Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ: ಈ ಜಿಲ್ಲೆಯಲ್ಲಿ ಹುಟ್ಟುವ ಮಕ್ಕಳೆಲ್ಲಾ ಅಂಗವಿಕಲರು

ಉತ್ತರ ಕನ್ನಡದಲ್ಲಿ 40 ವರ್ಷಗಳ ಹಿಂದೆ ಎಂಡೋಸಲ್ಫಾನ್ ಸಿಂಪಡಣೆಯಿಂದಾಗಿ ಹುಟ್ಟಿದ ಅಂಗವಿಕಲ ಮಕ್ಕಳ ಸಮಸ್ಯೆ ಇನ್ನೂ ಮುಂದುವರಿದಿದೆ. ಇತ್ತೀಚಿನ ಸರ್ವೆಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿವೆ. ಎರಡನೇ ಪೀಳಿಗೆಯಲ್ಲಿಯೂ ಈ ಸಮಸ್ಯೆ ಮುಂದುವರೆಯುವ ಆತಂಕವಿದೆ. ಬಲಿಪಶುಗಳಿಗೆ ಸೂಕ್ತ ಪರಿಹಾರ ಮತ್ತು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳುವ ಅಗತ್ಯವಾಗಿದೆ.

ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ: ಈ ಜಿಲ್ಲೆಯಲ್ಲಿ ಹುಟ್ಟುವ ಮಕ್ಕಳೆಲ್ಲಾ ಅಂಗವಿಕಲರು
ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ: ಈ ಜಿಲ್ಲೆಯಲ್ಲಿ ಹುಟ್ಟುವ ಮಕ್ಕಳೆಲ್ಲಾ ಅಂಗವಿಕಲರು
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 20, 2025 | 2:33 PM

ಕಾರವಾರ, ಮಾರ್ಚ್​ 19: ಕಳೆದ ನಾಲವತ್ತು ವರ್ಷಗಳ ಹಿಂದೆ ಗೇರುಬಿಜ ಇಳುವರಿಗಾಗಿ, ಎಂಡೋಸಲ್ಫಾನ್ (Endosulfan) ರಾಸಾಯನಿಕ ಸಿಂಪಡಣೆ ಮಾಡಲಾಗಿತ್ತು. ಆದರೆ ಅದರ ಇಫೆಕ್ಟ್ ಇವತ್ತಿಗೂ ಮುಗಿದಿಲ್ಲ. ಗೇರು ತೋಟದ ಸುತ್ತಲಿನ ಪ್ರದೇಶಗಳಲ್ಲಿ ಜನ್ಮ ತಾಳುವ ಮಕ್ಕಳು ಇವತ್ತಿಗೂ ಅಂಗವಿಕಲರಾಗಿ (disabled) ಹುಟ್ಟುತ್ತಿವೆ. ಹಿರೋಶಿಮಾ ನಾಗಸಕಿಯಲ್ಲಿ ಬಾಂಬ್ ಸ್ಫೋಟ್ ಆಗಿದ್ದರ ಪರಿಣಾಮ ಇವತ್ತಿಗೂ ಆ ಭೂಮಿಯಲ್ಲಿ ಹುಟ್ಟುವ ಮಕ್ಕಳು ಅಂಗವಿಕಲರಾಗಿ ಹುಟ್ಟುತ್ತವೆ ಎಂಬ ಮಾತಿದೆ. ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 40 ವರ್ಷಗಳ ಹಿಂದೆ ಸಿಂಪಡಿಸಿದ ರಾಸಾಯನಿಕದ ಇಫೆಕ್ಟ್ ಇವತ್ತಿಗೂ ಕಾಡುತ್ತಿದ್ದು, ಕಳೆದ 40 ವರ್ಷಗಳಿಂದ ಆ ಪ್ರದೇಶದಲ್ಲಿ ಜನ್ಮ ತಾಳುವ ಮಕ್ಕಳು ಅಂಗವಿಕಲರಾಗಿ ಹುಟ್ಟುತ್ತಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲವತ್ತು ವರ್ಷಗಳ ಹಿಂದೆ ಗೇರುಬೀಜದ ಇಳುವರಿ ಹಾಗೂ ರೋಗ ಭಾದೆ ತಡೆಯಲು ಎಂಡೋಸಲ್ಫಾನ್ ರಾಸಾಯನಿಕ ಸಿಂಪಡಣೆ ಮಾಡಲಾಗಿತ್ತು. ಅದರ ಪರಿಣಾಮ ಆ ಪ್ರದೇಶದಲ್ಲಿ ಜನ್ಮ ತಾಳುವ ಕಂದಮ್ಮಗಳ ಮೇಲೆ ಪರಿಣಾಮ ಬೀರುತ್ತಿದ್ದು, ಒಂದೊಂದು ಕುಟುಂಬದ ಪರಿಸ್ಥಿತಿ ನೋಡಿದರೆ ಕಣ್ಣಿರು ಬರುತ್ತೆ. ಆದರೂ ಸಹಿತ ಇವತ್ತಿಗೂ ಇದರ ಎಫೆಕ್ಟ್ ತಡೆಯಲು ಸಾಧ್ಯ ಆಗದೆ ಇರುವುದು ದೊಡ್ಡ ಆತಂಕ ಸೃಷ್ಟಿಸಿದೆ.

ಇದನ್ನೂ ಓದಿ: ಈ ಜಿಲ್ಲೆಯಲ್ಲಿ ಅತಿ ಹೆಚ್ಚು ತಾಪಮಾನ: 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಉಷ್ಣಾಂಶ

ಇದನ್ನೂ ಓದಿ
Image
ಈ ಬಾರಿ ಕರಾವಳಿ ಜಿಲ್ಲೆಯಲ್ಲೇ ದಾಖಲಾಯ್ತು ರಾಜ್ಯದ ಅತಿ ಹೆಚ್ಚು ತಾಪಮಾನ
Image
‘ನಾನೂ ಡಿಸಿ ಆಗಬೇಕು’: ವಿದ್ಯಾರ್ಥಿನಿ ಮಾತಿಗೆ ಡಿಸಿ ಮಾಡಿದ್ದೇನು ಗೊತ್ತಾ?
Image
ಸಚಿವರಿಂದ ಅರಣ್ಯ ಭೂಮಿ ಒತ್ತುವರಿ ಆರೋಪ: ಮಂಕಾಳು ವೈದ್ಯ ವಿರುದ್ಧ ದೂರು
Image
ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ

ಇನ್ನೂ ಎಂಡೋಸಲ್ಫಾನ್ ರಾಸಾಯನಿಕ ಸಿಂಪಡಣೆ ಪರಿಣಾಮವಾಗಿ ದಕ್ಷಿಣ ಕನ್ನಡದಲ್ಲಿ 3,607 ಜನರು, ಉಡುಪಿಯಲ್ಲಿ 1,514 ಜನರು, ಉತ್ತರಕನ್ನಡ ಜಿಲ್ಲೆಯಲ್ಲಿ 1,793 ಜನರು ಸೇರಿ ಒಟ್ಟು 6,914 ಜನರು ಬಹುವಿಧದ ಅಂಗವೈಕಲ್ಯಕ್ಕೆ ತುತ್ತಾಗಿದ್ದಾರೆ ಎಂದು ದಾಖಲೆಗಳು ಹೇಳುತ್ತವೆ. ಆದರೆ ಗೇರು ನೆಡುತೋಪಿನ 5 ಕಿ.ಮೀ. ಸುತ್ತಳತೆಯಲ್ಲಿ ನಡೆಸಲಾದ ಸಮೀಕ್ಷೆಯೇ ಸರಿಯಾಗಿ ಆಗದ ಕಾರಣ ಇನ್ನೂ ಸಾವಿರಾರು ಜನ ಎಂಡೋ ಬಾಧಿತರ ಪಟ್ಟಿಯಲ್ಲಿ ಸೇರಿಲ್ಲ ಎನ್ನುವ ಆರೋಪವಿತ್ತು. ಇದೀಗ ಎರಡನೇ ಹಂತದ ಸರ್ವೆಯಲ್ಲಿ 631 ಪ್ರಕರಣ ಪತ್ತೆಯಾಗಿರುವ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.

ಯಾವೆಲ್ಲಾ ಊರುಗಳಲ್ಲಿ ಎಂಡೋಸಲ್ಫಾನ್​​ ಸಮಸ್ಯೆ?

ಈ ವಿಚಾರವಾಗಿ ಮಾತನಾಡಿದ ಉತ್ತರ ಕನ್ನಡ ಡಿಎಚ್ಒ ಡಾ.ನೀರಜ್, 2015-16ರಲ್ಲಿ ಸರ್ವೆ ಮಾಡಲಾಗಿತ್ತು. ಅದಾದ ನಂತರ 2024ರಲ್ಲಿ ಬಿಟ್ಟು ಹೋದ ಪ್ರಕರಣ ಸರ್ವೆ ಮಾಡಲಾಗಿತ್ತು. ಭಟ್ಕಳ, ಶಿರಸಿ-ಸಿದ್ದಾಪುರ, ಶಿರಾಲಿ, ಕುಮಟಾ, ಹೊನ್ನಾವರ, ಅಂಕೋಲಾದಲ್ಲಿ ಸರ್ವೆ ಮಾಡಲಾಗಿದ್ದು 1 ವರ್ಷದಲ್ಲಿ ಮಾಡಿದ ಸರ್ವೆಯಲ್ಲಿ 631 ಹೊಸ ಪ್ರಕರಣ ಪತ್ತೆಯಾಗಿದೆ. ತಜ್ಞ ವೈದ್ಯರಿಂದ ಸಹ ಪರೀಕ್ಷೆ ಮಾಡಿಸಲಾಗಿದೆ ಎಂದಿರುವ ಡಿಹೆಚ್​​ಓ ಈಗಾಗಲೇ ಹೊಸದಾಗಿ ಪತ್ತೆಯಾಗಿರುವ ಪ್ರಕರಣದವರ ಮಾಹಿತಿ ಪಡೆದು ಇಲಾಖೆ ವತಿಯಿಂದ ಅಂಗವಿಕಲ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದರು.

1985ರಿಂದ 2010-11ರವರೆಗೆ ಎಂಡೋಸಲ್ಫಾನ್ ಸ್ಪ್ರೇಯಿಂದ ಆದ ಪರಿಣಾಮ ಮೊದಲ ಸರ್ವೆಯಲ್ಲಿ ಯಾರ ಯಾರ ಮೇಲೆ ಆಗಿದೆ ಎಂದು ಪತ್ತೆಯಾಗಿತ್ತು. ಈಗ ಎರಡನೇ ಹಂತದ ಸರ್ವೆ ಮಾಡುವ ಮೂಲಕ ಬಿಟ್ಟು ಹೋದವರ ಪತ್ತೆ ಕಾರ್ಯ ಮಾಡಲಾಗುತ್ತಿದೆ. ಎರಡನೇ ಪೀಳಿಗೆ ಎಂಡೋಸಲ್ಫಾನ್ ಬಂದಿರುವ ಸಾಧ್ಯತೆ ಇದ್ದು ಈ ಬಗ್ಗೆ ಸಂಶೊಧನೆ ನಡೆಸಬೇಕಾಗಿದೆ. 10 ವರ್ಷದ ಒಳಗಿನ ಮಕ್ಕಳ ಪತ್ತೆ ಈ ಪ್ರಕರಣದಲ್ಲಿ ಆಗಿಲ್ಲ ಎಂದು ಡಾ. ನೀರಜ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ನಾನೂ ನಿಮ್ಮಂತೆ ಡಿಸಿ ಆಗಬೇಕು’: ವಿದ್ಯಾರ್ಥಿನಿ ಮಾತಿಗೆ ಉತ್ತರ ಕನ್ನಡ ಡಿಸಿ ಮಾಡಿದ್ದೇನು ಗೊತ್ತಾ?

ಸುಮಾರು 40 ವರ್ಷದ ಹಿಂದಿನ ಘಟನೆಯಿಂದ ಸಾವಿರಾರು ಜನರು ಅಂಗವೈಕಲ್ಯಕೊಳಗಾಗಿ ಜೀವನವನ್ನೇ ಹಾಸಿಗೆಯಲ್ಲಿ ಕಳೆಯುವಂತಾಗಿತ್ತು. ಸದ್ಯ ಎಂಡೋಸಲ್ಫಾನ್ ಪ್ರಕರಣ ಮತ್ತೆ ಪತ್ತೆಯಾಗಿದ್ದು, ಒಂದೊಮ್ಮೆ ಎರಡನೇ ಪೀಳಿಗೆಗೆ ಮುಂದುವರೆದರೆ ಸಾಕಷ್ಟು ಜನರಿಗೆ ಸಮಸ್ಯೆ ಆಗಲಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಮುಂಜಾಗೃತೆ ವಹಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Wed, 19 March 25

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು