AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಸ್ಟ್​ ಗಾರ್ಡ್​ ಸಿಬ್ಬಂದಿಯ ಅವಿರತ ಪ್ರಯತ್ನದಿಂದ ಅರಬ್ಬಿ ಸಮುದ್ರದಲ್ಲಿ ಬೋಟ್ ಪತ್ತೆ, 27 ಮೀನುಗಾರರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಹಡಗನ್ನು ಕೋಸ್ಟ್​ ಗಾರ್ಡ್​ ಸಿಬ್ಬಂದಿ ಪತ್ತೆ ಮಾಡಿ 27 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಗೋವಾ ಮೂಲದ ಕ್ರಿಸ್ಟೋ ಹೆಸರಿನ ಬೋಟ್ ನವೆಂಬರ್ 27ರಿಂದ ನಾಪತ್ತೆಯಾಗಿತ್ತು. ಬಳಿಕ ಕೋಸ್ಟ್ ಗಾರ್ಡ್ ಅವಿರತ ಪ್ರಯತ್ನದಿಂದ ಅಂತಿಮವಾಗಿ ಅಂಕೋಲಾ ತಾಲೂಕಿನ ಬೇಲಿಕೇರಿ ಬಂದರಿನ ಸಮೀಪ ಪತ್ತೆ ಮಾಡಲಾಗಿದೆ.

ಕೋಸ್ಟ್​ ಗಾರ್ಡ್​ ಸಿಬ್ಬಂದಿಯ ಅವಿರತ ಪ್ರಯತ್ನದಿಂದ ಅರಬ್ಬಿ ಸಮುದ್ರದಲ್ಲಿ ಬೋಟ್ ಪತ್ತೆ, 27 ಮೀನುಗಾರರ ರಕ್ಷಣೆ
TV9 Web
| Edited By: |

Updated on: Dec 05, 2023 | 3:11 PM

Share

ಕಾರವಾರ, (ಡಿಸೆಂಬರ್ 05): ಹವಾಮಾನ ವೈಪರೀತ್ಯದಿಂದ (Weather extremes) ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಬೋಟ್​ ಮತ್ತೆಯಾಗಿದೆ. ಕೋಸ್ಟ್​ ಗಾರ್ಡ್​ (coast guard) ಸಿಬ್ಬಂದಿ ಅವಿರತ ಪ್ರಯತ್ನದಿಂದ ಅರಬ್ಬಿ ಸಮುದ್ರದಲ್ಲಿ ಗೋವಾ ಮೂಲದ ಬೋಟ್ ಪತ್ತೆಯಾಗಿದ್ದು, ಮೀನುಗಾರರ ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಬೇಲಿಕೇರಿ ಬಂದರಿನಿಂದ 30 ನಾಟಿಕನ್ ಮೈಲಿದೂರದಲ್ಲಿ ಬೋಟ್​ ಪತ್ತೆ ಮಾಡಿ 27 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಇದನ್ನೂ ಓದಿ: ಹವಾಮಾನ ವೈಪರೀತ್ಯ: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ

ನವೆಂಬರ್​​ 29 ರಂದು ಗೋವಾದ ಪಣಜಿಯ IND-GA-01MM2233 ನೋಂದಣಿಯ ಕ್ರಿಸ್ಟೋ ಹೆಸರಿನ ಬೋಟ್​ನ ಇಂಜಿನ್​ನಲ್ಲಿ ಸಮಸ್ಯೆಯಾಗಿ ತೇಲಿಹೋಗಿತ್ತು. ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು. ಬಳಿಕ ಬೋಟ್​ನ ಮಾಲೀಕ ಕೂಡಲೇ ಕೋಸ್ಟ್‌ಗಾರ್ಡ್ಸ್‌ಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಕೋಸ್ಟ್​​ಗಾರ್ಡ್‌ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಇದೀಗ ಬೋಟ್​ ಪತ್ತೆ ಮಾಡಿದ್ದಾರೆ. 30 ನಾಟಿಕನ್ ಮೈಲಿದೂರದಲ್ಲಿ ಪತ್ತೆಯಾದ ಕ್ರಿಸ್ಟೋ ಬೋಟ್ ಸಿಕ್ಕಿದ್ದು, 27 ಮೀನುಗಾರರ ಸಮೇತ ಕ್ರಿಸ್ಟೋ ಬೋಟ್ ಬೇಲಿಕೇರಿ ಬಂದರಿನತ್ತ ಕರೆತರಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ