AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ಆತನನ್ನು ಬಿಟ್ಟಿರಲಾರೆಂದು ಯುವಕನ ಮನೆ ಮುಂದೆ ಯುವತಿ ಧರಣಿ

ಪ್ರೀತಿ ಪ್ರೇಮದ ಹೆಸರಿನಲ್ಲಿ ಒಂದು ವರ್ಷದಿಂದ ಜೊತೆಗಿದ್ದ ಯುವಕ ವಿವಾಹವಾಗು ಎಂದಾಗ ಟೈಮ್​ಪಾಸ್​ ಲವ್ ಎಂದು ಕೈಕೊಟ್ಟಿರುವಂತಹ ಘಟನೆ ಜಿಲ್ಲೆಯ ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ನಡೆದಿದೆ.

ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ಆತನನ್ನು ಬಿಟ್ಟಿರಲಾರೆಂದು ಯುವಕನ ಮನೆ ಮುಂದೆ ಯುವತಿ ಧರಣಿ
ಪ್ರೀತಿಸಿ ಕೈಕೊಟ್ಟ ಯುವಕ, ಯುವತಿ ಗಿರಿಜಾ
ಗಂಗಾಧರ​ ಬ. ಸಾಬೋಜಿ
|

Updated on:May 16, 2023 | 10:05 PM

Share

ಕಾರವಾರ: ಪ್ರೀತಿ ಪ್ರೇಮದ (love) ಹೆಸರಿನಲ್ಲಿ ಒಂದು ವರ್ಷದಿಂದ ಜೊತೆಗಿದ್ದ ಯುವಕ (lover) ವಿವಾಹವಾಗು ಎಂದಾಗ ಟೈಮ್​ಪಾಸ್​ ಲವ್ ಎಂದು ಕೈಕೊಟ್ಟಿರುವಂತಹ ಘಟನೆ ಜಿಲ್ಲೆಯ ಮುಂಡಗೋಡ ತಾಲೂಕಿನ ಮೈನಳ್ಳಿಯಲ್ಲಿ ನಡೆದಿದೆ. ಹಿರೇಕೆರೂರು ತಾಲೂಕಿನ ಕಾಂಡೇಬಾಗೂರ್ ಗ್ರಾಮದ ಗಿರಿಜಾ ಪರಮೇಶ್ ಲಮಾಣಿ (19) ಎಂಬಾಕೆ ಮೋಸಗೊಳಗಾದ ಯುವತಿ. ಪ್ರಸಾದ್ ಪ್ರಕಾಶ್ ಕಲಾಲ್ ಬದಂಕರ್ (22) ಮೋಸ ಮಾಡಿದ ಯುವಕ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ತರಬೇತಿಗೆ ತೆರಳಿದ್ದಾಗ ಪರಿಚಯವಾಗಿದ್ದು, ಇಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಅಷ್ಟೇ ಅಲ್ಲದೇ ಜತೆಯಲ್ಲೇ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಒಂದೇ ರೂಂನಲ್ಲಿದ್ದರು. ಸದ್ಯ ಇವರಿಬ್ಬರ ಪ್ರೇಮ ಮದುವೆಯ ವಿಚಾರಕ್ಕೆ ಬಂದಾಗ ಟೈಮ್‌ಪಾಸ್ ಅಂತಾ ಯುವಕ ದೂರವಾಗಿದ್ದಾನೆ.

ಪ್ರೀತಿಸಿದ ಯುವಕನನ್ನು ಬಿಟ್ಟು ಇರಲಾರೆ. ಪ್ರಸಾದ್ ಜತೆ ಮದುವೆ ಮಾಡಿಸಿಕೊಡಿ ಎಂದು ಮುಂಡಗೋಡ ತಾಲೂಕಿನ ಮೈನಳ್ಳಿಗೆ ಬಂದಿದ್ದಾಳೆ. ಆತನನ್ನು ಹುಡುಕಿಕೊಂಡು ಮುಂಡಗೋಡ ಪೊಲೀಸ್ ಠಾಣೆಗೆ ತೆರಳಿದ್ದ ಗಿರಿಜಾಗೆ ಪೊಲೀಸರು ಬುದ್ಧಿವಾದ ಹೇಳಿ ವಾಪಸ್ ಕಳುಹಿಸಿದ್ದಾರೆ. ಪೊಲೀಸರಿಂದ‌ ಯಾವುದೇ ನ್ಯಾಯ ದೊರೆಯದಿದ್ದಾಗ ಯುವಕನ ಮನೆಯ ಮುಂದೆಯೇ ಯುವತಿ ಧರಣಿ ಮಾಡಿದ್ದಾಳೆ.

ಇದನ್ನೂ ಓದಿ: ಹಾರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡಿದ ಪ್ರಯಾಣಿಕ: ಕೆಂಪೇಗೌಡ ಏರ್ಪೋಟ್ ಪೊಲೀಸರಿಂದ ಬಂಧನ

ಪ್ರಸಾದ್ ನಿವಾಸದ ಎದುರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿರುವ ಗಿರಿಜಾಗೆ ಸ್ಥಳೀಯರು ಉಪಹಾರ, ಊಟ, ಮಲಗಲು ಜಾಗ ನೀಡಿದ್ದಾರೆ.

ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಗಂಡನಿಂದ ದೂರು

ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ 20 ವರ್ಷದ ವಿವಾಹಿತ ಮಹಿಳೆಗೆ ಉದ್ಯಮಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು  ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಘಟನೆ ನಡೆದಿದೆ. ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ವಿರುದ್ಧ ಮೈಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ನಾಯಿ ಜಮೀನಿಗೆ ಬಂತೆಂದು ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದಾಯಾದಿಗಳು!

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಆಕೆಯ ಗಂಡನಿಂದ ದೂರು ನೀಡಲಾಗಿದೆ. ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾರೆ. ಉದ್ಯಮಿ ತನ್ನ ಕಾರಿನಲ್ಲಿ ಕಿರುಕುಳ ನೀಡುವಾಗ ಯುವತಿ ಕಿರುಚಾಡಿ ಕಾರಿನಿಂದ ಹೊರಬಂದಿದ್ದಾರೆ.

ಬೈಕ್​ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ ಮಾಡಲಾಗಿದೆ. ತನ್ನ ಸೂಪರ್ ಮಾರ್ಕೇಟ್​ನ ಬಿಲ್ಲಿಂಗ್ ತೋರಿಸೋದಾಗಿ ಕಾರಿನಲ್ಲಿ ಕರೆದೊಯ್ದು ಕಿಡ್ನಾಪ್ ಆರೋಪ ಸಹ ಮಹಿಳೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 9:55 pm, Tue, 16 May 23

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ