AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಮತ್ತಿಬ್ಬರ ರಕ್ಷಣೆ

ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಪವನ್​ ನಾಯ್ಕ(20) ಮೃತ ವಿದ್ಯಾರ್ಥಿ.

ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು: ಮತ್ತಿಬ್ಬರ ರಕ್ಷಣೆ
ಮುರುಡೇಶ್ವರ ಕಡಲತೀರ
ಗಂಗಾಧರ​ ಬ. ಸಾಬೋಜಿ
|

Updated on:Jun 13, 2023 | 8:05 PM

Share

ಉತ್ತರ ಕನ್ನಡ: ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ (student) ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಪವನ್​ ನಾಯ್ಕ(20) ಮೃತ ವಿದ್ಯಾರ್ಥಿ. ಎಲೆಕ್ಟ್ರಾನಿಕ್ ಸಿಟಿಯಿಂದ ಮುರ್ಡೇಶ್ವರಕ್ಕೆ 6 ಸ್ನೇಹಿತರು ಬಂದಿದ್ದರು. ಪವನ್ ಸೇರಿದಂತೆ ಮೂವರು ಈಜಲು ಸಮುದ್ರಕ್ಕೆ ಇಳಿದಿದ್ದರು. ಪವನ್ ನಾಯ್ಕ ಮೃತಪಟ್ಟಿದ್ದು, ಮತ್ತಿಬ್ಬರನ್ನು ಸ್ಥಳೀಯರು ರಕ್ಷಿಸಿದ್ದರು. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೊಚ್ಚಿಹೋದ ಪ್ರವಾಸಿಗ

ಸಮುದ್ರಕ್ಕೆ ಇಳಿದಿದ್ದ ಮೂವರು ಪ್ರವಾಸಿಗರ ಪೈಕಿ ಇಬ್ಬರನ್ನು ರಕ್ಷಣೆ ಮಾಡಿದ್ದು, ಓರ್ವ ಕೊಚ್ಚಿಹೋಗಿರುವಂತಹ ಘಟನೆ ನಿನ್ನೆ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲತೀರದಲ್ಲಿ ನಡೆದಿತ್ತು. ಕೊಚ್ಚಿಹೋದ ಸಂತೋಷ್ ಹುಲಿಗೊಂಡ(19)ಗಾಗಿ ಹುಡುಕಾಟ ನಡೆದಿದ್ದು, ಹಸನ್ ಮಜ್ಜಿಗಿ ಗೌಡರ್(21), ಸಂಜೀವ್ ಹೆಬ್ಬಳ್ಳಿ(20) ಇಬ್ಬರ ರಕ್ಷಣೆ ಮಾಡಲಾಗಿದೆ.

ಇದನ್ನೂ ಓದಿ: Yadgir News: ಜಾನುವಾರುಗಳನ್ನು ಕದ್ದು ಸಾಗಿಸುತ್ತಿದ್ದ 8 ಆರೋಪಿಗಳ ಬಂಧನ: ಕರುಗಳು ಸೇರಿ 25 ಹಸುಗಳ ರಕ್ಷಣೆ

ಧಾರವಾಡ ಜಿಲ್ಲೆ ಕಲಘಟಗಿ ಮೂಲದ 22 ಜನರು ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದರು. ಚಂಡಮಾರುತದ ಪರಿಣಾಮ ಬೃಹತ್​ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರಕ್ಕೆ ಇಳಿಯದಂತೆ ಸೂಚನಾ ಫಲಕ ಹಾಕಿದ್ದರೂ ನಿರ್ಲಕ್ಷ್ಯ ಮಾಡಿದ್ದಾರೆ. ಕೊಚ್ಚಿಹೋದ ಸಂತೋಷ್ ಹುಲಿಗೊಂಡಗಾಗಿ ಲೈಫ್​ಗಾರ್ಡ್ಸ್​ ಶೋಧ ಮಾಡುತ್ತಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ 

ಮೈಸೂರು: ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಗೀತಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ವಣಕನಪುರ ಗ್ರಾಮದವರಾದ ಬಾಲಕಿ ಗೀತಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು, ತೀವ್ರ ನೋವು ತಾಳಲಾರದೇ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ತಾಯಿ ಕೊಂದು ಸೂಟ್​​ಕೇಸ್​​ನಲ್ಲಿ ಠಾಣೆಗೆ ಶವ ತಂದ ಮಗಳು: ಆರೋಪಿ ಹೇಳಿಕೆಗೆ ಪೊಲೀಸರೇ ಶಾಕ್

ಮೈಸೂರಿನ ನದಿಯಲ್ಲಿ ಅಪರಿಚಿತ ಶವ ಪತ್ತೆ

ಮೈಸೂರು: ಹುಣಸೂರು ತಾಲ್ಲೂಕಿನ ಕರಿ ಮಾರಮ್ಮ ದೇವಾಲಯದ ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಶವದ ಎಡಗೈಯಲ್ಲಿ ಸಾಯಿಕುಮಾರ್ ಹಾಗೂ ಬಲಗೈಯಲ್ಲಿ ಎಸ್​ಜಿ ಗೀತಾ ಎಂದು ಹಚ್ಚೆ ಗುರುತು ಇದೆ. ನೀಲಿ ಬಣ್ಣದ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ಬಿಳಿಗೆರೆಯುಳ್ಳ ಶರ್ಟ್ ಧರಿಸಿರುವ ವ್ಯಕ್ತಿಯ ಮೃತ ದೇಹದ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:58 pm, Tue, 13 June 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ