AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಸ್ಟ್​ ಗಾರ್ಡ್​ ಸಿಬ್ಬಂದಿಯ ಅವಿರತ ಪ್ರಯತ್ನದಿಂದ ಅರಬ್ಬಿ ಸಮುದ್ರದಲ್ಲಿ ಬೋಟ್ ಪತ್ತೆ, 27 ಮೀನುಗಾರರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಹಡಗನ್ನು ಕೋಸ್ಟ್​ ಗಾರ್ಡ್​ ಸಿಬ್ಬಂದಿ ಪತ್ತೆ ಮಾಡಿ 27 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಗೋವಾ ಮೂಲದ ಕ್ರಿಸ್ಟೋ ಹೆಸರಿನ ಬೋಟ್ ನವೆಂಬರ್ 27ರಿಂದ ನಾಪತ್ತೆಯಾಗಿತ್ತು. ಬಳಿಕ ಕೋಸ್ಟ್ ಗಾರ್ಡ್ ಅವಿರತ ಪ್ರಯತ್ನದಿಂದ ಅಂತಿಮವಾಗಿ ಅಂಕೋಲಾ ತಾಲೂಕಿನ ಬೇಲಿಕೇರಿ ಬಂದರಿನ ಸಮೀಪ ಪತ್ತೆ ಮಾಡಲಾಗಿದೆ.

ಕೋಸ್ಟ್​ ಗಾರ್ಡ್​ ಸಿಬ್ಬಂದಿಯ ಅವಿರತ ಪ್ರಯತ್ನದಿಂದ ಅರಬ್ಬಿ ಸಮುದ್ರದಲ್ಲಿ ಬೋಟ್ ಪತ್ತೆ, 27 ಮೀನುಗಾರರ ರಕ್ಷಣೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 05, 2023 | 3:11 PM

ಕಾರವಾರ, (ಡಿಸೆಂಬರ್ 05): ಹವಾಮಾನ ವೈಪರೀತ್ಯದಿಂದ (Weather extremes) ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಬೋಟ್​ ಮತ್ತೆಯಾಗಿದೆ. ಕೋಸ್ಟ್​ ಗಾರ್ಡ್​ (coast guard) ಸಿಬ್ಬಂದಿ ಅವಿರತ ಪ್ರಯತ್ನದಿಂದ ಅರಬ್ಬಿ ಸಮುದ್ರದಲ್ಲಿ ಗೋವಾ ಮೂಲದ ಬೋಟ್ ಪತ್ತೆಯಾಗಿದ್ದು, ಮೀನುಗಾರರ ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಬೇಲಿಕೇರಿ ಬಂದರಿನಿಂದ 30 ನಾಟಿಕನ್ ಮೈಲಿದೂರದಲ್ಲಿ ಬೋಟ್​ ಪತ್ತೆ ಮಾಡಿ 27 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಇದನ್ನೂ ಓದಿ: ಹವಾಮಾನ ವೈಪರೀತ್ಯ: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ

ನವೆಂಬರ್​​ 29 ರಂದು ಗೋವಾದ ಪಣಜಿಯ IND-GA-01MM2233 ನೋಂದಣಿಯ ಕ್ರಿಸ್ಟೋ ಹೆಸರಿನ ಬೋಟ್​ನ ಇಂಜಿನ್​ನಲ್ಲಿ ಸಮಸ್ಯೆಯಾಗಿ ತೇಲಿಹೋಗಿತ್ತು. ಗೋವಾದ ಪಣಜಿಯಿಂದ ಹೊರಟಿದ್ದ ಬೋಟ್ ಅಂಕೋಲ ತಾಲೂಕಿನ ಬೆಲೆಕೇರಿ ಸಮುದ್ರ ಭಾಗದಲ್ಲಿ ಕೊನೆಯ ಲೊಕೇಷನ್ ತೋರಿಸಿತ್ತು. ಬಳಿಕ ಬೋಟ್​ನ ಮಾಲೀಕ ಕೂಡಲೇ ಕೋಸ್ಟ್‌ಗಾರ್ಡ್ಸ್‌ಗೆ ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಕೋಸ್ಟ್​​ಗಾರ್ಡ್‌ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಇದೀಗ ಬೋಟ್​ ಪತ್ತೆ ಮಾಡಿದ್ದಾರೆ. 30 ನಾಟಿಕನ್ ಮೈಲಿದೂರದಲ್ಲಿ ಪತ್ತೆಯಾದ ಕ್ರಿಸ್ಟೋ ಬೋಟ್ ಸಿಕ್ಕಿದ್ದು, 27 ಮೀನುಗಾರರ ಸಮೇತ ಕ್ರಿಸ್ಟೋ ಬೋಟ್ ಬೇಲಿಕೇರಿ ಬಂದರಿನತ್ತ ಕರೆತರಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ