AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಜಾತ್ರೆ ನಿಮಿತ್ತ ಬಿಸಿ ಗಾಳಿ ತುಂಬಿದ ಬಲೂನ್​ ಹಾರಿ ಬಿಡುವ ಭಕ್ತರು

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿ ರಾಮನಾಥ ದೇವರ ಜಾತ್ರೆಯ ಪ್ರಯುಕ್ತ ಬಿಸಿಗಾಳಿ ತುಂಬಿದ ಬಲೂನ್ ಹಾರಿ ಬಿಡಲಾಗುತ್ತದೆ.

ಕಾರವಾರ: ಜಾತ್ರೆ ನಿಮಿತ್ತ ಬಿಸಿ ಗಾಳಿ ತುಂಬಿದ ಬಲೂನ್​ ಹಾರಿ ಬಿಡುವ ಭಕ್ತರು
ಕಾರವಾರದ ರಾಮನಾಥ ದೇವರ ಜಾತ್ರೆ
TV9 Web
| Edited By: ವಿವೇಕ ಬಿರಾದಾರ|

Updated on: Nov 13, 2022 | 5:41 PM

Share

ಸಾಮಾನ್ಯವಾಗಿ ಜಾತ್ರೆ ಅಂದ್ಮೇಲೆ ಹೂವು, ಹಣ್ಣು ಸೇವೆ ನೀಡುವುದು, ಕೆಲವೆಡೆ ಕುರಿ, ಕೋಳಿ ಬಲಿ ಕೊಡೋದನ್ನು ನೀವು ನೋಡಿದ್ದೀರಿ. ಆದರೆ ಇಲ್ಲೊಂದು ಜಾತ್ರೆಯಲ್ಲಿ ಬಿಸಿ ಗಾಳಿ ತುಂಬಿದ ಬಲೂನನ್ನು ಹಾರಿ ಬಿಡಲಾಗುತ್ತದೆ. ಅರೆ ಜಾತ್ರೆಗೂ ಬಿಸಿ ಗಾಳಿ ಬಲೂನಿಗೂ ಏನು ಸಂಬಂಧ ಅಂತೀರಾ. ಈ ಸುದ್ದಿ ಓದಿ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿ ಪ್ರತಿವರ್ಷ ರಾಮನಾಥ ದೇವರ ಜಾತ್ರೆಯ ಪ್ರಯುಕ್ತ ಬಿಸಿಗಾಳಿ ತುಂಬಿದ ಬಲೂನ್ ಹಾರಿ ಬಿಡುವ ಸಂಪ್ರದಾಯವನ್ನು ಆಚರಿಸಿಕೊಂಡು ಬಂದಿದ್ದು ಈ ವರ್ಷವು ಸಹ ಜಾತ್ರೆ ಅದ್ದೂರಿಯಾಗಿ ನಡೆಯಿತು. ಪ್ರತಿವರ್ಷ ಕಾರ್ತಿಕಮಾಸದ ದ್ವಿತೀಯಾ ದಿನದಂದು ಮಾಜಾಳಿಯ ರಾಮನಾಥ ದೇವರ ಜಾತ್ರೆ ನಡೆಯುತ್ತದೆ. ರಾಮನಾಥ ದೇವಸ್ಥಾನದಿಂದ ಪಲ್ಲಕ್ಕಿಯಲ್ಲಿ ರಾಮನಾಥ ದೇವರ ಮೂರ್ತಿಯನ್ನು ರಾತ್ರಿ ಸಾತೇರಿದೇವಿ ದೇವಸ್ಥಾನಕ್ಕೆ ತರಲಾಗುತ್ತದೆ. ಅಲ್ಲಿ ಬೆಳಿಗ್ಗೆ ದೇವರ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಕುಳಾವಿ ಜನರು ಕಟ್ಟಿರುವ ತೋರಣಗಳ ಬಳಿ ತೆರಳುವ ಪಲ್ಲಕ್ಕಿಗೆ ಜನರು ಆರತಿ ಬೆಳಗಿ ಹೂವು ಹಣ್ಣು ನೀಡಿ ಪೂಜೆ ಸಲ್ಲಿಸುತ್ತಾರೆ. ಇನ್ನು ಈ ಜಾತ್ರೆಯಲ್ಲಿ ವಿಶೇಷ ಆಕರ್ಷಣೆ ಅಂದರೆ ಜಾತ್ರೆಯ ನಿಮಿತ್ತ ಗ್ರಾಮದಲ್ಲಿ ಹಾರಿ ಬಿಡುವ ಬಿಸಿಗಾಳಿ ಬಲೂನು. ಗ್ರಾಮದ ಕೆಲ ಯುವಕರು ಒಟ್ಟಾಗಿ ಪೇಪರ್‌ನಿಂದ ಸ್ಥಳೀಯವಾಗಿ ವಾಫರ್ ಎಂದು ಕರೆಯುವ ಬಲೂನನ್ನ ತಯಾರಿಸುತ್ತಾರೆ. ವಾರಗಳ ಕಾಲ ಕೂತು ತಯಾರಿಸುವ ಈ ವಾಫರನ್ನು ಪಲ್ಲಕ್ಕಿ ಬಂದ ಸಂದರ್ಭದಲ್ಲಿ ಹಾರಿ ಬಿಡಲಾಗುತ್ತದೆ.

ಬಲೂನ್ ಜಾತ್ರೆಯೆಂದೇ ಪ್ರಸಿದ್ಧಿ ಪಡೆದಿರೋ ಈ ಜಾತ್ರೆಗೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಎರಡು ದಿನಗಳ ಕಾಲ ಊರಿನವರು ಭಕ್ತಿ ಹಾಗೂ ಶ್ರದ್ಧೆಯಿಂದ ತಲೆತಲಾಂತರಗಳಿಂದ ಬಂದ ಈ ಉತ್ಸವವನ್ನ ಆಚರಿಸುತ್ತಾರೆ. ಹಾಗೆ ಕೊನೆಯ ದಿನ ಊರಿನವರೇ ತಯಾರಿಸಿದ 20 ಅಡಿ ಎತ್ತರ, 8 ಅಡಿ ಅಗಲದ ಬಲೂನನ್ನು ಹಾರಿಬಿಡುತ್ತಾರೆ. ಜಾತ್ರೆಯ ಕೊನೆಯ ದಿನ ಬೆಳಿಗ್ಗೆ ಹಾಗೂ ಸಂಜೆ ಈ ರೀತಿ ಎರಡು ಬಲೂನುಗಳನ್ನ ಆಕಾಶಕ್ಕೆ ತೇಲಿ ಬಿಡುತ್ತಾರೆ. ಬೆಳಿಗ್ಗೆ ಗ್ರಾಮದ ಸಾತೇರಿ ದೇವಸ್ಥಾನದ ಬಳಿ ಬಲೂನ್ ಹಾರಿಸಿದರೆ ಸಂಜೆ ವೇಳೆ ರಾಮನಾಥ ದೇವಾಲಯದ ಬಳಿ ಬಿಡುತ್ತಾರೆ. ಇನ್ನು ಬೃಹತ್ ಗಾತ್ರದ ಬಲೂನನ್ನ ಆಕಾಶಕ್ಕೆ ಬಿಡುವುದನ್ನ ನೋಡುವುದಕ್ಕಾಗಿಯೇ ಗೋವಾ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯ ಸಾಕಷ್ಟು ಮಂದಿ ಭಕ್ತರು ದೇವಾಲಯದ ಬಳಿ ಸೇರುತ್ತಾರೆ. ಬಲೂನ್ ಹಾರುವಾಗ ಹರಹರ ಮಹಾದೇವ ಎನ್ನುತ್ತಾ ಕೇಕೇ ಚಪ್ಪಾಳೆ ಹಾಕೋ ಮೂಲಕ ಎಲ್ಲರೂ ಈ ದೃಶ್ಯವನ್ನ ಕಣ್ತುಂಬಿಕೊಂಡು ಸಂಭ್ರಮಿಸುತ್ತಾರೆ.

ಇನ್ನು ಗ್ರಾಮದಲ್ಲಿನ ಕಷ್ಟ, ತೊಂದರೆ, ರೋಗ ಇತ್ಯಾದಿ ಸಂಕಷ್ಟಗಳು ಹೊಗೆಯ ರೂಪದಲ್ಲಿ ಗ್ರಾಮದಿಂದ ಹಾರಿ ಹೋಗಲಿ ಎನ್ನುವ ಉದ್ದೇಶದಿಂದ ಜಾತ್ರೆಯ ಸಂದರ್ಭದಲ್ಲಿ ಈ ರೀತಿ ವಾಫರ್ ಹಾರಿ ಬಿಡಲಾಗುತ್ತದೆ. ಆಕಾಶಕ್ಕೆ ಹಾರಿಬಿಡುವ ಈ ವಾಫರ್ ಸಾಕಷ್ಟು ಎತ್ತರದಲ್ಲಿ ಗಂಟೆಗಟ್ಟಲೇ ಹಾರಿ ನಂತರ ಸಮುದ್ರದಲ್ಲಿ ಬೀಳುತ್ತದೆ. ಹೀಗೆ ಬಿದ್ದರೆ ಗ್ರಾಮದಲ್ಲಿನ ತೊಂದರೆಗಳು ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಗ್ರಾಮಸ್ಥರದ್ದು.

ವಿನಾಯಕ ಬಡಿಗೇರ ಟಿವಿ 9 ಕಾರವಾರ

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ