AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಸಂದೇಶ

ಮಾಜಿ ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಈ ಬಗ್ಗೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್ 24 ರಂದು ಬಂದ ಈ ಇ-ಮೇಲ್ ಬೆದರಿಕೆಯ ಕುರಿತು ನ್ಯಾಯಾಲಯದ ಅನುಮತಿ ಪಡೆದು ದೂರು ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಸಂದೇಶ
ಮಾಜಿ ಸಂಸದ ಅನಂತ ಕುಮಾರ್ ಹೆಗಡೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 18, 2025 | 6:39 PM

Share

ಕಾರವಾರ, ಜುಲೈ 18: ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ (Ananth Kumar Hegde) ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದೆ. ಈ ಬಗ್ಗೆ ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ (Sirasi) ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ ಅನುಮತಿ ಮೇರೆಗೆ ಶುಕ್ರವಾರ (ಜು.18) ದೂರು ದಾಖಲಿಸಲಾಗಿದೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅನಂತ ಕುಮಾರ್ ಹೆಗಡೆ ಅವರಿಗೆ ಈ ಹಿಂದೆ ಸಹ ಜೀವ ಬೆದರಿಕೆ ಸಂದೇಶ ಬಂದಿತ್ತು.

ಈ ಹಿಂದೆಯೂ ಬಂದಿತ್ತು ಜೀವ ಬೆದರಿಕೆ ಸಂದೇಶ

ಈ ಹಿಂದೆ ಅಪರಿಚಿತ ವ್ಯಕ್ತಿಯೋರ್ವ ಅನಂತ ಕಮಾರ್ ಹೆಗಡೆ ಅವರಿಗೆ ತಡರಾತ್ರಿ 2 ಗಂಟೆ ಸುಮಾರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. “ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ.. ಹೌದು ತಾನೆ? ನಾನು ಹಿಂದಿನ‌ ಬಾರಿ ಕರೆ ಮಾಡಿದ್ದಾಗ ಪೊಲೀಸ್​ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದನು.

ಇದನ್ನೂ ಓದಿ: ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್​ಮ್ಯಾನ್, ಚಾಲಕನ ವಿರುದ್ಧ ಎಫ್​ಐಆರ್

“ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ. ‘ಈ ಬಾರಿ ನಾನು ನಿನ್ನನ್ನು ಏನು ಮಾಡುತ್ತೇನೆ ನೋಡ್ತಾ ಇರು, ನಿನ್ನನ್ನು ಸುಮ್ಮನೆ ಬಿಡಲ್ಲ,’ ಎಂದು ಈ ಅಪರಿಚಿತ ವ್ಯಕ್ತಿ ಬೆದರಿಕೆ ನೀಡಿದ್ದನು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Fri, 18 July 25

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!