AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಕಾರಿ ದರ ಗಗನಕ್ಕೆ ಏರಿದ ಬೆನ್ನಲ್ಲೇ ಮೀನುಗಳ ಬೆಲೆ ಕೂಡ ಏರಿಕೆ

ರಾಜ್ಯದಲ್ಲಿ ದಿನನಿತ್ಯ ಬಳಕೆಯ ಎಲ್ಲ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರ ಮಧ್ಯೆ ಮೀನು ಮಾರುಕಟ್ಟೆಯಲ್ಲಿ ತಾಜಾ ಮೀನುಗಳ ಬೆಲೆ ಕೂಡ ಏರಿಕೆಯಾಗಿದೆ.

ತರಕಾರಿ ದರ ಗಗನಕ್ಕೆ ಏರಿದ ಬೆನ್ನಲ್ಲೇ ಮೀನುಗಳ ಬೆಲೆ ಕೂಡ ಏರಿಕೆ
ಕಾರವಾರ ಮೀನು ಮಾರುಕಟ್ಟೆ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on:Jul 12, 2023 | 8:13 AM

ಕಾರವಾರ: ರಾಜ್ಯದಲ್ಲಿ ದಿನನಿತ್ಯ ಬಳಕೆಯ ಎಲ್ಲ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತರಕಾರಿ (Vegetable), ದಿನಸಿ ಸಾಮಾಗ್ರಿ ಹಾಗೂ ತಿನ್ನುವ ಎಲೆಗಳ ಬೆಲೆ ದುಬಾರಿಯಾಗಿದ್ದು ಜನರು ಹೈರಾಣಾಗಿದ್ದಾರೆ. ಕರುನಾಡಿನಲ್ಲಿ ಮಳೆ (Rain) ಅಭವಾದಿಂದ ಇಳುವರಿ ಕಡಿಮೆಯಾದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರಿವೆ. ಇದೀಗ ಮೀನು ಮಾರುಕಟ್ಟೆಯಲ್ಲಿ (Fish Market) ತಾಜಾ ಮೀನುಗಳ ಬೆಲೆ ಕೂಡ ಏರಿಕೆಯಾಗಿದೆ.

ಜೂನ್​​ ಮತ್ತು ಜುಲೈ ಎರಡು ತಿಂಗಳಲ್ಲಿ ಮೀನು ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆ. ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿರುವುದರಿಂದ ಯಾಂತ್ರೀಕೃತ ಮೀನುಗಾರಿಕೆ ಮತ್ತು ಸಂಪ್ರದಾಯಿಕ ಮೀನುಗಾರಿಕೆ ರಾಜ್ಯ ಸರ್ಕಾರ ಜೂನ್ 1 ರಿಂದ ಜುಲೈ 30ರ ವರಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಹೇರಿದೆ. ಈ ಹಿನ್ನಲೆ ಮೀನುಗಳ ಬೆಲೆ ಹೆಚ್ಚಿದೆ.

ಇದನ್ನೂ ಓದಿ: ತರಕಾರಿ ರೇಟ್ ಗಗನಕ್ಕೆ ಏರಿದ ಬೆನ್ನಲ್ಲೇ ಇದೀಗ ವೀಳ್ಯ, ‌ಕಪ್ಪು ಎಲೆ ರೇಟೂ ದುಬಾರಿ

ಮೀನುಗಾರಿಕೆ ಇಲ್ಲದ ಪರಿಣಾಮ ತಾಜಾ ಮೀನುಗಳ ಬೆಲೆ ಗಗನಕ್ಕೆ ಏರಿದೆ. ತಾಜಾ ಮೀನುಗಳ ಬೆಲೆ ಏರಿಕೆ ಹಿನ್ನಲೆ ಮೀನು ಪ್ರೀಯರು ಒಣ ಮೀನುಗಳನ್ನು ಖರೀದಿ ಮಾಡುತ್ತಿದ್ದಾರೆ.

  1. ಒಂದು ದೊಡ್ಡ (100 ಗ್ರಾಂ) ಬಾಂಗಡೆ 80 ರೂ. (ಮೊದಲಿನ ದರ 50 ರೂ.)
  2. ಕೊಕ್ಕರೆ 1ಕೆಜಿಗೆ 320 ರೂ (ಮೊದಲಿನ ದರ 150 ರೂ.)
  3. ಇಸ್ವಾಣ 1 ಕೆಜಿಗೆ 450 ರೂ. (ಮೊದಲಿನ ದರ 300 ರೂ.)
  4. ಭೂತಾಯಿ 100 ರೂಗೆ ನಾಲ್ಕು ಮೀನು (ಮೊದಲು ಹತ್ತು ಕೊಡಲಾಗುತ್ತಿತ್ತು)
  5. ಪಾಂಪ್ಲೆಟ್ 1ಕೆಜಿಗೆ 1500 ರೂ. (ಮೊದಲು 700 ರಿಂದ 800 ರೂ.)
  6. ಭೂ ತಾಯಿ ಮೀನು 1ಕೆಜಿಗೆ 400 ರೂ. (ಮೊದಲಿನ ದರ 250 ರೂ.)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:13 am, Wed, 12 July 23

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್