AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ; ಮನೆಗೆ ಭೇಟಿ ಕೊಟ್ಟು ಸೇತುವೆಗೆ ಅಳತೆ ತೆಗೆದುಕೊಂಡ ಅಧಿಕಾರಿಗಳು!

ಉತ್ತರ ಕನ್ನಡ ಜಿಲ್ಲಾಡಳಿತ ತುಳಸಜ್ಜಿ ಮನವಿಗೆ ಸ್ಪಂದಿಸಿ ಮನೆ ಮುಂದೆ ಸೇತುವೆ ನಿರ್ಮಿಸಲು ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಾಳಿ ಗ್ರಾಮದಲ್ಲಿರುವ ತುಳಸಿಗೌಡ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಸೇತುವೆ ನಿರ್ಮಿಸಲು ಅಳತೆ ತೆಗೆದುಕೊಂಡು ಹೋಗಿದ್ದಾರೆ.

ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ; ಮನೆಗೆ ಭೇಟಿ ಕೊಟ್ಟು ಸೇತುವೆಗೆ ಅಳತೆ ತೆಗೆದುಕೊಂಡ ಅಧಿಕಾರಿಗಳು!
ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ
TV9 Web
| Edited By: |

Updated on:Jul 08, 2022 | 9:10 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು ಮಳೆರಾಯ ಜನರನ್ನ ಹಿಂಡಿ ಹಿಪ್ಪೆ ಮಾಡುತ್ತಿದ್ದಾನೆ. ಮತ್ತೊಂದು ಕಡೆ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರವರ ಮನೆಗೆ ತೆರಳಲು ಸೇತುವೆಯೇ ಇಲ್ಲದೆ ಪರದಾಡುತ್ತಿದ್ದಾರೆ. ಮನೆಯ ಮುಂದೆ ಹಳ್ಳ ಹರಿಯುತ್ತಿದ್ದು ಓಡಾಡಲು ತೊಂದರೆಯಾಗುತ್ತಿದೆ. ಸೇತುವೆ ನಿರ್ಮಿಸುವಂತೆ ಪದ್ಮಶ್ರೀ ಪುರಸ್ಕೃತೆ ತುಳಸಿಗೌಡರವರು ಮನವಿ ಮಾಡಿ ವಿಡಿಯೋ ಮಾಡಿದ್ದರು. ಸದ್ಯ ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದೆ.

ಉತ್ತರ ಕನ್ನಡ ಜಿಲ್ಲಾಡಳಿತ ತುಳಸಜ್ಜಿ ಮನವಿಗೆ ಸ್ಪಂದಿಸಿ ಮನೆ ಮುಂದೆ ಸೇತುವೆ ನಿರ್ಮಿಸಲು ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಾಳಿ ಗ್ರಾಮದಲ್ಲಿರುವ ತುಳಸಿಗೌಡ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಸೇತುವೆ ನಿರ್ಮಿಸಲು ಅಳತೆ ತೆಗೆದುಕೊಂಡು ಹೋಗಿದ್ದಾರೆ.

ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರು ತಮ್ಮ ಸಮುದಾಯದಂತೆಯೇ ಆಧುನಿಕ ಜೀವನಶೈಲಿಯಿಂದ ದೂರ ಉಳಿದವರು. ಭೂಮಿಯನ್ನು ಪ್ರೀತಿಸುವ ಇವರು, ಬರಿಗಾಲಲ್ಲೇ ಕಾಡು- ಮೇಡು ಅಲೆದು ಮರಗಿಡಿಗಳನ್ನು ಕಾಯುತ್ತಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಬರಿಗಾಲಲ್ಲೇ ತೆರಳಿ ಪ್ರಶಸ್ತಿ ಸ್ವೀಕರಿಸಿ ಅವರು ಗಮನ ಸೆಳೆದಿದ್ದರು. ಅವರನ್ನು ವೃಕ್ಷ ಮಾತೆ ಎಂದು ಕರೆಯಲು ಕಾರಣ, ಒಂದಲ್ಲಾ ಎರಡಲ್ಲಾ, ಲಕ್ಷಕ್ಕೂ ಅಧಿಕ ಮರಗಳನ್ನು ಬೆಳೆಸಿದ್ದಾರೆ. ತುಳಸಿಗೌಡಗೆ ಪರಿಸರ ಪ್ರೀತಿ ಎಷ್ಟಿದೆ ಎಂದರೆ, ಇವರನ್ನು ಮರಗಳ ವಿಜ್ಞಾನಿ ಎಂದೇ ಹೇಳಬಹುದು. ಯಾವ ಯಾವ ಗಿಡಗಳನ್ನು ಯಾವ ಋತುವಿನಲ್ಲಿ ನೆಡಬೇಕು, ಎಷ್ಟು ನೀರು, ಗೊಬ್ಬರ ಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ, ಹೀಗೆ ಅರಣ್ಯದಲ್ಲಿನ ಸುಮಾರು 300ಕ್ಕೂ ಹೆಚ್ಚು ಪ್ರಭೇದದ ಮರಗಳ ಬಗ್ಗೆ ತುಳಸಿ ಅವರಿಗೆ ಮಾಹಿತಿ ಇದೆ. ಅರಣ್ಯದಲ್ಲಿನ ಪ್ರತಿ ಮರಗಳ ನಾಡಿ ಮಿಡಿತವನ್ನು ತುಳಸಿ ಹೇಳುತ್ತಾರೆ. ತನ್ನ ಸುತ್ತಮುತ್ತಲೂ ಯಾರು ಮರಗಳನ್ನು ಕಡಿಯದಂತೆ, ಮರಗಳನ್ನು ತನ್ನ ಮಕ್ಕಳಂತೆ ಸಾಕುತ್ತಾರೆ.

Published On - 8:53 pm, Fri, 8 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್