ಪ್ರಯಾಣಿಕರು ಭೇಟಿ ನೀಡುತ್ತಾರೆ. ಆದರೆ, ರ್ಯಾಫ್ಟಿಂಗ್ ನಡೆಸುವ ಖಾಸಗಿ ಸಂಸ್ಥೆಗಳ ದುರಾಸೆಗೆ ಜನರು ಜೀವ ಭೀತಿ ಎದುರಿಸುವಂತ್ತಾಗಿದೆ. ಈ ಹಿಂದೆ ಕೂಡಾ ಖಾಸಗಿ ಟೂರ್ ಆಪರೇಟರ್ಸ್ ಲೈಫ್ ಜಾಕೆಟ್ ಇಲ್ಲದೇ ರ್ಯಾಫ್ಟಿಂಗ್ ಮಾಡಿಸಿದ್ದರು. ಆದರೆ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹರಿದಾಡಿದ ಬಳಿಕ ಜಿಲ್ಲಾಡಳಿತ ಇವರ ಮೇಲೆ ಕ್ರಮ ಕೈಗೊಂಡಿತ್ತು.

ಇದನ್ನೂ ಓದಿ:

West Bengal Gang Rape: ಹನ್ಸ್​ಖಾಲಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ನಾಯಕರ ಒತ್ತಾಯ

IPL 2022 MI vs LSG Live Streaming: ಗೆಲ್ಲಲೇಬೇಕಾದ ಒತ್ತಡದಲ್ಲಿ ಮುಂಬೈ; ಪಂದ್ಯದ ಬಗೆಗಿನ ಪೂರ್ಣ ಮಾಹಿತಿ

Published On - 4:22 pm, Fri, 15 April 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?