AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ.. ಕಾರ್ಯಾಚರಣೆ ಬಳಿಕ ಇಂದು ಶವ ಪತ್ತೆ

ರಕ್ಷಿತಾ ಮತ್ತು ಪುರುಷೋತ್ತಮ್, ಜೊಯಿಡಾ ತಾಲೂಕಿನ‌ ಗಣೇಶಗುಡಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಆದ್ರೆ ನಿನ್ನೆ ಸೂಪಾ‌ ಡ್ಯಾಂ ಬಳಿಯಿರುವ ಕಾಳಿ ಸೇತುವೆಯಲ್ಲಿ‌ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ.. ಕಾರ್ಯಾಚರಣೆ ಬಳಿಕ ಇಂದು ಶವ ಪತ್ತೆ
ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ ಶವ ಪತ್ತೆ
ಆಯೇಷಾ ಬಾನು
|

Updated on:Apr 13, 2021 | 11:44 AM

Share

ಕಾರವಾರ: ಸೆಲ್ಫಿ ತೆಗೆಯಲು ಹೋಗಿ ಜೋಡಿಯೊಂದು ಸೂಪಾ‌ ಡ್ಯಾಂಗೆ ಬಿದ್ದ ಕೇಸ್​ ಸಂಬಂಧ ಜಲಾಶಯಕ್ಕೆ ಬಿದ್ದಿದ್ದ ಜೋಡಿಯ ಮೃತದೇಹ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಜಲಾಶಯದಲ್ಲಿ ಬೀದರ್‌ನ ರಕ್ಷಿತಾ ಚಿದ್ರಿ ಮತ್ತು ಪುರುಷೋತ್ತಮ್ ಶವ ಪತ್ತೆಯಾಗಿದೆ. ಈ ಬಗ್ಗೆ ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ಅಂದ್ರೆ ಏಪ್ರಿಲ್ 12ರಂದು ಸೂಪಾ‌ ಡ್ಯಾಂ ಬಳಿ ಸೆಲ್ಫಿ ತೆಗೆಸಿಕೊಳ್ಳುವ ಎಂದು ಹೋಗಿದ್ದ ಜೋಡಿ ಕಾಳಿ ನದಿಗೆ ಬಿದ್ದಿದ್ರು. ಕಾರ್ಯಾಚರಣೆ ಬಳಿಕ ಇಂದು ಬೆಳಗ್ಗೆ ಜೋಡಿಯ ಮೃತದೇಹ ಪತ್ತೆಯಾಗಿದೆ. ರಕ್ಷಿತಾ ಗುಲ್ಬರ್ಗಾದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದರು. ರಕ್ಷಿತಾ ಮತ್ತು ಪುರುಷೋತ್ತಮ್, ಜೊಯಿಡಾ ತಾಲೂಕಿನ‌ ಗಣೇಶಗುಡಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಆದ್ರೆ ನಿನ್ನೆ ಸೂಪಾ‌ ಡ್ಯಾಂ ಬಳಿಯಿರುವ ಕಾಳಿ ಸೇತುವೆಯಲ್ಲಿ‌ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಕಾಳಿ ನದಿಯಲ್ಲಿ ಬಿದ್ದಿದ್ದ ಜೋಡಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ನಿನ್ನೆಯಿಂದ ಹುಡುಕಾಡುತ್ತಿದ್ದರು. ಮುಳುಗು ತಜ್ಞರು, ಟ್ಯೂಬ್ ಬೋಟ್ ಹಾಗೂ ಕಯಾಕ್ ಮೂಲಕ ಹುಡುಕಾಟ ನಡೆದಿತ್ತು. ಸದ್ಯ ಇಂದು ಬೆಳಗ್ಗೆ ಕಾಳಿ ನದಿಯಲ್ಲಿ ಜೋಡಿಗಳ ಮೃತದೇಹ ಪತ್ತೆಯಾಗಿದೆ. ಪ್ರವಾಸಕ್ಕೆ ಬಂದ ಜೋಡಿ ಪ್ರಾಣ ಕಳೆದುಕೊಂಡಿದೆ.

ಸೂಪಾ ಆಣೆಕಟ್ಟನ್ನು ಕಾಳಿ ನದಿಗೆ ಕಟ್ಟಲಾಗಿದ್ದು, ಇದು ಕಾಳಿ ನದಿಗೆ ಕಟ್ಟಲಾದ ಅತಿ ದೊಡ್ಡ ಡ್ಯಾಂ ಆಗಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ ಆಣೆಕಟ್ಟು ಎಂಬ ಖ್ಯಾತಿಯು ಸಹ ಸೂಪಾ ಆಣೆಕಟ್ಟಿಗಿದೆ.

ಇದನ್ನೂ ಓದಿ: ಜೋಯ್ಡಾ: ಸೆಲ್ಫಿ ಕ್ಲಿಕ್ಕಿಸುವ ಭರದಲ್ಲಿ ಸೂಪಾ ಡ್ಯಾಂಗೆ ಬಿದ್ದ ಯುವಕ-ಯುವತಿ

(Couple Body Found in Kali River in Karwar)

Published On - 11:43 am, Tue, 13 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ