AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಉತ್ತರ ಕನ್ನಡ ಡಿಸಿ ಮುಲೈ ಮುಹಿಲನ್​ ಸ್ಥಳ ಪರಿಶೀಲನೆ

ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್​​ ಕುಮಟಾ ಪಟ್ಟಣದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿದರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಉತ್ತರ ಕನ್ನಡ ಡಿಸಿ ಮುಲೈ ಮುಹಿಲನ್​ ಸ್ಥಳ ಪರಿಶೀಲನೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್
TV9 Web
| Edited By: |

Updated on: Sep 20, 2022 | 3:10 PM

Share

ಕಾರವಾರ: ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸರ್ಕಾರವು ತಾತ್ವಿಕ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್​​ ಕುಮಟಾ ಪಟ್ಟಣದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿದರು. ಕುಮಟಾದ ರೈಲ್ವೆ ನಿಲ್ದಾಣ ಪ್ರದೇಶ, ಮಿರ್ಜಾನ್ ಗ್ರಾಮ, ಕೊಂಕಣ ಎಜುಕೇಷನ್ ಸಂಸ್ಥೆಯ ಸುತ್ತಮುತ್ತ ಡಿಸಿ ಭೇಟಿ ನೀಡಿದ್ದರು. ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಜಿಲ್ಲಾಧಿಕಾರಿಯೊಂದಿಗೆ ಇದ್ದರು. ಸ್ಥಳ ಪರಿಶೀಲನೆ ಬಳಿಕ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಕೆಲ ಹೊತ್ತು ಚರ್ಚಿಸಿದರು.

ಬೆಂಗಳೂರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಾಸಕರು ಮತ್ತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ್ದ ಡಾ ಕೆ.ಸುಧಾಕರ್, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಪ್ರಸ್ತಾವದ ಕಡತವು ಇದೀಗ ಅರ್ಥಿಕ ಇಲಾಖೆಗೆ ಹೋಗಿದೆ. ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ತೀರ್ಮಾನ ಇನ್ನೂ ಅಂತಿಮಗೊಂಡಿಲ್ಲ. ಅಧಿವೇಶನ ಮುಗಿದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಸ್ಥಳ ಆಯ್ಕೆ ಮಾಡಲಾಗುವುದು ಎಂದರು. ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಜೊತೆಗೆ ಕಾರವಾರದ ವೈದ್ಯಕೀಯ ಕಾಲೇಜನ್ನು ಮೇಲ್ದರ್ಜೆಗೆ ಏರಿಸಬೇಕೆಂಬ ಬೇಡಿಕೆಯಿದೆ. ಖುದ್ದು ಪರಿಶೀಲನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುಧಾಕರ್ ಹೇಳಿದರು.

ಸಭೆಯ ಬಳಿಕ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸಪೂಜಾರಿ, ‘ಸಭೆಯು ಫಲಪ್ರದವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಶೀಘ್ರ ಈಡೇರಲಿದೆ’ ಎಂದು ಹೇಳಿದ್ದರು. ಬೆಂಗಳೂರಿನಲ್ಲಿ ನಡೆದಿದ್ದ ಸಭೆಯಲ್ಲಿ ಸಚಿವ ಶಿವರಾಮ ಹೆಬ್ಬಾರ್, ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ್, ಗಣಪತಿ ಉಳವೇಕರ್, ಶಾಂತರಾಮ ಸಿದ್ದಿ, ಆರೋಗ್ಯ ಇಲಾಖೆ ಆಯುಕ್ತ ರಣದೀಪ್, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಉತ್ತರ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ ಶರದ್ ನಾಯಕ್, ಕಾರವಾರ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ ಗಜನಾನನ ನಾಯಕ್ ಮತ್ತಿತರರು ಪಾಲ್ಗೊಂಡಿದ್ದರು.

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ