AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಕುಡಿದ ಮತ್ತಿನಲ್ಲಿ ಸಾರಿಗೆ ನೌಕರನ ಮೇಲೆ ಹಲ್ಲೆ ನಡೆಸಿ ರಂಪಾಟ

ಏಕಾಏಕಿ ಸಾರಿಗೆ ಬಸ್ ಅಡ್ಡಕಟ್ಟಿ ರಂಪಾಟ ಮಾಡಿದ ವ್ಯಕ್ತಿ ನೌಕಾ ಸೇನೆಯ ನೌಕರ ಎಂದು ಹೇಳಲಾಗುತ್ತಿದೆ. ಸದ್ಯ ಟೋಲ್ ಸಿಬ್ಬಂದಿ ಗಲಾಟೆ ನಿಲ್ಲಿಸಿ ವಾತಾವರಣ ತಿಳಿಗೊಳಿಸಿದ್ದಾರೆ.

ಕಾರವಾರ: ಕುಡಿದ ಮತ್ತಿನಲ್ಲಿ ಸಾರಿಗೆ ನೌಕರನ ಮೇಲೆ ಹಲ್ಲೆ ನಡೆಸಿ ರಂಪಾಟ
ಕುಡಿದ ಮತ್ತಿನಲ್ಲಿ ಸಾರಿಗೆ ನೌಕರನ ಮೇಲೆ ಹಲ್ಲೆ ನಡೆಸಿ ರಂಪಾಟ
TV9 Web
| Edited By: ಆಯೇಷಾ ಬಾನು|

Updated on:Aug 10, 2022 | 5:06 PM

Share

ಕಾರವಾರ: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಸಾರಿಗೆ ನೌಕರರ ಮೇಲೆ ಪುಂಡಾಟಿಕೆ ತೋರಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿ ಟೋಲ್ ಗೇಟ್ ಬಳಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ, ಸಾರಿಗೆ ಬಸ್ ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಬಸ್ ಕೀ ಕಸಿದು ಚಾಲಕನನ್ನ ಎಳೆದಾಡಿದ್ದಾನೆ.

ಏಕಾಏಕಿ ಸಾರಿಗೆ ಬಸ್ ಅಡ್ಡಕಟ್ಟಿ ರಂಪಾಟ ಮಾಡಿದ ವ್ಯಕ್ತಿ ನೌಕಾ ಸೇನೆಯ ನೌಕರ ಎಂದು ಹೇಳಲಾಗುತ್ತಿದೆ. ಸದ್ಯ ಟೋಲ್ ಸಿಬ್ಬಂದಿ ಗಲಾಟೆ ನಿಲ್ಲಿಸಿ ವಾತಾವರಣ ತಿಳಿಗೊಳಿಸಿದ್ದಾರೆ.

ಮೀಟರ್ ಬಾಕ್ಸ್ ನಲ್ಲಿ ನಾಗರಹಾವು

ಉಡುಪಿ: ಮೆಸ್ಕಾಂ ಮೀಟರ್ ಬಾಕ್ಸ್ ನಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು ಜನರು ಭಯ ಭೀತರಾದ ಘಟನೆ ಉಡುಪಿಯಲ್ಲಿ ನಡೆದಿದೆ. ಚಿಟ್ಪಾಡಿಯ ರಾಜಗೋಪಲ್ ಬಲ್ಲಾಳ್ ಎಂಬವರ ಮೀಟರ್ ಬಾಕ್ಸ್ ನಲ್ಲಿ ನಾಗರಹಾವಿನ ಮರಿ ಅವಿತುಕೊಂಡಿತ್ತು. ವಿದ್ಯುತ್ ಬಿಲ್ ರೀಡಿಂಗ್ ಮಾಡಲು ಬಂದಾಗ ಮರಿ ಹಾವು ಇರುವುದು ಬೆಳಕಿಗೆ ಬಂದಿದೆ. ಬಾಕ್ಸ್ ನ ಬಾಗಿಲು ತೆರದ ಕೂಡಲೇ ನಾಗರಹಾವು ಬುಸುಗುಟ್ಟಿದೆ. ಅದೃಷ್ಟವಶಾತ್ ಮೆಸ್ಕಾ ಸಿಬ್ಬಂದಿ ಯಾವುದೇ ಅಪಘಾತವಾಗದೇ ಸೇಫ್ ಆಗಿದ್ದಾರೆ. ಉಡುಪಿ ತಾಲೂಕಿನ ಅಲೆವೂರು ಗ್ರಾಮ ಮೆಸ್ಕಾಂ ಸಿಬ್ಬಂದಿ ಮಾಧವ ಎಂಬವರಿಗೆ ಕಡಿಯಲು ಬಂದಾಗ ನಾಗರಹಾವಿನ ಮರಿ ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.

ಶಿರಸಿಯಲ್ಲಿ ತಲೆಯನ್ನೇ ಕಿತ್ತು ಹರಿದು ಹಾಕಿದ ಕರಡಿ; ವ್ಯಕ್ತಿ ಸ್ಥಳದಲ್ಲೇ ಸಾವು

ಕಾರವಾರ: ಕರಡಿ ದಾಳಿಗೆ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೇವನಹಳ್ಳಿಯಲ್ಲಿ ನಡೆದಿದೆ. ಓಂಕಾರ ಜೈನ್(52) ಕರಡಿ ದಾಳಿಗೆ ಮೃತಪಟ್ಟಿರುವ ವ್ಯಕ್ತಿ. ಓಂಕಾರ್ ಕಾಡಿಗೆ ತೆರಳಿದ್ದ ವೇಳೆ ಕರಡಿ ಏಕಾಏಕಿ ದಾಳಿ ನಡೆಸಿದೆ. ದಾಳಿ ವೇಳೆ ತಲೆ ಭಾಗವನ್ನೆ ಕಿತ್ತು ಹರಿದು ಹಾಕಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Published On - 4:30 pm, Wed, 10 August 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!