AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಭಟ್ಕಳ​​ದಲ್ಲಿ ಸಾವರ್ಕರ್ ವೃತ್ತ ಮತ್ತು ಭಗವಾಧ್ವಜ ತೆರವು, ಗ್ರಾಮಸ್ಥರ ಪ್ರತಿಭಟನೆ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಘಟನೆ ನಡೆದಿದೆ. ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ ಸಾವರ್ಕರ್ ವೃತ್ತ ಮತ್ತು ಭಗವಾಧ್ವಜವನ್ನು ತೆರವುಗೊಳಿಸಲಾಗಿದೆ.

ಕಾರವಾರ: ಭಟ್ಕಳ​​ದಲ್ಲಿ ಸಾವರ್ಕರ್ ವೃತ್ತ ಮತ್ತು ಭಗವಾಧ್ವಜ ತೆರವು, ಗ್ರಾಮಸ್ಥರ ಪ್ರತಿಭಟನೆ
ಧ್ವಜ ತೆರವು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jan 30, 2024 | 5:37 PM

Share

ಕಾರವಾರ, ಜನವರಿ 30: ಮಂಡ್ಯ (Mandya) ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ (Hanuman Flag) ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಘಟನೆ ನಡೆದಿದೆ. ಭಟ್ಕಳ (Batakal) ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ ಸಾವರ್ಕರ್ (Savarkar) ವೃತ್ತ ಮತ್ತು ಭಗವಾಧ್ವಜವನ್ನು ತೆರವುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ತೆಂಗಿನಗುಂಡಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಬಿಜೆಪಿ ಮುಖಂಡರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದ್ ನಾಯ್ಕ್, ಸುಬ್ರಾಯ ದೇವಾಡಿಗ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸಾವರ್ಕರ್ ನಾಮಫಲಕ ಅಳವಡಿಕೆಗೆ ಒಪ್ಪಿಗೆ ನೀಡಲಾಗಿತ್ತು. ಈಗ ಗ್ರಾಮ ಪಂಚಾಯಿತಿ ಪಿಡಿಒ ಏಕಾಏಕಿ ಜೆಸಿಬಿ ಮೂಲಕ ನಾಮಫಲಕ ತೆರವುಗೊಳಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವು ಪ್ರಕರಣ: ಗ್ರಾಮಸ್ಥರ ವಿರುದ್ಧ ಮತ್ತೆರಡು FIR ದಾಖಲು

ಯಾವ ಅಪ್ಪನ ಮನೆ ಆಸ್ತಿ ಅಂತಾ ಧ್ವಜಸ್ತಂಭ ತೆಗೆದಿದ್ದೀರಿ? ಇದೇನು ಪಾಕಿಸ್ತಾನ ಅಂತಾ ತೆಗೆದ್ರಾ? ಹಿಂದೂಗಳು ಬೇವರ್ಸಿಗಳು ಅಂತ ಅಂದುಕೊಂಡು ತೆಗೆದ್ರಾ? ಹಿಂದೂಗಳು ಸುಮ್ಮನೆ ಕುಳಿತಿಲ್ಲ, ನಿಮಗೆ ಯಾರ ಒತ್ತಡವಿದೆ ಹೇಳಿ. ಇದು ಭಟ್ಕಳ, ಯಾರದ್ದೋ ಕೈಗೊಂಬೆಯಾಗಿ ಆಟವಾಡಬೇಡಿ ಎಂದು ಬಿಜೆಪಿ ಮುಖಂಡ ಗೋವಿಂದ ನಾಯ್ಕ್ ಪಿಡಿಒಗೆ ತರಾಟೆಗೆ ತೆಗೆದುಕೊಂಡರು.

ಪೊಲೀಸರ ವಿರೋಧದ ನಡುವೆಯೂ ತೆಂಗಿನಗುಂಡಿಯಲ್ಲಿ ಧ್ವಜಕಟ್ಟೆ‌ ನಿರ್ಮಾಣ ಮಾಡಲಾಗಿದೆ. ಪೊಲೀಸರು ಹೆದರಿಸಿದರೂ ಕ್ಯಾರೇ ಎನ್ನದೇ ಮೊದಲಿಗಿಂತಲೂ ದೊಡ್ಡ ಧ್ವಜಕಟ್ಟೆಯನ್ನು ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯರು ನಿರ್ಮಿಸಿದ್ದಾರೆ. ಇದರಿಂದ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯರ ಮಧ್ಯೆ ವಾಗ್ವಾದ ಏರ್ಪಟ್ಟಿದೆ. ಅಲ್ಲದೆ ಸ್ಥಳದಲ್ಲಿದ್ದ ಪಿಡಿಒ ಅನ್ನು ಬಿಜೆಪಿ ನಾಯಕರು ಹಾಗೂ ಸ್ಥಳೀಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಸ್ಥಳಕ್ಕೆ ತಹಶೀಲ್ದಾರ್ ತಿಪ್ಪೇಸ್ವಾಮಿ ಭೇಟಿ ನೀಡಿದ್ದು, ಶಾಂತಿ ಕದಡದಂತೆ ಜನರಲ್ಲಿ ಮನವಿ ಮಾಡಲಾಗಿದೆ.

ರಾಜ್ಯದ ಜನ ಕಾಂಗ್ರೆಸ್​ಗೆ ದೊಡ್ಡ ಪಾಠ ಕಲಿಸುತ್ತಾರೆ: ಹೆಗಡೆ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾನೂನು ಬದ್ಧವಾಗಿ ಡಿಸಿಯಿಂದ ಅನುಮತಿ ಪಡೆದು ಧ್ವಜ ಹಾಕಿದ್ದರು. ಗ್ರಾಮ ಪಂಚಾಯಿಂದ ಠರಾವು ಆಗಿ ಕಾನೂನಾತ್ಮಕವಾಗಿಯೇ ಧ್ವಜ ಹಾರಿಸಿದ್ದಾರೆ. ರಾಜಕಾರಣಕ್ಕಾಗಿ ಈ ರೀತಿ ವಿರೋಧ ಮಾಡುವುದು ಒಳ್ಳೆಯ ಲಕ್ಷಣ ಅಲ್ಲ. ಇದೆಲ್ಲವನ್ನೂ ರಾಜ್ಯದ ಪ್ರಜ್ಞಾವಂತ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯದ ಜನ ಕಾಂಗ್ರೆಸ್​ಗೆ ದೊಡ್ಡ ಪಾಠ ಕಲಿಸಲಿದ್ದಾರೆ ಎಂದು ಕುಮಟಾದಲ್ಲಿ ಸಂಸದ ಅನಂತಕುಮಾರ್​​ ಹೆಗಡೆ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:34 pm, Tue, 30 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್