AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವೇಶ್ವರ ಹೆಗಡೆ ಕಾಗೇರಿಗೆ ಗ್ರಾಮಸ್ಥರಿಂದ ತರಾಟೆ; ಕಾಮಗಾರಿ ಶಂಕುಸ್ಥಾಪನೆ ಮಾಡದೇ ತೆರಳಿದ ಸ್ಪೀಕರ್​

ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಗ್ರಾಮದ ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಬಂದಿದ್ದ ಸ್ಪೀಕರ್​​​ ಕಾಗೇರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದು, ಕಾಮಗಾರಿ ಶಂಕುಸ್ಥಾಪನೆ ಮಾಡದೇ ವಾಪಾಸ್ ತೆರೆಳಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
| Updated By: Digi Tech Desk|

Updated on:Mar 15, 2023 | 12:10 PM

Share

ಉತ್ತರ ಕನ್ನಡ: ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಬಂದಿದ್ದ ಸ್ಪೀಕರ್​​​ ಕಾಗೇರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಸಿದ್ದಾಪುರದ ಬೇಡ್ಕಣಿಯಲ್ಲಿ ನಡೆದಿದೆ. 25 ಲಕ್ಷ ವೆಚ್ಚದ ಸಿಮೆಂಟ್ ರಸ್ತೆಗೆ ಶಂಕುಸ್ಥಾಪನೆಗೆ ಬಂದಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri), ಕೇವಲ 350 ಮೀಟರ್ ಸಿಮೆಂಟ್ ರಸ್ತೆ ಕಾಮಗಾರಿಯಾಗಿದೆ. ಅದನ್ನ 1000 ಮೀಟರ್ ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಜೊತೆಗೆ ಸಿಮೆಂಟ್ ರಸ್ತೆ ಬದಲಿಗೆ ಟಾರ್ ರಸ್ತೆ ಮಾಡುವಂತೆ ಶಾಸಕರಿಗೆ ತರಾಟೆ ತೆಗೆದುಕೊಂಡಿದ್ದು, ಈ ಹಿಂದೆ ಮಾಡಿರುವ ರಸ್ತೆಯ ಗುಣಮಟ್ಟ ಕೂಡ ಕಳಪೆ ಆಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನಲೆ ರಸ್ತೆ ಶಂಕುಸ್ಥಾಪನೆ ನೆರವೇರಿಸದೇ ಇಂಜಿನಿಯರ್ ಕಡೆಯಿಂದ ಕಾಮಗಾರಿಯ ಎಸ್ಟಿಮೇಟ್ ಕೇಳಿ ಸ್ಪೀಕರ್ ಕಾಗೇರಿ ಹೋಗಿದ್ದಾರೆ.

ಈ ಹಿಂದೆ ಕೂಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ರಸ್ತೆ ಕಾಮಗಾರಿ ಕುರಿತು ಶಾಸಕ ಸುನೀಲ್​ ನಾಯ್ಕ್​, ಸಾರ್ವಜನಿರ ನಡುವೆ ವಾಗ್ವಾದ

ಹೌದು ಈ ಹಿಂದೆ ಫೆ.14ರಂದು ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಭಟ್ಕಳ ತಾಲೂಕಿನ ಬೈಲೂರು ಗ್ರಾಮಕ್ಕೆ ಆಗಮಿಸಿದ್ದ ಭಟ್ಕಳ-ಹೊನ್ನಾವರ ಬಿಜೆಪಿ ಶಾಸಕ ಸುನೀಲ್ ನಾಯ್ಕ ಅವರಿಗೆ ರಸ್ತೆಯನ್ನ ಪೂರ್ಣ ಮಾಡಿಕೊಡಿ ಎಂದು ಗ್ರಾಮಸ್ಥರು ಕೇಳಿಕೊಂಡಿದ್ದರು. ಈ ವೇಳೆ ಶಾಸಕ ಸುನೀಲ್ ನಾಯ್ಕ ‘ಯಾವಾಗ ರಸ್ತೆ ಮಾಡಬೇಕು ನನಗೆ ಗೊತ್ತಿದೆ, ನಾನು ಮಾಡೋದೇ ಇಷ್ಟು, ನಾನು ಶಾಸಕ ರಸ್ತೆ ಮಾಡಲು ನನಗೆ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ. ತಾಕತ್ತಿದ್ದರೆ ನಿಲ್ಲಿಸಿ ಎಂದು ಗ್ರಾಮಸ್ಥರಿಗೆ ಆವಾಜ್ ಹಾಕುವ ಮೂಲಕ ದರ್ಪದ ಮಾತನ್ನಾಡಿದ್ದರು. ಚುನಾವಣೆ ಮುಂದೆ ಇರುವ ಹಿನ್ನಲೆ ಸಂಪೂರ್ಣ ರಸ್ತೆ ಮಾಡಿಕೊಡಿ ಎಂದು ಗ್ರಾಮಸ್ಥರು ಬೇಡಿಕೆಯಿಟ್ಟಿದ್ದರು. ಈಗ 25 ಲಕ್ಷ ಹಣ ಮಂಜೂರಾಗಿದೆ, ಮುಂದಿನ ದಿನಗಳಲ್ಲಿ ಮಾಡುತ್ತೆನೆ ಎಂದ ಶಾಸಕರು, ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾಡುವುದಾದರೆ ಪೂರ್ತಿ ರಸ್ತೆ ಮಾಡಿ ಎಂದು ಪಟ್ಟು ಹಿಡಿದಿದ್ದರು. ಈ ವೇಳೆ ಗ್ರಾಮಸ್ಥರು ಮತ್ತು ಶಾಸಕರ ನಡುವೆ ಮಾತಿನ ಜಟಾಪಟಿ ನಡೆದಿದ್ದು, ಶಾಸಕನ ವರ್ತನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರ

ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಜಿಲ್ಲೆಯಲ್ಲಿನ ರಸ್ತೆಗಳು ಸಂಪೂರ್ಣವಾಗಿ ಹದೆಗಟ್ಟಿದ್ದು, ಹೇಗಾದರೂ ಮಾಡಿ ಚುನಾವಣಾ ಸಂದರ್ಭದಲ್ಲಿಯೇ ರಸ್ತೆ ಮಾಡಿಕೊಳ್ಳೋಣಾ ಎಂದು ಸಾರ್ವಜನಿಕರು ಶಾಸಕರ ವಿರುದ್ದ ತೊಡೆತಟ್ಟಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:04 pm, Wed, 15 March 23

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ