AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳ: ಕಸದ ಬುಟ್ಟಿ ಬಕೆಟ್ ಖರೀದಿಯಲ್ಲೂ ಗೋಲ್​ಮಾಲ್​! ನೂರಿನ್ನೂರು ರೂ ಬಕೆಟ್ 950ಕ್ಕೆ ಖರೀದಿ ಮಾಡಿದ ಗ್ರಾಮ ಪಂಚಾಯತ್

ಇದು ಕೇವಲ ಶಿರಾಲಿ ಹಾಗೂ ಮಾರುಕೇರಿ ಭಾಗದಲ್ಲಿ ಮಾತ್ರವಲ್ಲದೇ ಜಿಲ್ಲೆಯ ಇತರೇ ಪಂಚಾಯತ್ ಗಳಲ್ಲೂ ಅಧಿಕ ಬೆಲೆಗೆ ಈ ರೀತಿ ಬಕೆಟ್ ಖರೀದಿ ಮಾಡಿ ಭ್ರಷ್ಟಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ.

ಭಟ್ಕಳ: ಕಸದ ಬುಟ್ಟಿ ಬಕೆಟ್ ಖರೀದಿಯಲ್ಲೂ ಗೋಲ್​ಮಾಲ್​! ನೂರಿನ್ನೂರು ರೂ ಬಕೆಟ್ 950ಕ್ಕೆ ಖರೀದಿ ಮಾಡಿದ ಗ್ರಾಮ ಪಂಚಾಯತ್
ಭಟ್ಕಳ: ಕಸದ ಬುಟ್ಟಿ ಬಕೆಟ್ ಖರೀದಿಯಲ್ಲೂ ಗೋಲ್​ಮಾಲ್​!
TV9 Web
| Edited By: |

Updated on: Dec 09, 2022 | 12:44 PM

Share

ಭ್ರಷ್ಟಾಚಾರ ಅನ್ನೋದು ಇತ್ತೀಚೆಗೆ ಹೆಚ್ಚಾಗಿಯೇ ಆಗುತ್ತಿದೆ. ಕಾಮಗಾರಿಗಳಲ್ಲಿ, ಬಿಲ್ ಮಂಜೂರಿ ಮಾಡಿಕೊಳ್ಳಬೇಕಾದರೆ ಭ್ರಷ್ಟಾಚಾರ ಸಾಮಾನ್ಯ. ಆದರೆ ಸ್ವಚ್ಛ ಗ್ರಾಮದ ಯೋಜನೆಯಡಿ ಜನರಿಗೆ ನೀಡಲು ಖರೀದಿಸಿದ ಬಕೆಟ್ ಗಳಲ್ಲಿಯೇ ಭ್ರಷ್ಟಾಚಾರ ನಡೆದಿರುವ ಆರೋಪ ಇದೀಗ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿ ಬಂದಿದೆ. ಮಾರುಕಟ್ಟೆಯಲ್ಲಿ 100, 200 ರೂಪಾಯಿಗೆ ಸಿಗುವ ಬಕೆಟ್ ಅನ್ನ 950 ರೂಪಾಯಿಗೆ ಖರೀದಿ ಮಾಡುವ ಮೂಲಕ ಲಕ್ಷಾಂತರ ರೂಪಾಯಿಯನ್ನು ತಮ್ಮ ಜೇಬಿಗಿಳಿಸಿದ್ದಾರೆನ್ನುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.

ಹೌದು ಭ್ರಷ್ಟಾಚಾರ ತಡೆಗೆ ನಾನಾ ಪ್ರಯತ್ನ ಮಾಡಿದರೂ ಹಣ ಲಪಟಾಯಿಸುವ ನೌಕರರು ಮಾತ್ರ ತಮ್ಮ ಭ್ರಷ್ಟಾಚಾರವನ್ನ ಮಾತ್ರ ನಿಲ್ಲಿಸುವುದಿಲ್ಲ. ಸ್ವಚ್ಛ ಗ್ರಾಮ ಯೋಜನೆಯಡಿ ಜನರಿಗೆ ಕೊಡುವ ಬಕೆಟ್ ನಲ್ಲೇ ಭ್ರಷ್ಟಾಚಾರ (Bucket Golmaal) ನಡೆದಿರುವ ಆರೋಪ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ (Bhatkal Taluk) ಕೇಳಿ ಬಂದಿದೆ. ತಾಲೂಕಿನ ಮಾರುಕೇರಿ ಹಾಗೂ ಶಿರಾಲಿ ಗ್ರಾಮ ಪಂಚಾಯತದಲ್ಲಿ (Gram Panchayat) ಅತ್ಯಧಿಕ ಬೆಲೆ ನೀಡಿ ಲಕ್ಷಾಂತರ ರೂ. ವೆಚ್ಚ ಮಾಡಿ ಬಕೆಟ್ ಖರೀದಿಸಿದ್ದಾರೆನ್ನುವ ಆರೋಪ ಕೇಳಿ ಬಂದಿದೆ.

ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛ ಗ್ರಾಮ ಯೋಜನೆಯಡಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಮನೆ ಮನೆ ಕಸ ವಿಲೇವಾರಿಗೆ ಬಳಸಲು ಬಕೆಟ್ ಆಕಾರದ ಕಸದ ಬುಟ್ಟಿ ಖರೀದಿಸಿ, ಅದನ್ನು ಆಯ್ದ ಮನೆಗಳಿಗೆ ಹಂಚಲಾಗಿದೆ.

ಹೀಗೆ ಖರೀದಿಸಲಾದ ಕಸದ ಬುಟ್ಟಿ ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಮಾರುಕಟ್ಟೆಯಲ್ಲಿ 100 ರಿಂದ 200 ರೂಪಾಯಿಗೆ ಸಿಗುವ ಬಕೆಟನ್ನ 950 ರೂಪಾಯಿ ನೀಡಿ ಖರೀದಿ ಮಾಡಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಮಾಹಿತಿ ನೀಡುತ್ತಾರೆ ಹೋಟೆಲ್ ಮಾಲಿಕ ನಾರಾಯಣ.

ಇದನ್ನೂ ಓದಿ: ಪ್ರಧಾನಿ ಕಚೇರಿ ಸೂಚನೆಗೂ ಡೋಂಟ್ ಕೇರ್: ದಾಬಸಪೇಟೆಯಿಂದ ದೇವನಹಳ್ಳಿ ಹೆದ್ದಾರಿ ನಿರ್ಮಾಣ ಅಪಘಾತಗಳ ತಾಣವಾಗುತ್ತಿದೆ!

ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ಎರಡು ಪ್ರತ್ಯೇಕ ಬಿಲ್ ಮೂಲಕ 195 ಬಕೆಟ್ ಖರೀದಿಸಿದ್ದು, ಇದಕ್ಕಾಗಿ 1,85,250 ರೂಪಾಯಿಗಳನ್ನು ವೆಚ್ಚ ಮಾಡಿದೆ. ತೆರಿಗೆ ಸೇರಿ 950 ರೂ. ದರಕ್ಕೆ ಹೊನ್ನಾವರದ ಕವಲಕ್ಕಿಯಲ್ಲಿರುವ `ಶಕ್ತಿ ಎಂಟರ್‌ಪ್ರೈಸಸ್ ಹಾಗೂ ಪವರ್ ಸೊಲ್ಯೂಶನ್’ನವರು ಈ ಬಕೆಟ್ ಗಳನ್ನು ಪೂರೈಸಿದ್ದಾರೆ. ಮಾರುಕೇರಿ ಗ್ರಾಮ ಪಂಚಾಯತದಲ್ಲಿ ಸಹ ಇದಕ್ಕೆ ಪೈಪೋಟಿ ನೀಡುವ ದರ ನೀಡಿ ಸುಮಾರು 101 ಬಕೆಟ್ ಖರೀದಿಸಿದೆ.

ಪಂಚಾಯತ್ ಅಧಿಕಾರಿಗಳ ಈ ರೀತಿ ಹೆಚ್ಚಿಗೆ ಹಣವನ್ನ ಕೊಟ್ಟು ಬಕೆಟ್ ಖರೀದಿ ಮಾಡಿರುವುದು ಸ್ಥಳೀಯ ಪಂಚಾಯತ್ ಸದಸ್ಯರ ಆಕ್ರೋಶಕ್ಕೆ ಸಹ ಕಾರಣವಾಗಿದೆ. ಆದರೆ ಈ ಬಗ್ಗೆ ಪಂಚಾಯತ್ ಸದಸ್ಯರುಗಳಿಗೆ ಕೇಳಿದರೆ ದುಬಾರಿ ವೆಚ್ಚದಲ್ಲಿ ಬಕೆಟ್ ಖರೀದಿ ಮಾಡಿರುವುದು ತಮಗೆ ಗೊತ್ತಿಲ್ಲ. ಹಾಗೇನಾದರು ಅವ್ಯವಹಾರ ಆಗಿದ್ದರೆ ತನಿಖೆ ನಡೆಯಲಿ ಎನ್ನುತ್ತಿದ್ದಾರೆ ಶಿರಾಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೆಂಕಟೇಶ್ ನಾಯ್ಕ.

ಇದು ಕೇವಲ ಶಿರಾಲಿ ಹಾಗೂ ಮಾರುಕೇರಿ ಭಾಗದಲ್ಲಿ ಮಾತ್ರವಲ್ಲದೇ ಜಿಲ್ಲೆಯ ಇತರೇ ಪಂಚಾಯತ್ ಗಳಲ್ಲೂ ಅಧಿಕ ಬೆಲೆಗೆ ಈ ರೀತಿ ಬಕೆಟ್ ಖರೀದಿ ಮಾಡಿ ಭ್ರಷ್ಟಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಜಿಲ್ಲಾ ಪಂಚಾಯತ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿದರೆ ಬಕೆಟ್ ಖರೀಯಲ್ಲೂ ನಡೆದಿರುವ ಅವ್ಯವಹಾರ ಹೊರಬೀಳಲಿದೆ. (ವರದಿ: ವಿನಾಯಕ ಬಡಿಗೇರ, ಟಿವಿ 9, ಕಾರವಾರ)

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?