AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ನದಿಯ ಹೊಸ ಸೇತುವೆ ಕೂಡ ಸೇಫ್ ಅಲ್ಲ; ಮತ್ತೊಂದು ಅನಾಹುತವಾಗುವ ಸುಳಿವು ಬಿಚ್ಚಿಟ್ಟ ಕಾರವಾರ ಶಾಸಕ

ಕಾಳಿ ನದಿಯ ಹೊಸ ಸೇತುವೆ(Kali River Bridge) ಕೂಡ ಸೇಫ್ ಇಲ್ಲ, ಈ ಕುರಿತು ಹಿಂದೆಯೇ ಪ್ರತಿಭಟನೆ ಮಾಡಿದ್ದೆ. ಆದ್ರೆ, ಸ್ಥಳೀಯರು ಅದಕ್ಕೆ ರಾಜಕೀಯ ತಿರುವು ಕೊಟ್ಟರು. ಜನರ ಜೀವದ ವಿಚಾರದಲ್ಲಿ ರಾಜಕೀಯ ಮಾಡಿದಕ್ಕೆ ಬೇಸರವಾಗಿ ಪ್ರತಿಭಟನೆ ಕೈ ಬಿಟ್ಟೆ ಎನ್ನುವ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನಾಹುತವಾಗುವ ಸುಳಿವನ್ನು ಕಾರವಾರ ಶಾಸಕ ಸತೀಶ್​ ಸೈಲ್​ ಬಿಚ್ಚಿಟ್ಟಿದ್ದಾರೆ.

ಕಾಳಿ ನದಿಯ ಹೊಸ ಸೇತುವೆ ಕೂಡ ಸೇಫ್ ಅಲ್ಲ; ಮತ್ತೊಂದು ಅನಾಹುತವಾಗುವ ಸುಳಿವು ಬಿಚ್ಚಿಟ್ಟ ಕಾರವಾರ ಶಾಸಕ
ಕಾರವಾರ ಶಾಸಕ ಸತೀಶ್​ ಸೈಲ್
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 16, 2024 | 4:51 PM

Share

ಉತ್ತರ ಕನ್ನಡ, ಆ.16: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನಾಹುತವಾಗುವ ಸುಳಿವನ್ನು ಕಾರವಾರ ಶಾಸಕ ಸತೀಶ್ ಸೈಲ್(Satish Sail) ಬಿಚ್ಚಿಟ್ಟಿದ್ದಾರೆ. ಅಂಕೋಲಾದ ಶಿರೂರಿನಲ್ಲಿ ಮಾತನಾಡಿದ ಅವರು, ‘ಕಾಳಿ ನದಿಯ ಹೊಸ ಸೇತುವೆ(Kali River Bridge) ಕೂಡ ಸೇಫ್ ಇಲ್ಲ, ಈ ಕುರಿತು ಹಿಂದೆಯೇ ಪ್ರತಿಭಟನೆ ಮಾಡಿದ್ದೆ. ಆದ್ರೆ, ಸ್ಥಳೀಯರು ಅದಕ್ಕೆ ರಾಜಕೀಯ ತಿರುವು ಕೊಟ್ಟರು. ಜನರ ಜೀವದ ವಿಚಾರದಲ್ಲಿ ರಾಜಕೀಯ ಮಾಡಿದಕ್ಕೆ ಬೇಸರವಾಗಿ ಪ್ರತಿಭಟನೆ ಕೈ ಬಿಟ್ಟೆ. ಈಗ ಆ ಸೇತುವೆ ಬಿರುಕು ಬಿಟ್ಟಿರುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ ಎಂದರು.

ಇನ್ನು ವಾರದ ಹಿಂದೆ ಹಳೆ ಸೇತುವೆ ಕುಸಿದ ಹಿನ್ನೆಲೆ ಎರಡು ಬದಿಯ ವಾಹನಗಳು ಒಂದೇ ಸೇತುವೆ ಮೇಲೆ ಸಂಚರಿಸುತ್ತಿವೆ. ಹೀಗಾಗಿ ಸಂಬಂಧಪಟ್ಟವರು ಆದಷ್ಟು ಬೇಗ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ ಅನಾಹುತ ಆಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಐಆರ್​ಬಿ ಯವರು ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ:ಕಾರವಾರ ಸೇತುವೆ ಕುಸಿತ: ಕಾಳಿ ನದಿಗೆ ಬಿದ್ದು ಬದುಕಿ ಬಂದ ರೋಚಕ ಅನುಭವ ವಿವರಿಸಿದ ಲಾರಿ ಚಾಲಕ ಬಾಲ ಮುರುಗನ್

ಸುಮಾರು 41 ವರ್ಷಗಳಿಂದ ಕಾರವಾರ-ಗೋವಾ ನಡುವೆ ಸಂಚಾರಕ್ಕೆ ಬಳಕೆಯಾಗುತ್ತಿದ್ದ ಸೇತುವೆ ಆ.7 ರ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದುಬಿದ್ದಿತ್ತು. ಈ ದುರ್ಘಟನೆಯಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೂಡಲೇ ಹಳೆಯ ಸೇತುವೆ ಪಕ್ಕದಲ್ಲಿದ್ದ ಹೊಸ ಸೇತುವೆ ಮೇಲೆ ಸಂಚಾರ ನಿರ್ಭಂದಿಸಿ, ಸೇತುವೆಯ ಗುಣಮಟ್ಟದ ಕುರಿತು ವರದಿ ನೀಡುವಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಐಆರ್‌ಬಿ ಕಂಪೆನಿಗೆ ಸೂಚನೆ ನೀಡಿದ್ದರು. ಅದರಂತೆ ಪರಿಶೀಲನೆ ನಡೆಸಿದ ಬಳಿಕ ಹೊಸ ಸೇತುವೆ ಮೂಲಕ ವಾಹನ ಸಂಚಾರಕ್ಕೆ NHAI ಅಸ್ತು ನೀಡಿತ್ತು. ಇದೀಗ ಕಾರವಾರ ಶಾಸಕ ಸತೀಶ್ ಸೈಲ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!