AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಎರಡು ಕಾಡಾನೆಗಳ ನಡುವೆ ಗುದ್ದಾಟ: ಒಂದು ಆನೆ ಸಾವು

ಜೋಯಿಡಾ ತಾಲ್ಲೂಕಿನ ಪಶು ವೈದ್ಯಾಧಿಕಾರಿ ಪ್ರದೀಪ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಮೃತ ಆನೆಯ ಶವ ಸಂಸ್ಕಾರ ನೆರವೇರಿಸಲಾಗಿದೆ.

ಕಾರವಾರ: ಎರಡು ಕಾಡಾನೆಗಳ ನಡುವೆ ಗುದ್ದಾಟ: ಒಂದು ಆನೆ ಸಾವು
ಎರಡು ಕಾಡಾನೆಗಳ ನಡುವೆ ಗುದ್ದಾಟ: ಒಂದು ಆನೆ ಸಾವು
TV9 Web
| Edited By: |

Updated on: May 12, 2022 | 4:07 PM

Share

ಕಾರವಾರ: ಎರಡು ಕಾಡಾನೆಗಳು ಗುದ್ದಾಡಿ ಅವುಗಳಲ್ಲಿ ಒಂದು ಆನೆಯ ಕೊಂಬಿನ ಇರಿತಕ್ಕೆ ಗಂಭೀರ ಗಾಯಗೊಂಡ ಮತ್ತೊಂದು ಆನೆ ಮೃತಪಟ್ಟ ಘಟನೆ ದಾಂಡೇಲಿ ತಾಲೂಕಿನ ಕುಳಗಿ ವಲಯ ಅರಣ್ಯ ವ್ಯಾಪ್ತಿಯ ಕೇಗದಾಳ ಅರಣ್ಯದಲ್ಲಿ ನಡೆದಿದೆ. ಇಲ್ಲಿಯ ಅರಣ್ಯದಲ್ಲಿದ್ದ ಎರಡು ಗಂಡಾನೆಗಳು ತಮ್ಮ ತಮ್ಮೊಳಗೆ ಕಾದಾಟ ನಡೆಸಿವೆ. ಈ ಸಂದರ್ಭದಲ್ಲಿ ಒಂದು ಆನೆ ತನ್ನ ದಂತದಿಂದ ಎದುರಾಳಿ ಆನೆಯ ಹೊಟ್ಟೆ, ಸೊಂಡಿಲು, ಕೊರಳಿನ ಭಾಗದಲ್ಲಿ ಬಲವಾಗಿ ತಿವಿದಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಈ ಆನೆ ಅದೇ ಅರಣ್ಯಕ್ಕೆ ಹೊಂದಿಕೊಂಡಿರುವ ಬೊಮ್ನಳ್ಳಿ ಹತ್ತಿರದ ಹಳ್ಳದಲ್ಲಿ ಬಿದ್ದಿತ್ತು. ವಿಷಯ ತಿಳಿದ ಅರಣ್ಯ ಇಲಾಖೆಯವರು ತಕ್ಷಣ ಪಶು ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮರುದಿನ ಆನೆ ಕೊನೆಯುಸಿರೆಳೆದಿದೆ.

ಜೋಯಿಡಾ ತಾಲ್ಲೂಕಿನ ಪಶು ವೈದ್ಯಾಧಿಕಾರಿ ಪ್ರದೀಪ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನಂತರ ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಮೃತ ಆನೆಯ ಶವ ಸಂಸ್ಕಾರ ನೆರವೇರಿಸಲಾಗಿದೆ. ಈ ಸಂದರ್ಭದಲ್ಲಿ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತರಾಜು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ತೋಡಕರ, ನಗೆಯ ವಲಯಾರಣ್ಯಧಿಕಾರಿ ಅಭಿಷೇಕ್ ನಾಯ್ಕ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗ್ರಾಮಕ್ಕೆ ನುಗ್ಗಿದ ಕಾಡಾನೆ ಜೊತೆ ಮರಿಯಾನೆ

ಹಾಸನ: ಮರಿಯಾನೆ ಜೊತೆ ಕಾಡಾನೆ ಗ್ರಾಮಕ್ಕೆ ನುಗ್ಗಿರುವಂತಹ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ನಡೆದಿದೆ. ರಾತ್ರಿ 9 ಗಂಟೆ ಸುಮಾರಿಗೆ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಸಕಲೇಶಪುರ, ಆಲೂರು ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದೆ. ಹಗಲು ರಾತ್ರಿ ಎನ್ನದೆ ಗ್ರಾಮಕ್ಕೆ  ಗಜಪಡೆ ನುಗ್ಗುತ್ತಿವೆ. ಕಾಡಾನೆ ಹಾವಳಿ ನಿಯಂತ್ರಿಸದ ಅರಣ್ಯ ಸಿಬ್ಬಂದಿ ಶಾಶ್ವತ ಪರಿಹಾರ ಕಲ್ಪಿಸದ ಸರ್ಕಾರದ ವಿರುದ್ಧ ಜನರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.