AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊಳ್ಳೆನಾಶಕ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಸಾವು

ಮನೆಯ ನೆಲದ ಮೇಲೆ ಇಟ್ಟಿದ್ದ ಸೊಳ್ಳೆನಾಶಕ ಲಿಕ್ವಿಡ್ ಕುಡಿದ ಮಗು ಅಸ್ವಸ್ಥವಾಯಿತು. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಯಲಿಲ್ಲ.

ಸೊಳ್ಳೆನಾಶಕ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಸಾವು
ಮೃತ ಮಗು
TV9 Web
| Edited By: |

Updated on:Aug 19, 2022 | 2:13 PM

Share

ಕಾರವಾರ: ಸೊಳ್ಳೆಗಳನ್ನು ದೂರ ಇಡಲೆಂದು ಬಳಸುವ ‘ಗುಡ್​ನೈಟ್’ ದ್ರವ ಕುಡಿದು ಎರಡು ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲ್ಲೂಕು ಕಾವೂರಿನಲ್ಲಿ ಶುಕ್ರವಾರ ನಡೆದಿದೆ. ಆರವ್ ಮಹೇಶ್ ಮೃತ ಮಗು. ಮನೆಯ ನೆಲದ ಮೇಲೆ ಇಟ್ಟಿದ್ದ ಲಿಕ್ವಿಡ್ ಕುಡಿದ ಮಗು ಅಸ್ವಸ್ಥವಾಯಿತು. ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಯಲಿಲ್ಲ ಎಂದು ಪೋಷಕರು ತಿಳಿಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷ ಕಾರು ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ತೆರಳುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿಯಾದ ಹಿನ್ನೆಲೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರದಿಂದ ಚಿಂತಾಮಣಿ ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಪಾತಪಲ್ಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಪಾತಪಲ್ಲಿ ಗ್ರಾಮದ 50 ವರ್ಷದ ರಾಜಣ್ಣ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಕೋಲಾರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿರುವ ಡಾಕ್ಟರ್ ವೇಣುಗೋಪಾಲ್ ಅವರು ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಧಿಕೃತ ಅಭ್ಯರ್ಥಿ ಸಹ ಆಗಿದ್ರು. ಅಪಘಾತಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರು ಕಾರು ಅತಿವೇಗವಾಗಿ ಚಲಿಸುತ್ತಿದದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಘಟನೆ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:13 pm, Fri, 19 August 22

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು