AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಸರಿ ಇಲ್ಲ ಎಂದು ಕಟ್ಟಿಗೆಗೆ ಮೃತದೇಹ ಕಟ್ಟಿ ಶವ ರವಾನೆ; ಕಾರವಾರದ ಗುಡ್ಡಹಳ್ಳಿಯಲ್ಲಿ ಮನಕಲಕುವ ಘಟನೆ

ಕಾರವಾರ ನಗರಸಭೆ ವ್ಯಾಪ್ತಿಯ ಗುಡ್ಡಹಳ್ಳಿಯಲ್ಲಿ ರಸ್ತೆ ಸರಿ ಇಲ್ಲ ಎಂದು ಕಟ್ಟಿಗೆಗೆ ಮೃತದೇಹ ಕಟ್ಟಿ ರವಾನಿಸಲಾಗಿದೆ. ಗುಡ್ಡದ ಮೇಲಿರುವ ಮನೆಗೆ ಶವ ಸಾಗಿಸಲು ಸರಿಯಾದ ರಸ್ತೆ ಸಂಪರ್ಕ ಇಲ್ಲದ ಹಿನ್ನೆಲೆ ಕಟ್ಟಿಗೆಗೆ ಹಗ್ಗದಿಂದ ಕಟ್ಟಿ ಶವ ಸಾಗಾಟ ಮಾಡಲಾಗಿದೆ. ಆದರೆ ಈ ರೀತಿ ಶವ ಸಾಗಿಸಿದ ದೃಶ್ಯ ಮನ ಕಲಕುವಂತಿದೆ.

ರಸ್ತೆ ಸರಿ ಇಲ್ಲ ಎಂದು ಕಟ್ಟಿಗೆಗೆ ಮೃತದೇಹ ಕಟ್ಟಿ ಶವ ರವಾನೆ; ಕಾರವಾರದ ಗುಡ್ಡಹಳ್ಳಿಯಲ್ಲಿ ಮನಕಲಕುವ ಘಟನೆ
ರಸ್ತೆ ಸರಿ ಇಲ್ಲ ಎಂದು ಕಟ್ಟಿಗೆಗೆ ಮೃತದೇಹ ಕಟ್ಟಿ ಶವ ರವಾನೆ
ಸೂರಜ್​, ಮಹಾವೀರ್​ ಉತ್ತರೆ
| Edited By: ಆಯೇಷಾ ಬಾನು|

Updated on: Sep 22, 2024 | 2:28 PM

Share

ಕಾರವಾರ, ಸೆ.22: ಮೃತಪಟ್ಟ ಬಳಿಕ ಗೌರವಯುತವಾಗಿ ಬೀಳ್ಕೊಡಬೇಕೆಂಬುವುದು ಪ್ರತಿಯೊಬ್ಬರ ಆಸೆಯಾಗಿರುತ್ತೆ. ಆದರೆ ಕೆಲ ಸಮಸ್ಯೆಯಿಂದ ಮೃತದೇಹವನ್ನು (Dead Body) ರವಾನಿಸಲು ಕುಟುಂಬಸ್ಥರು ಪರದಾಡುವಂತಹ ಪರಿಸ್ಥಿತಿ ಹಲವೆಡೆ ಕಂಡು ಬರುತ್ತಿದೆ. ಇತ್ತೀಚೆಗೆ ತುಮಕೂರಿನಲ್ಲಿ ಮನಕಲಕುವ ಘಟನೆಯೊಂದು ನಡೆದಿತ್ತು. ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದ ಹಿನ್ನೆಲೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಘಟನೆ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ನಡೆದಿತ್ತು. ಇದೀಗ ಇದೇ ಮಾದರಿಯ ಮತ್ತೊಂದು ಘಟನೆ ನಡೆದಿದೆ. ಕಾರವಾರ (Karwar) ನಗರಸಭೆ ವ್ಯಾಪ್ತಿಯ ಗುಡ್ಡಹಳ್ಳಿಯಲ್ಲಿ ರಸ್ತೆ ಸರಿ ಇಲ್ಲ ಎಂದು ಕಟ್ಟಿಗೆಗೆ ಮೃತದೇಹ ಕಟ್ಟಿ ರವಾನಿಸಲಾಗಿದೆ.

ಅನಾರೋಗ್ಯದ ಕಾರಣ ನಿನ್ನೆ ರಾತ್ರಿ ಕಾರವಾರ ಆಸ್ಪತ್ರೆಗೆ ರಾಮಾ ಮುನ್ನಾಗೌಡ ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ತಡರಾತ್ರಿ 12 ಗಂಟೆಗೆ ಏಕಾಏಕಿ ಹೃದಯಾಘಾತ ಸಂಭವಿಸಿ ರಾಮಾ ಮುನ್ನಾಗೌಡ ಅವರು ಮೃತಪಟ್ಟಿದ್ದರು. ಸದ್ಯ ಆಸ್ಪತ್ರೆಯಿಂದ ಮನೆಗೆ ಮೃತದೇಹವನ್ನು ರವಾನಿಸಲು ರಸ್ತೆ ಸರಿ ಇಲ್ಲ ಎಂಬ ಕಾರಣಕ್ಕೆ ಜನರೆಲ್ಲ ಸೇರಿ ಕಟ್ಟಿಗೆಗೆ ಮೃತದೇಹ ಕಟ್ಟಿ ರವಾನಿಸಿದ್ದಾರೆ.

ಗುಡ್ಡದ ಮೇಲಿರುವ ಮನೆಗೆ ಶವ ಸಾಗಿಸಲು ಸರಿಯಾದ ರಸ್ತೆ ಸಂಪರ್ಕ ಇಲ್ಲದ ಹಿನ್ನೆಲೆ ಕಟ್ಟಿಗೆಗೆ ಹಗ್ಗದಿಂದ ಕಟ್ಟಿ ಶವ ಸಾಗಾಟ ಮಾಡಲಾಗಿದೆ. ಆದರೆ ಈ ರೀತಿ ಶವ ಸಾಗಿಸಿದ ದೃಶ್ಯ ಮನ ಕಲಕುವಂತಿದೆ. ಆದಷ್ಟು ಬೇಗ ಸರ್ಕಾರ ಈ ಬಗ್ಗೆ ಗಮನ ಹರಿಸಿ ಸೂಕ್ತ ವ್ಯವಸ್ಥೆ ಮಾಡಬೇಕಿದೆ. ಇಂತಹ ಪರಿಸ್ಥಿತಿಗಳು ರಾಜ್ಯದ ಅನೇಕ ಭಾಗಗಳಲ್ಲಿ ಈಗಲೂ ಕಂಡು ಬರುತ್ತದೆ. ರಸ್ತೆ ಸಂಪರ್ಕ, ವಿದ್ಯುತ್ ಇಲ್ಲದೆ ಮೂಲಸೌಕರ್ಯಗಳಿಲ್ಲದೆ ಅದೆಷ್ಟೋ ಹಳ್ಳಿಗಳು ಜೀವನವನ್ನು ಕಟ್ಟಿಕೊಂಡಿವೆ.

ಇದನ್ನೂ ಓದಿ: ತುಮಕೂರು: ಬೈಕ್​ ಮೇಲೆ ಶವ ಸಾಗಾಟ: ಸಮುದಾಯ ಆರೋಗ್ಯಾಧಿಕಾರಿಗೆ ಸಿಎಂ ಕಚೇರಿಯಿಂದ ನೋಟಿಸ್

ಬೈಕ್​ ಮೇಲೆ ಶವ ಸಾಗಾಟ: ಸಮುದಾಯ ಆರೋಗ್ಯಾಧಿಕಾರಿಗೆ ಸಿಎಂ ಕಚೇರಿಯಿಂದ ನೋಟಿಸ್

ಇನ್ನು ಕೆಲ ದಿನಗಳ ಹಿಂದೆ ನಡೆದಿದ್ದ ಮನಕಲಕುವ ಘಟನೆ ಸಂಬಂಧ ಸಮುದಾಯ ಆರೋಗ್ಯಾಧಿಕಾರಿಗೆ ಸಿಎಂ ಕಚೇರಿಯಿಂದ ನೋಟಿಸ್ ನೀಡಲಾಗಿದೆ. ಮಕ್ಕಳು ತಂದೆಯ ಶವವನ್ನು ಬೈಕ್​ನಲ್ಲಿ ಸಾಗಿಸಿದ್ದಕ್ಕೆ ಕಾರಣ ಕೇಳಿ ಮುಖ್ಯಮಂತ್ರಿಗಳ ಕಚೇರಿ ಅಧಿಕಾರಿಗಳು ಸಮುದಾಯ ಆರೋಗ್ಯಾಧಿಕಾರಿ ಲೋಕೇಶ್ ಅವರಿಗೆ ನೋಟಿಸ್​ ನೀಡಿದ್ದಾರೆ. ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ (80) ಎಂಬುವರು ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನು 108 ಆಂಬ್ಯುಲೆನ್ಸ್​ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದರು. ಆದರೆ, ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿತ್ತು. ಬಳಿಕ ಮೃತದೇಹವನ್ನು ತೆಗೆದುಕೊಂಡು ಹೋಗಲು ಆಂಬ್ಯುಲೆನ್ಸ್ ಸಿಗದ ಕಾರಣ ಬೈಕ್​ನಲ್ಲೇ ತೆಗೆದುಕೊಂಡು ಹೋಗಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ