AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಈ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 100 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ಬಿಡುಗಡೆ ಮಾಡಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

Uttara Kannada Flood: ಭೂಕುಸಿತಕ್ಕೊಳಗಾದ ಕಳಚೆ ಗ್ರಾಮದ ಸಂಪೂರ್ಣ ಸ್ಥಳಾಂತರ, ನೊಂದವರಿಗೆ ಶೀಘ್ರ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆ ನಡೆಸಿದ ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on:Jul 29, 2021 | 7:00 PM

ಅಂಕೋಲಾ: ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಭೂಕುಸಿತಕ್ಕೊಳಗಾದ ಕಳಚೆ‌ ಗ್ರಾಮದಲ್ಲಿ ಪರಿಹಾರ ನೀಡಿದರೂ ಮನೆ ಕಟ್ಟಲು ಅಸಾಧ್ಯವಾಗಿದೆ. ಹೀಗಾಗಿ ಗ್ರಾಮವನ್ನು ಸಂಪೂರ್ಣ ಸ್ಥಳಾಂತರಿಸಿ. ನಾಳೆಯಿಂದಲೇ ಕೆಲಸ ಮಾಡಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ. ಈ ಸ್ಥಳಾಂತರಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಘೋಷಿಸಿದರು.

ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ , ಭಾಗಶಃ ಬಿದ್ದ ಮನೆಗಳಿಗೆ ಲಕ್ಷ, ಸ್ವಲ್ಪ ಹಾನಿಯಾಗಿದ್ದರೆ 50 ಸಾವಿರ ಪರಿಹಾರವನ್ನು ಸಿಎಂ ಘೋಷಿಸಿದರು. ಎಂದು ಸಿಎಂ ಆದೇಶಿಸಿದರು. ಜತೆಗೆ ಕಳಚೆ ಗ್ರಾಮಸ್ಥರ ಪುರ್ವಸತಿಗೆ 15 ಎಕರೆ ಜಮೀನು ಹುಡುಕಲು ಜಿಲ್ಲಾಧಿಕಾರಿಗೆ ಸೂಚಿಸಿದರು. ಅರಬೈಲ್ ಘಾಟ್ ರಸ್ತೆ , ಕಳಚೆ ರಸ್ತೆ , ಘಟ್ಟ ಕುಸಿದ ಸ್ಥಳ ರಿಪೇರಿಗೆ 10 ಕೋಟಿ‌ ಘೋಷಿಸಿದರು.

ಎನ್​ಡಿಆರ್​ಎಫ್ ನಿಯಮದಂತೆ ಆರೈಕೆ ಕೇಂದ್ರದಲ್ಲಿನ ಜನರಿಗೆ 3800 ಪರಿಹಾರವನ್ನು ಕಳೆದ ವರ್ಷ ನೀಡಲಾಗಿತ್ತು. ಇದೀಗ ರಾಜ್ಯ ಸರಕಾರದಿಂದ ತಲಾ 10 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಉಳಿದ 6200 ರೂ. ಹಣವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬಿದ್ದ ಮನೆಗಳ ಸರ್ವೆ ನಡೆಸಿ ಕಳೆದ ವರ್ಷದ ಮಾದರಿಯಲ್ಲಿಯೇ ಪರಿಹಾರ ನೀಡಲು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಬವರಾಜ ಬೊಮ್ಮಾಯಿ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ನಷ್ಟವಾಗಿದೆ. ಅನೇಕ ಕಡೆ ಭೂಕುಸಿತ ಉಂಟಾಗಿದೆ. ಅನೇಕ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಇಂಥ ಸಂದರ್ಭದಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 100 ಕೋಟಿ ಅನುದಾನವನ್ನು ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಅರಣ್ಯದಲ್ಲಿ ಮನೆ ಕಟ್ಟಿಕೊಂಡವರಿಗೆ ಪರಿಹಾರ ನೀಡಿದ್ದೇವೆ. ಈ ವರ್ಷವೂ ಮನೆ ಕಳೆದುಕೊಂಡವರಿಗೂ ಪರಿಹಾರ ಒದಗಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: 

Uttara Kannada Flood: ಚಿತ್ರನೋಟ: ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮ ಹೇಗಿದೆ?

Uttara Kannada: ಮನೆ, ಗುಡ್ಡ ಕುಸಿತ, ರಸ್ತೆ, ಸೇತುವೆ ನೀರುಪಾಲು, ಸಂಪರ್ಕ ಕಡಿತ; ಉತ್ತರ ಕನ್ನಡವಲ್ಲ ಇದು ತತ್ತರ ಕನ್ನಡ ಎಂದ ಜನ

(CM Basavaraj Bommai Notice to Complete Relocation of Uttara Kannada Yellapur Kalache village for landslide)

Published On - 6:39 pm, Thu, 29 July 21

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್