AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರ ಪ್ರತಿಭಟನೆ, ಮತ್ಸ್ಯ ಪ್ರಿಯರಿಗಿಲ್ಲ ಮೀನೂಟ

ಕಾರವಾರ: ಕರಾವಳಿಗರಿಗೆ ಮೀನು ಅನ್ನೋದು ಅಚ್ಚು ಮೆಚ್ಚಿನ ಆಹಾರ. ಪ್ರತಿದಿನ ಮೀನು ಇರಲೇ ಬೇಕು. ಆದ್ರೆ ಕರಾವಳಿ ನಗರಿ ಕಾರವಾರದಲ್ಲಿ ಮಾತ್ರ ಇದೀಗ ಮೀನಿಗೆ ಜನರು ಪರದಾಡುವಂತಾಗಿದೆ. ಕಡಲಿಗೆ ಹೋಗಿ ಖಾಲಿ ಕೈಯಲ್ಲಿ ವಾಪಸ್ ಆಗ್ತಿದ್ದಾರೆ. ಬೋಟ್​ಗಳು ಕಡಲಿಗೆ ಇಳಿದಿಲ್ಲ. ಮೀನುಗಾರರು ಕೂಡ ಕಣ್ಣಿಗೆ ಕಾಣಿಸ್ತಿಲ್ಲ. ಮಾರುಕಟ್ಟೆಯ ಬಾಗಿಲ್ ಕ್ಲೋಸ್ ಆಗಿದೆ. ಮೀನು ಖರೀದಿಗೆ ಬಂದವರು ಕೂಡ ಖಾಲಿ ಕೈನಲ್ಲಿ ವಾಪಸ್ ಆಗ್ತಿದ್ದಾರೆ. ಯಾಕಂದ್ರೆ, ಇಲ್ಲಿ ಎಲ್ಲವೂ ಬಂದ್.. ಬಂದ್.. ಬಂದ್. ಇದು ಉತ್ತರ ಕನ್ನಡ ಜಿಲ್ಲೆಯ […]

ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರ ಪ್ರತಿಭಟನೆ, ಮತ್ಸ್ಯ ಪ್ರಿಯರಿಗಿಲ್ಲ ಮೀನೂಟ
ಸಾಧು ಶ್ರೀನಾಥ್​
|

Updated on:Jan 20, 2020 | 3:29 PM

Share

ಕಾರವಾರ: ಕರಾವಳಿಗರಿಗೆ ಮೀನು ಅನ್ನೋದು ಅಚ್ಚು ಮೆಚ್ಚಿನ ಆಹಾರ. ಪ್ರತಿದಿನ ಮೀನು ಇರಲೇ ಬೇಕು. ಆದ್ರೆ ಕರಾವಳಿ ನಗರಿ ಕಾರವಾರದಲ್ಲಿ ಮಾತ್ರ ಇದೀಗ ಮೀನಿಗೆ ಜನರು ಪರದಾಡುವಂತಾಗಿದೆ. ಕಡಲಿಗೆ ಹೋಗಿ ಖಾಲಿ ಕೈಯಲ್ಲಿ ವಾಪಸ್ ಆಗ್ತಿದ್ದಾರೆ.

ಬೋಟ್​ಗಳು ಕಡಲಿಗೆ ಇಳಿದಿಲ್ಲ. ಮೀನುಗಾರರು ಕೂಡ ಕಣ್ಣಿಗೆ ಕಾಣಿಸ್ತಿಲ್ಲ. ಮಾರುಕಟ್ಟೆಯ ಬಾಗಿಲ್ ಕ್ಲೋಸ್ ಆಗಿದೆ. ಮೀನು ಖರೀದಿಗೆ ಬಂದವರು ಕೂಡ ಖಾಲಿ ಕೈನಲ್ಲಿ ವಾಪಸ್ ಆಗ್ತಿದ್ದಾರೆ. ಯಾಕಂದ್ರೆ, ಇಲ್ಲಿ ಎಲ್ಲವೂ ಬಂದ್.. ಬಂದ್.. ಬಂದ್.

ಇದು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ. ಇಲ್ಲಿನ ಮೀನುಗಾರರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಕಡಲಿನ ಕಡೆ ಮುಖನೂ ಮಾಡ್ತಿಲ್ಲ. ವ್ಯಾಪಾರನೂ ನಡೀತಿಲ್ಲ. ಎಲ್ಲ ಕಡೆ ಬಿಕೋ ಎನ್ನುತ್ತಿದೆ. ಯಾಕಂದ್ರೆ, ವಾಣಿಜ್ಯ ಬಂದರು ವಿಸ್ತರಣೆಯನ್ನ ವಿರೋಧಿಸಿ ಮೀನುಗಾರರು ಹೋರಾಟ ನಡೆಸ್ತಿದ್ದಾರೆ.

ಅಂದ್ಹಾಗೆ, ಕರಾವಳಿ ಭಾಗದಲ್ಲಿ ಮೀನು ಅನ್ನೋದು ಅತೀ ಮುಖ್ಯ ಆಹಾರ. ಪ್ರತಿದಿನ ತಮ್ಮ ಊಟದಲ್ಲಿ ಮೀನು ಇರಲೇ ಬೇಕು ಎನ್ನುವವರೇ ಇಲ್ಲಿ ಜಾಸ್ತಿ. ಆದ್ರೆ, ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ಪ್ರತಿಭಟನೆಗೆ ಇಳಿದಿರೋದ್ರಿಂದ ಮೀನುಗಾರರು, ಮೀನು ಮಾರಾಟವನ್ನ ನಿಲ್ಲಿಸಿದ್ದಾರೆ. ಇದ್ರಿಂದ ಫಿಶ್ ಪ್ರಿಯರು, ಕಡಲಿಗೆ ಬಂದು ಬರೀ ಕೈನಲ್ಲಿ ವಾಪಸ್ ಹೋಗ್ತಿದ್ದಾರೆ.

ಇನ್ನು, ಸಾಗರಮಾಲ ಯೋಜನೆಯಡಿ ವಾಣಿಜ್ಯ ಬಂದರು ವಿಸ್ತರಣೆ ಮಾಡಿದರೆ ಮೀನುಗಾರಿಕೆಗೆ ಸಮಸ್ಯೆ ಆಗಲಿದೆ. ಜೊತೆಗೆ ಕಾರವಾರಕ್ಕೆ ಇರುವ ಏಕೈಕ ಕಡಲ ತೀರ ಟಾಗೋರ್ ಕಡಲ ತೀರಕ್ಕೆ ಸಹ ಹಾನಿಯಾಗಲಿದೆ ಅನ್ನೋದು ಮೀನುಗಾರರ ಆಗ್ರಹ. ಅದಕ್ಕಾಗಿಯೇ ಕಳೆದ ಸೋಮವಾರದಿಂದ ಹೋರಾಟ ಮಾಡ್ತಿರೋ ಮೀನುಗಾರರು, ಮೀನುಗಾರಿಕೆಯನ್ನೂ ಬಂದ್ ಮಾಡಿದ್ದಾರೆ. ನೂರಾರು ಬೋಟ್​ಗಳು ಸಹ ಲಂಗರು ಹಾಕಿ ನಿಂತಿದೆ.

ಒಟ್ನಲ್ಲಿ, ಕಳೆದ ಒಂದು ವಾರದಿಂದ ಮೀನು ಮಾರುಕಟ್ಟೆ ಸ್ಥಗತಿವಾಗಿದೆ. ಇದ್ರ ಎಫೆಕ್ಟ್ ಮತ್ಸ್ಯ ಪ್ರಿಯರಿಗೆ ತಟ್ಟಿದೆ. ಅಲ್ದೆ, ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೆ ಅನ್ನೋ ನಿರೀಕ್ಷೆಯಲ್ಲಿ ಮೀನುಗಾರರು ಇದ್ದಾರೆ.

Published On - 3:10 pm, Mon, 20 January 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ