AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Child marriage ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ 52ರ ಮದುಮಗನ ವಿವಾಹ, ವರ ಕಾರವಾರ ಜೈಲಿಗೆ

karwar: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಈ ಘಟನೆ ನಡೆದಿದೆ. ವಧು-ವರ ಇಬ್ಬರೂ ಕಾರವಾರ ನಗರದ ನಿವಾಸಿಗಳು.

Child marriage ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ 52ರ ಮದುಮಗನ ವಿವಾಹ, ವರ ಕಾರವಾರ ಜೈಲಿಗೆ
ಕಾರವಾರ: ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ 52ರ ಮದುಮಗನ ವಿವಾಹ Image Credit source: new indian express
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 10, 2022 | 4:11 PM

ಕಾರವಾರ: 52 ವರ್ಷ ವಯಸ್ಸಿನ ಮದುಮಗ 16ರ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ವಿವಾಹವಾಗಿದ್ದಾನೆ. ಚೋದ್ಯವೆಂದರೆ ಮದುವೆ ಆದ ಮೂರು ತಿಂಗಳ ಬಳಿಕವಷ್ಟೇ ತಿಳಿದಿದ್ದು ವಧು ಅಪ್ರಾಪ್ತೆ (Child marriage) ಎಂದು! ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ (karwar) ಈ ಘಟನೆ ನಡೆದಿದೆ. ವಧು-ವರ ಇಬ್ಬರೂ ಕಾರವಾರ ನಗರದ ನಿವಾಸಿಗಳು. ಅಂಗನವಾಡಿ ಕಾರ್ಯಕರ್ತರ (Anganwadi karyakartas) ಖಚಿತ ಮಾಹಿತಿ ಮೇರೆಗೆ ವಧು ಅಪ್ರಾಪ್ತೆ ಎಂಬ ಮಾಹಿತಿ ಬಹಿರಂಗಗೊಂಡಿದೆ.

ಬಂಧನದ ಭೀತಿಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವರ:

ಅಂಗನವಾಡಿ ಕಾರ್ಯಕರ್ತರ ಮಾಹಿತಿ ಮೇರೆಗೆ ಕೂಡಲೆ ಎಚ್ಚೆತ್ತ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ವಧುವನ್ನ ಪತ್ತೆ ಹಚ್ಚಿ, 52 ವಯಸ್ಸಿನ ವರನನ್ನು ಪೋಲಿಸರು ಬಂಧಿಸಿದ್ದಾರೆ. ಈ ಮಧ್ಯೆ ವರ ಬಂಧನದ ಭೀತಿಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜುಲೈ 19ರಂದು ಕಾರವಾರದ ದೇವಾಲಯೊಂದರಲ್ಲಿ ಅದ್ಧೂರಿಯಾಗಿಯೇ ವಿವಾಹವಾಗಿತ್ತು.

ವರ ಕಾರವಾರ ಜೈಲಿಗೆ:

ಪೋಲಿಸ್ ಸಿಬ್ಬಂದಿಯ ಮಾಹಿತಿ ಪ್ರಕಾರ ಹುಡುಗಿ ದೈಹಿಕವಾಗಿ ದಷ್ಟಪುಷ್ಟವಾಗಿದ್ದು ಅಪ್ರಾಪ್ತೆ ಅಲ್ಲ ಎಂದು ವಿವಾಹ ಮಾಡಲಾಗಿತ್ತು ಅಂತಾರೆ ಹುಡುಗಿಯ ಸಂಭಂದಿಕರು. ಆದ್ರೆ ಅಪ್ರಾಪ್ತೆ ಎಂದು ತಿಳಿದ ಬಳಿಕ ಎರಡೂ ಕಡೆಯ ಸಂಬಂಧಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ಈಗ ಮದುವೆಗೆ ಹೋದ ಸಂಭಂದಿಕರೂ ಸೇರಿ ಒಟ್ಟು 60 ಜನರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೋಟಿಸ್ ನೀಡಿದೆ. ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ ಅನೀಲ್, ಈಗ ಕಾರವಾರ ಜೈಲಿನಲ್ಲಿ ಇದ್ದರೆ, ಅಪ್ರಾಪ್ತೆ ವಧು ಸಾಂತ್ವನ ಕೇಂದ್ರದಲ್ಲಿ ಇದ್ದಾರೆ.

Published On - 4:04 pm, Sat, 10 September 22

‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ