AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ; ಮನೆಗೆ ಭೇಟಿ ಕೊಟ್ಟು ಸೇತುವೆಗೆ ಅಳತೆ ತೆಗೆದುಕೊಂಡ ಅಧಿಕಾರಿಗಳು!

ಉತ್ತರ ಕನ್ನಡ ಜಿಲ್ಲಾಡಳಿತ ತುಳಸಜ್ಜಿ ಮನವಿಗೆ ಸ್ಪಂದಿಸಿ ಮನೆ ಮುಂದೆ ಸೇತುವೆ ನಿರ್ಮಿಸಲು ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಾಳಿ ಗ್ರಾಮದಲ್ಲಿರುವ ತುಳಸಿಗೌಡ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಸೇತುವೆ ನಿರ್ಮಿಸಲು ಅಳತೆ ತೆಗೆದುಕೊಂಡು ಹೋಗಿದ್ದಾರೆ.

ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಸ್ಪಂದಿಸಿದ ಜಿಲ್ಲಾಡಳಿತ; ಮನೆಗೆ ಭೇಟಿ ಕೊಟ್ಟು ಸೇತುವೆಗೆ ಅಳತೆ ತೆಗೆದುಕೊಂಡ ಅಧಿಕಾರಿಗಳು!
ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ
TV9 Web
| Edited By: |

Updated on:Jul 08, 2022 | 9:10 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು ಮಳೆರಾಯ ಜನರನ್ನ ಹಿಂಡಿ ಹಿಪ್ಪೆ ಮಾಡುತ್ತಿದ್ದಾನೆ. ಮತ್ತೊಂದು ಕಡೆ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರವರ ಮನೆಗೆ ತೆರಳಲು ಸೇತುವೆಯೇ ಇಲ್ಲದೆ ಪರದಾಡುತ್ತಿದ್ದಾರೆ. ಮನೆಯ ಮುಂದೆ ಹಳ್ಳ ಹರಿಯುತ್ತಿದ್ದು ಓಡಾಡಲು ತೊಂದರೆಯಾಗುತ್ತಿದೆ. ಸೇತುವೆ ನಿರ್ಮಿಸುವಂತೆ ಪದ್ಮಶ್ರೀ ಪುರಸ್ಕೃತೆ ತುಳಸಿಗೌಡರವರು ಮನವಿ ಮಾಡಿ ವಿಡಿಯೋ ಮಾಡಿದ್ದರು. ಸದ್ಯ ಪದ್ಮಶ್ರೀ ಪುರಸ್ಕೃತೆ ತುಳಸಿಗೌಡ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದೆ.

ಉತ್ತರ ಕನ್ನಡ ಜಿಲ್ಲಾಡಳಿತ ತುಳಸಜ್ಜಿ ಮನವಿಗೆ ಸ್ಪಂದಿಸಿ ಮನೆ ಮುಂದೆ ಸೇತುವೆ ನಿರ್ಮಿಸಲು ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಾಳಿ ಗ್ರಾಮದಲ್ಲಿರುವ ತುಳಸಿಗೌಡ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಸೇತುವೆ ನಿರ್ಮಿಸಲು ಅಳತೆ ತೆಗೆದುಕೊಂಡು ಹೋಗಿದ್ದಾರೆ.

ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರು ತಮ್ಮ ಸಮುದಾಯದಂತೆಯೇ ಆಧುನಿಕ ಜೀವನಶೈಲಿಯಿಂದ ದೂರ ಉಳಿದವರು. ಭೂಮಿಯನ್ನು ಪ್ರೀತಿಸುವ ಇವರು, ಬರಿಗಾಲಲ್ಲೇ ಕಾಡು- ಮೇಡು ಅಲೆದು ಮರಗಿಡಿಗಳನ್ನು ಕಾಯುತ್ತಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಬರಿಗಾಲಲ್ಲೇ ತೆರಳಿ ಪ್ರಶಸ್ತಿ ಸ್ವೀಕರಿಸಿ ಅವರು ಗಮನ ಸೆಳೆದಿದ್ದರು. ಅವರನ್ನು ವೃಕ್ಷ ಮಾತೆ ಎಂದು ಕರೆಯಲು ಕಾರಣ, ಒಂದಲ್ಲಾ ಎರಡಲ್ಲಾ, ಲಕ್ಷಕ್ಕೂ ಅಧಿಕ ಮರಗಳನ್ನು ಬೆಳೆಸಿದ್ದಾರೆ. ತುಳಸಿಗೌಡಗೆ ಪರಿಸರ ಪ್ರೀತಿ ಎಷ್ಟಿದೆ ಎಂದರೆ, ಇವರನ್ನು ಮರಗಳ ವಿಜ್ಞಾನಿ ಎಂದೇ ಹೇಳಬಹುದು. ಯಾವ ಯಾವ ಗಿಡಗಳನ್ನು ಯಾವ ಋತುವಿನಲ್ಲಿ ನೆಡಬೇಕು, ಎಷ್ಟು ನೀರು, ಗೊಬ್ಬರ ಬೇಕು, ಯಾವ ಗಿಡಗಳು ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತದೆ, ಹೀಗೆ ಅರಣ್ಯದಲ್ಲಿನ ಸುಮಾರು 300ಕ್ಕೂ ಹೆಚ್ಚು ಪ್ರಭೇದದ ಮರಗಳ ಬಗ್ಗೆ ತುಳಸಿ ಅವರಿಗೆ ಮಾಹಿತಿ ಇದೆ. ಅರಣ್ಯದಲ್ಲಿನ ಪ್ರತಿ ಮರಗಳ ನಾಡಿ ಮಿಡಿತವನ್ನು ತುಳಸಿ ಹೇಳುತ್ತಾರೆ. ತನ್ನ ಸುತ್ತಮುತ್ತಲೂ ಯಾರು ಮರಗಳನ್ನು ಕಡಿಯದಂತೆ, ಮರಗಳನ್ನು ತನ್ನ ಮಕ್ಕಳಂತೆ ಸಾಕುತ್ತಾರೆ.

Published On - 8:53 pm, Fri, 8 July 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು