AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ನದಿಯ ಹೊಸ ಸೇತುವೆ ಕೂಡ ಸೇಫ್ ಅಲ್ಲ; ಮತ್ತೊಂದು ಅನಾಹುತವಾಗುವ ಸುಳಿವು ಬಿಚ್ಚಿಟ್ಟ ಕಾರವಾರ ಶಾಸಕ

ಕಾಳಿ ನದಿಯ ಹೊಸ ಸೇತುವೆ(Kali River Bridge) ಕೂಡ ಸೇಫ್ ಇಲ್ಲ, ಈ ಕುರಿತು ಹಿಂದೆಯೇ ಪ್ರತಿಭಟನೆ ಮಾಡಿದ್ದೆ. ಆದ್ರೆ, ಸ್ಥಳೀಯರು ಅದಕ್ಕೆ ರಾಜಕೀಯ ತಿರುವು ಕೊಟ್ಟರು. ಜನರ ಜೀವದ ವಿಚಾರದಲ್ಲಿ ರಾಜಕೀಯ ಮಾಡಿದಕ್ಕೆ ಬೇಸರವಾಗಿ ಪ್ರತಿಭಟನೆ ಕೈ ಬಿಟ್ಟೆ ಎನ್ನುವ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನಾಹುತವಾಗುವ ಸುಳಿವನ್ನು ಕಾರವಾರ ಶಾಸಕ ಸತೀಶ್​ ಸೈಲ್​ ಬಿಚ್ಚಿಟ್ಟಿದ್ದಾರೆ.

ಕಾಳಿ ನದಿಯ ಹೊಸ ಸೇತುವೆ ಕೂಡ ಸೇಫ್ ಅಲ್ಲ; ಮತ್ತೊಂದು ಅನಾಹುತವಾಗುವ ಸುಳಿವು ಬಿಚ್ಚಿಟ್ಟ ಕಾರವಾರ ಶಾಸಕ
ಕಾರವಾರ ಶಾಸಕ ಸತೀಶ್​ ಸೈಲ್
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 16, 2024 | 4:51 PM

Share

ಉತ್ತರ ಕನ್ನಡ, ಆ.16: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನಾಹುತವಾಗುವ ಸುಳಿವನ್ನು ಕಾರವಾರ ಶಾಸಕ ಸತೀಶ್ ಸೈಲ್(Satish Sail) ಬಿಚ್ಚಿಟ್ಟಿದ್ದಾರೆ. ಅಂಕೋಲಾದ ಶಿರೂರಿನಲ್ಲಿ ಮಾತನಾಡಿದ ಅವರು, ‘ಕಾಳಿ ನದಿಯ ಹೊಸ ಸೇತುವೆ(Kali River Bridge) ಕೂಡ ಸೇಫ್ ಇಲ್ಲ, ಈ ಕುರಿತು ಹಿಂದೆಯೇ ಪ್ರತಿಭಟನೆ ಮಾಡಿದ್ದೆ. ಆದ್ರೆ, ಸ್ಥಳೀಯರು ಅದಕ್ಕೆ ರಾಜಕೀಯ ತಿರುವು ಕೊಟ್ಟರು. ಜನರ ಜೀವದ ವಿಚಾರದಲ್ಲಿ ರಾಜಕೀಯ ಮಾಡಿದಕ್ಕೆ ಬೇಸರವಾಗಿ ಪ್ರತಿಭಟನೆ ಕೈ ಬಿಟ್ಟೆ. ಈಗ ಆ ಸೇತುವೆ ಬಿರುಕು ಬಿಟ್ಟಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ ಎಂದರು.

ಇನ್ನು ವಾರದ ಹಿಂದೆ ಹಳೆ ಸೇತುವೆ ಕುಸಿದ ಹಿನ್ನೆಲೆ ಎರಡು ಬದಿಯ ವಾಹನಗಳು ಒಂದೇ ಸೇತುವೆ ಮೇಲೆ ಸಂಚರಿಸುತ್ತಿವೆ. ಹೀಗಾಗಿ ಸಂಬಂಧಪಟ್ಟವರು ಆದಷ್ಟು ಬೇಗ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ ಅನಾಹುತ ಆಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಐಆರ್​ಬಿ ಯವರು ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ:ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್

ಸುಮಾರು 41 ವರ್ಷಗಳಿಂದ ಕಾರವಾರ-ಗೋವಾ ನಡುವೆ ಸಂಚಾರಕ್ಕೆ ಬಳಕೆಯಾಗುತ್ತಿದ್ದ ಸೇತುವೆ ಆ.7 ರ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದುಬಿದ್ದಿತ್ತು. ಈ ದುರ್ಘಟನೆಯಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೂಡಲೇ ಹಳೆಯ ಸೇತುವೆ ಪಕ್ಕದಲ್ಲಿದ್ದ ಹೊಸ ಸೇತುವೆ ಮೇಲೆ ಸಂಚಾರ ನಿರ್ಭಂದಿಸಿ, ಸೇತುವೆಯ ಗುಣಮಟ್ಟದ ಕುರಿತು ವರದಿ ನೀಡುವಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್‌ಬಿ ಕಂಪೆನಿಗೆ ಸೂಚನೆ ನೀಡಿದ್ದರು. ಅದರಂತೆ ಪರಿಶೀಲನೆ ನಡೆಸಿದ ಬಳಿಕ ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು ನೀಡಿತ್ತು. ಇದೀಗ ಕಾರವಾರ ಶಾಸಕ ಸತೀಶ್ ಸೈಲ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ