AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವೇಶ್ವರ ಹೆಗಡೆ ಕಾಗೇರಿಗೆ ಗ್ರಾಮಸ್ಥರಿಂದ ತರಾಟೆ; ಕಾಮಗಾರಿ ಶಂಕುಸ್ಥಾಪನೆ ಮಾಡದೇ ತೆರಳಿದ ಸ್ಪೀಕರ್​

ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಗ್ರಾಮದ ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಬಂದಿದ್ದ ಸ್ಪೀಕರ್​​​ ಕಾಗೇರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದು, ಕಾಮಗಾರಿ ಶಂಕುಸ್ಥಾಪನೆ ಮಾಡದೇ ವಾಪಾಸ್ ತೆರೆಳಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
| Edited By: |

Updated on:Mar 15, 2023 | 12:10 PM

Share

ಉತ್ತರ ಕನ್ನಡ: ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಬಂದಿದ್ದ ಸ್ಪೀಕರ್​​​ ಕಾಗೇರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯ ಸಿದ್ದಾಪುರದ ಬೇಡ್ಕಣಿಯಲ್ಲಿ ನಡೆದಿದೆ. 25 ಲಕ್ಷ ವೆಚ್ಚದ ಸಿಮೆಂಟ್ ರಸ್ತೆಗೆ ಶಂಕುಸ್ಥಾಪನೆಗೆ ಬಂದಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri), ಕೇವಲ 350 ಮೀಟರ್ ಸಿಮೆಂಟ್ ರಸ್ತೆ ಕಾಮಗಾರಿಯಾಗಿದೆ. ಅದನ್ನ 1000 ಮೀಟರ್ ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಜೊತೆಗೆ ಸಿಮೆಂಟ್ ರಸ್ತೆ ಬದಲಿಗೆ ಟಾರ್ ರಸ್ತೆ ಮಾಡುವಂತೆ ಶಾಸಕರಿಗೆ ತರಾಟೆ ತೆಗೆದುಕೊಂಡಿದ್ದು, ಈ ಹಿಂದೆ ಮಾಡಿರುವ ರಸ್ತೆಯ ಗುಣಮಟ್ಟ ಕೂಡ ಕಳಪೆ ಆಗಿದೆ ಎಂದು ಆರೋಪಿಸಿದ್ದಾರೆ. ಈ ಹಿನ್ನಲೆ ರಸ್ತೆ ಶಂಕುಸ್ಥಾಪನೆ ನೆರವೇರಿಸದೇ ಇಂಜಿನಿಯರ್ ಕಡೆಯಿಂದ ಕಾಮಗಾರಿಯ ಎಸ್ಟಿಮೇಟ್ ಕೇಳಿ ಸ್ಪೀಕರ್ ಕಾಗೇರಿ ಹೋಗಿದ್ದಾರೆ.

ಈ ಹಿಂದೆ ಕೂಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ರಸ್ತೆ ಕಾಮಗಾರಿ ಕುರಿತು ಶಾಸಕ ಸುನೀಲ್​ ನಾಯ್ಕ್​, ಸಾರ್ವಜನಿರ ನಡುವೆ ವಾಗ್ವಾದ

ಹೌದು ಈ ಹಿಂದೆ ಫೆ.14ರಂದು ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಭಟ್ಕಳ ತಾಲೂಕಿನ ಬೈಲೂರು ಗ್ರಾಮಕ್ಕೆ ಆಗಮಿಸಿದ್ದ ಭಟ್ಕಳ-ಹೊನ್ನಾವರ ಬಿಜೆಪಿ ಶಾಸಕ ಸುನೀಲ್ ನಾಯ್ಕ ಅವರಿಗೆ ರಸ್ತೆಯನ್ನ ಪೂರ್ಣ ಮಾಡಿಕೊಡಿ ಎಂದು ಗ್ರಾಮಸ್ಥರು ಕೇಳಿಕೊಂಡಿದ್ದರು. ಈ ವೇಳೆ ಶಾಸಕ ಸುನೀಲ್ ನಾಯ್ಕ ‘ಯಾವಾಗ ರಸ್ತೆ ಮಾಡಬೇಕು ನನಗೆ ಗೊತ್ತಿದೆ, ನಾನು ಮಾಡೋದೇ ಇಷ್ಟು, ನಾನು ಶಾಸಕ ರಸ್ತೆ ಮಾಡಲು ನನಗೆ ಯಾವುದೇ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ. ತಾಕತ್ತಿದ್ದರೆ ನಿಲ್ಲಿಸಿ ಎಂದು ಗ್ರಾಮಸ್ಥರಿಗೆ ಆವಾಜ್ ಹಾಕುವ ಮೂಲಕ ದರ್ಪದ ಮಾತನ್ನಾಡಿದ್ದರು. ಚುನಾವಣೆ ಮುಂದೆ ಇರುವ ಹಿನ್ನಲೆ ಸಂಪೂರ್ಣ ರಸ್ತೆ ಮಾಡಿಕೊಡಿ ಎಂದು ಗ್ರಾಮಸ್ಥರು ಬೇಡಿಕೆಯಿಟ್ಟಿದ್ದರು. ಈಗ 25 ಲಕ್ಷ ಹಣ ಮಂಜೂರಾಗಿದೆ, ಮುಂದಿನ ದಿನಗಳಲ್ಲಿ ಮಾಡುತ್ತೆನೆ ಎಂದ ಶಾಸಕರು, ಈ ಸಂದರ್ಭದಲ್ಲಿ ಗ್ರಾಮಸ್ಥರು ಮಾಡುವುದಾದರೆ ಪೂರ್ತಿ ರಸ್ತೆ ಮಾಡಿ ಎಂದು ಪಟ್ಟು ಹಿಡಿದಿದ್ದರು. ಈ ವೇಳೆ ಗ್ರಾಮಸ್ಥರು ಮತ್ತು ಶಾಸಕರ ನಡುವೆ ಮಾತಿನ ಜಟಾಪಟಿ ನಡೆದಿದ್ದು, ಶಾಸಕನ ವರ್ತನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ:ಉತ್ತರ ಕನ್ನಡ ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿದ ಕರ್ನಾಟಕ ಸರ್ಕಾರ

ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಜಿಲ್ಲೆಯಲ್ಲಿನ ರಸ್ತೆಗಳು ಸಂಪೂರ್ಣವಾಗಿ ಹದೆಗಟ್ಟಿದ್ದು, ಹೇಗಾದರೂ ಮಾಡಿ ಚುನಾವಣಾ ಸಂದರ್ಭದಲ್ಲಿಯೇ ರಸ್ತೆ ಮಾಡಿಕೊಳ್ಳೋಣಾ ಎಂದು ಸಾರ್ವಜನಿಕರು ಶಾಸಕರ ವಿರುದ್ದ ತೊಡೆತಟ್ಟಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:04 pm, Wed, 15 March 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ