AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಜಾತ್ರೆ ನಿಮಿತ್ತ ಬಿಸಿ ಗಾಳಿ ತುಂಬಿದ ಬಲೂನ್​ ಹಾರಿ ಬಿಡುವ ಭಕ್ತರು

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿ ರಾಮನಾಥ ದೇವರ ಜಾತ್ರೆಯ ಪ್ರಯುಕ್ತ ಬಿಸಿಗಾಳಿ ತುಂಬಿದ ಬಲೂನ್ ಹಾರಿ ಬಿಡಲಾಗುತ್ತದೆ.

ಕಾರವಾರ: ಜಾತ್ರೆ ನಿಮಿತ್ತ ಬಿಸಿ ಗಾಳಿ ತುಂಬಿದ ಬಲೂನ್​ ಹಾರಿ ಬಿಡುವ ಭಕ್ತರು
ಕಾರವಾರದ ರಾಮನಾಥ ದೇವರ ಜಾತ್ರೆ
TV9 Web
| Edited By: |

Updated on: Nov 13, 2022 | 5:41 PM

Share

ಸಾಮಾನ್ಯವಾಗಿ ಜಾತ್ರೆ ಅಂದ್ಮೇಲೆ ಹೂವು, ಹಣ್ಣು ಸೇವೆ ನೀಡುವುದು, ಕೆಲವೆಡೆ ಕುರಿ, ಕೋಳಿ ಬಲಿ ಕೊಡೋದನ್ನು ನೀವು ನೋಡಿದ್ದೀರಿ. ಆದರೆ ಇಲ್ಲೊಂದು ಜಾತ್ರೆಯಲ್ಲಿ ಬಿಸಿ ಗಾಳಿ ತುಂಬಿದ ಬಲೂನನ್ನು ಹಾರಿ ಬಿಡಲಾಗುತ್ತದೆ. ಅರೆ ಜಾತ್ರೆಗೂ ಬಿಸಿ ಗಾಳಿ ಬಲೂನಿಗೂ ಏನು ಸಂಬಂಧ ಅಂತೀರಾ. ಈ ಸುದ್ದಿ ಓದಿ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿ ಪ್ರತಿವರ್ಷ ರಾಮನಾಥ ದೇವರ ಜಾತ್ರೆಯ ಪ್ರಯುಕ್ತ ಬಿಸಿಗಾಳಿ ತುಂಬಿದ ಬಲೂನ್ ಹಾರಿ ಬಿಡುವ ಸಂಪ್ರದಾಯವನ್ನು ಆಚರಿಸಿಕೊಂಡು ಬಂದಿದ್ದು ಈ ವರ್ಷವು ಸಹ ಜಾತ್ರೆ ಅದ್ದೂರಿಯಾಗಿ ನಡೆಯಿತು. ಪ್ರತಿವರ್ಷ ಕಾರ್ತಿಕಮಾಸದ ದ್ವಿತೀಯಾ ದಿನದಂದು ಮಾಜಾಳಿಯ ರಾಮನಾಥ ದೇವರ ಜಾತ್ರೆ ನಡೆಯುತ್ತದೆ. ರಾಮನಾಥ ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ರಾಮನಾಥ ದೇವರ ಮೂರ್ತಿಯನ್ನು ರಾತ್ರಿ ಸಾತೇರಿದೇವಿ ದೇವಸ್ಥಾನಕ್ಕೆ ತರಲಾಗುತ್ತದೆ. ಅಲ್ಲಿ ಬೆಳಿಗ್ಗೆ ದೇವರ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಕುಳಾವಿ ಜನರು ಕಟ್ಟಿರುವ ತೋರಣಗಳ ಬಳಿ ತೆರಳುವ ಪಲ್ಲಕ್ಕಿಗೆ ಜನರು ಆರತಿ ಬೆಳಗಿ ಹೂವು ಹಣ್ಣು ನೀಡಿ ಪೂಜೆ ಸಲ್ಲಿಸುತ್ತಾರೆ. ಇನ್ನು ಈ ಜಾತ್ರೆಯಲ್ಲಿ ವಿಶೇಷ ಆಕರ್ಷಣೆ ಅಂದರೆ ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ಹಾರಿ ಬಿಡುವ ಬಿಸಿಗಾಳಿ ಬಲೂನು. ಗ್ರಾಮದ ಕೆಲ ಯುವಕರು ಒಟ್ಟಾಗಿ ಪೇಪರ್‌ನಿಂದ ಸ್ಥಳೀಯವಾಗಿ ವಾಫರ್ ಎಂದು ಕರೆಯುವ ಬಲೂನನ್ನ ತಯಾರಿಸುತ್ತಾರೆ. ವಾರಗಳ ಕಾಲ ಕೂತು ತಯಾರಿಸುವ ಈ ವಾಫರನ್ನು ಪಲ್ಲಕ್ಕಿ ಬಂದ ಸಂದರ್ಭದಲ್ಲಿ ಹಾರಿ ಬಿಡಲಾಗುತ್ತದೆ.

ಬಲೂನ್ ಜಾತ್ರೆಯೆಂದೇ ಪ್ರಸಿದ್ಧಿ ಪಡೆದಿರೋ ಈ ಜಾತ್ರೆಗೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಎರಡು ದಿನಗಳ ಕಾಲ ಊರಿನವರು ಭಕ್ತಿ ಹಾಗೂ ಶ್ರದ್ಧೆಯಿಂದ ತಲೆತಲಾಂತರಗಳಿಂದ ಬಂದ ಈ ಉತ್ಸವವನ್ನ ಆಚರಿಸುತ್ತಾರೆ. ಹಾಗೆ ಕೊನೆಯ ದಿನ ಊರಿನವರೇ ತಯಾರಿಸಿದ 20 ಅಡಿ ಎತ್ತರ, 8 ಅಡಿ ಅಗಲದ ಬಲೂನನ್ನು ಹಾರಿಬಿಡುತ್ತಾರೆ. ಜಾತ್ರೆಯ ಕೊನೆಯ ದಿನ ಬೆಳಿಗ್ಗೆ ಹಾಗೂ ಸಂಜೆ ಈ ರೀತಿ ಎರಡು ಬಲೂನುಗಳನ್ನ ಆಕಾಶಕ್ಕೆ ತೇಲಿ ಬಿಡುತ್ತಾರೆ. ಬೆಳಿಗ್ಗೆ ಗ್ರಾಮದ ಸಾತೇರಿ ದೇವಸ್ಥಾನದ ಬಳಿ ಬಲೂನ್ ಹಾರಿಸಿದರೆ ಸಂಜೆ ವೇಳೆ ರಾಮನಾಥ ದೇವಾಲಯದ ಬಳಿ ಬಿಡುತ್ತಾರೆ. ಇನ್ನು ಬೃಹತ್ ಗಾತ್ರದ ಬಲೂನನ್ನ ಆಕಾಶಕ್ಕೆ ಬಿಡುವುದನ್ನ ನೋಡುವುದಕ್ಕಾಗಿಯೇ ಗೋವಾ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯ ಸಾಕಷ್ಟು ಮಂದಿ ಭಕ್ತರು ದೇವಾಲಯದ ಬಳಿ ಸೇರುತ್ತಾರೆ. ಬಲೂನ್ ಹಾರುವಾಗ ಹರಹರ ಮಹಾದೇವ ಎನ್ನುತ್ತಾ ಕೇಕೇ ಚಪ್ಪಾಳೆ ಹಾಕೋ ಮೂಲಕ ಎಲ್ಲರೂ ಈ ದೃಶ್ಯವನ್ನ ಕಣ್ತುಂಬಿಕೊಂಡು ಸಂಭ್ರಮಿಸುತ್ತಾರೆ.

ಇನ್ನು ಗ್ರಾಮದಲ್ಲಿನ ಕಷ್ಟ, ತೊಂದರೆ, ರೋಗ ಇತ್ಯಾದಿ ಸಂಕಷ್ಟಗಳು ಹೊಗೆಯ ರೂಪದಲ್ಲಿ ಗ್ರಾಮದಿಂದ ಹಾರಿ ಹೋಗಲಿ ಎನ್ನುವ ಉದ್ದೇಶದಿಂದ ಜಾತ್ರೆಯ ಸಂದರ್ಭದಲ್ಲಿ ಈ ರೀತಿ ವಾಫರ್ ಹಾರಿ ಬಿಡಲಾಗುತ್ತದೆ. ಆಕಾಶಕ್ಕೆ ಹಾರಿಬಿಡುವ ಈ ವಾಫರ್ ಸಾಕಷ್ಟು ಎತ್ತರದಲ್ಲಿ ಗಂಟೆಗಟ್ಟಲೇ ಹಾರಿ ನಂತರ ಸಮುದ್ರದಲ್ಲಿ ಬೀಳುತ್ತದೆ. ಹೀಗೆ ಬಿದ್ದರೆ ಗ್ರಾಮದಲ್ಲಿನ ತೊಂದರೆಗಳು ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಗ್ರಾಮಸ್ಥರದ್ದು.

ವಿನಾಯಕ ಬಡಿಗೇರ ಟಿವಿ 9 ಕಾರವಾರ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು