AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ; ಭಾರತೀಯ ನೌಕಾಪಡೆಯೊಂದಿಗೆ ಸಹಭಾಗಿತ್ವಕ್ಕೆ ಅಮೆರಿಕ ಉತ್ಸುಕ ಎಂದರು

ಐ.ಎನ್.ಎಸ್ ಕದಂಬ ನೌಕನೆಲೆಗೆ 2 ದಿನಗಳ ಭೇಟಿಗಾಗಿ ಗುರುವಾರ ಸಂಜೆ ಆಗಮಿಸಿದ ರಾಜನಾಥ್ ಸಿಂಗ್, ನೌಕಾನೆಲೆಯ ಅಧಿಕಾರಿ ವರ್ಗ, ಸಿಬ್ಬಂದಿ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ; ಭಾರತೀಯ ನೌಕಾಪಡೆಯೊಂದಿಗೆ ಸಹಭಾಗಿತ್ವಕ್ಕೆ ಅಮೆರಿಕ ಉತ್ಸುಕ ಎಂದರು
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
TV9 Web
| Updated By: ಆಯೇಷಾ ಬಾನು|

Updated on:May 26, 2022 | 9:37 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಅರಗಾ ಗ್ರಾಮದಲ್ಲಿ ಇರುವ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದಾರೆ. ರಾಜ್ಯದ ಎರಡು ದಿನಗಳ ಪ್ರವಾಸದಲ್ಲಿರುವ ರಾಜನಾಥ್ ಸಿಂಗ್ ಅವರು ನೌಕಾನೆಲೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕುಟುಂಬದವರನ್ನ ಭೇಟಿ ಮಾಡಿದ್ದಾರೆ.

ನೌಕಾನೆಲೆಯ ಎರಡನೇ ಹಂತದ ವಿಸ್ತರಣೆ ವೀಕ್ಷಣೆ ಮಾಡಲಿರುವ ರಾಜನಾಥ್ ಸಿಂಗ್ಗೆ ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಸಾಥ್ ನೀಡಲಿದ್ದಾರೆ. ಇಲ್ಲಿನ ಐ.ಎನ್.ಎಸ್ ಕದಂಬ ನೌಕನೆಲೆಗೆ 2 ದಿನಗಳ ಭೇಟಿಗಾಗಿ ಗುರುವಾರ ಸಂಜೆ ಆಗಮಿಸಿದ ರಾಜನಾಥ್ ಸಿಂಗ್, ನೌಕಾನೆಲೆಯ ಅಧಿಕಾರಿ ವರ್ಗ, ಸಿಬ್ಬಂದಿ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಭಾರತೀಯ ನೌಕಾಪಡೆಯು ವಿಶ್ವದಲ್ಲಿ ಅತ್ಯುತ್ತಮವಾದ ಗೌರವ ಹೊಂದಿದೆ. ಅಮೆರಿಕದ ನೌಕಾಪಡೆಯು ಭಾರತೀಯ ನೌಕಾಪಡೆಯೊಂದಿಗೆ ಸಹಯೋಗ ಹೊಂದಲು ಉತ್ಸುಕವಾಗಿದೆ ಎಂದು ಸಚಿವ ರಾಜನಾಥ ಸಿಂಗ್ ಹೇಳಿದ್ರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಇತ್ತೀಚೆಗೆ ನಾನು ಅಮೆರಿಕಾಗೆ ತೆರಳಿದ್ದಾಗ ಆ ದೇಶದ ನೌಕಾಪಡೆಯ ಮುಖ್ಯಸ್ಥರ ಭೇಟಿಯಾಗಿತ್ತು. ಆಗ ಅವರೊಂದಿಗೆ ಮಾತುಕತೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಭಾರತದ ಕಡಲು ನೌಕಾಪಡೆಯಿಂದಾಗಿ ಸುರಕ್ಷಿತವಾಗಿದೆ. ದೇಶದ ಗಡಿಗಳು ಸುರಕ್ಷಿತವಾಗಿವೆ. ಇದರಲ್ಲಿ ದೇಶದ ರಕ್ಷಣೆಯಲ್ಲಿ ತೊಡಗಿರುವ ಮೂರು ಪಡೆಗಳ ಕೊಡುಗೆಯಿದೆ. ಹಾಗಾಗಿ ಪ್ರಜೆಗಳಲ್ಲಿ ನಿಮ್ಮೆಲ್ಲರ ಬಗ್ಗೆ ಇರುವ ಗೌರವ ಮತ್ತು ಹೆಮ್ಮೆಯನ್ನು ನೀವು ಊಹಿಸಲೂ ಸಾಧ್ಯವಿಲ್ಲ. ನೀವು ದೇಶದ ಯುವಕರಿಗೆ ಪ್ರೇರಣೆ ನೀಡುತ್ತಿದ್ದೀರಿ ಎಂದು ರಾಜನಾಥ ಸಿಂಗ್ ಶ್ಲಾಘಿಸಿದರು.

rajnath singh

ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

Published On - 9:37 pm, Thu, 26 May 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!