Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಗಮನಕ್ಕೆ; ಇಂದಿನಿಂದ ಮೂರು ದಿನಗಳ ಕಾಲ ನೇತ್ರಾಣಿ ದ್ವೀಪದಲ್ಲಿ ಮೀನುಗಾರರು, ಪ್ರವಾಸಿಗರಿಗೆ ನಿರ್ಬಂಧ

ನೇತ್ರಾಣಿ ದ್ವೀಪದಲ್ಲಿ ನೌಕಾನೆಲೆ ಸಮರಾಭ್ಯಾಸ ಹಿನ್ನೆಲೆ ಮೂರು ದಿನಗಳ ಕಾಲ ಮೀನುಗಾರರು ಹಾಗೂ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಅ.14ರಿಂದ 16ರವರೆಗೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ನೇತ್ರಾಣಿ ದ್ವೀಪದಿಂದ 10 ನಾಟಿಕಲ್​​ ಮೈಲು ದೂರದವರೆಗೆ ನಿಷೇಧ ಹೇರಲಾಗಿದೆ.

ಪ್ರವಾಸಿಗರ ಗಮನಕ್ಕೆ; ಇಂದಿನಿಂದ ಮೂರು ದಿನಗಳ ಕಾಲ ನೇತ್ರಾಣಿ ದ್ವೀಪದಲ್ಲಿ ಮೀನುಗಾರರು, ಪ್ರವಾಸಿಗರಿಗೆ ನಿರ್ಬಂಧ
ನೇತ್ರಾಣಿ ದ್ವೀಪ
Follow us
TV9 Web
| Updated By: ಆಯೇಷಾ ಬಾನು

Updated on: Oct 14, 2024 | 7:29 AM

ಕಾರವಾರ, ಅ.14: ಬೋಟಿಂಗ್ ಎಂಜಾಯ್ ಮಾಡಲು, ಸ್ಕೂಬಾ ಡೈವಿಂಗ್ (Scuba Diving) ಮಾಡಲು ಸಾವಿರಾರು ಮಂದಿ ಭೇಟಿ ನೀಡುವ ನೇತ್ರಾಣಿ ದ್ವೀಪದಲ್ಲಿ (Netrani Island) ಮೀನುಗಾರರು ಹಾಗೂ ಪ್ರವಾಸಿಗರಿಗೆ ಮೂರು ದಿನಗಳ ಕಾಲ ನಿರ್ಬಂಧ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನೇತ್ರಾಣಿ ದ್ವೀಪದಲ್ಲಿ ನೌಕಾನೆಲೆ ಸಮರಾಭ್ಯಾಸ ಹಿನ್ನೆಲೆ ಮೂರು ದಿನಗಳ ಕಾಲ ಮೀನುಗಾರರು ಹಾಗೂ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ಅ.14ರಿಂದ 16ರವರೆಗೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ನೇತ್ರಾಣಿ ದ್ವೀಪದಿಂದ 10 ನಾಟಿಕಲ್​​ ಮೈಲು ದೂರದವರೆಗೆ ನಿಷೇಧ ಹೇರಲಾಗಿದೆ. ಆಗಸದಿಂದ ಯುದ್ಧ ಫೈಟರ್ ಮೂಲಕ ನೌಕಾದಳದಿಂದ ಸಮರಾಭ್ಯಾಸ ನಡೆಯಲಿದೆ. ಆಗಸದಿಂದ ನೇತ್ರಾಣಿ ದ್ವೀಪದಲ್ಲಿ ಫೈರಿಂಗ್ ನಡೆಯುವುದರಿಂದ ನೇತ್ರಾಣಿ ದ್ವೀಪದಲ್ಲಿ ಮೀನುಗಾರರು, ಪ್ರವಾಸಿಗರಿಗೆ 3 ದಿನ ನಿರ್ಬಂಧ ಹೇರಲಾಗಿದೆ.

ಮುರುಡೇಶ್ವರ ಕರ್ನಾಟಕದ ಪ್ರಸಿದ್ಧ ಸ್ಥಳ. ಇಲ್ಲಿಗೆ ಪ್ರತಿದಿನ ನೂರಾರ ಮಂದಿ ಭೇಟಿ ನೀಡುತ್ತಾರೆ. ಮುರುಡೇಶ್ವರ ದೇವಸ್ಥಾನ ನೋಡಲು, ಬೀಚ್​ನಲ್ಲಿ ಎಂಜಾಯ್ ಮಾಡಲು ಹಾಗೂ ನೇತ್ರಾಣಿ ದ್ವೀಪಕ್ಕೆ ಹೋಗಲು ಜನ ಸಾಗರವೇ ಹರಿದುಬರುತ್ತೆ. ಸದ್ಯ ನೌಕಾನೆಲೆ ಸಮರಾಭ್ಯಾಸ ಹಿನ್ನೆಲೆ ಸೋಮವಾರ, ಮಂಗಳವಾರ ಹಾಗೂ ಬುಧವಾರದಂದು ಇಲ್ಲಿ ಪ್ರವಾಸಿಗರು, ಮೀನುಗಾರರಿಗೆ ಪ್ರವೇಶವಿಲ್ಲ.

ಇದನ್ನೂ ಓದಿ: ಪತ್ನಿ ಹೆಸರಲ್ಲಿ ಸವದತ್ತಿ ಯಲ್ಲಮ್ಮಗೆ ಸಿದ್ದರಾಮಯ್ಯ ವಿಶೇಷ ಅರ್ಚನೆ

ನೇತ್ರಾಣಿ ದ್ವೀಪ ಸ್ಕೂಬಾ ಡೈವಿಂಗ್​ಗೆ ಹೆಸರುವಾಸಿಯಾಗಿದೆ. ಸ್ಕೂಬಾ ಡೈವಿಂಗ್​ ಮಾಡಲು ಇಲ್ಲಿಗೆ ಜನ ಭೇಟಿ ನೀಡುತ್ತಾರೆ, ಅದರಲ್ಲೂ ದಿ.ಪುನೀತ್ ರಾಜ್​ ಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿಯಲ್ಲಿ ಪುನೀತ್ ಅವರು ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್​ ಮಾಡಿದ್ದಾರೆ. ಈ ಚಿತ್ರದ ಬಳಿಕ ನೇತ್ರಾಣಿ ದ್ವೀಪಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ.

ಬಹುತೇಕರು ಶುಕ್ರವಾರ ಸಂಜೆ 6.50ಕ್ಕೆ ಬೆಂಗಳೂರಿನಿಂದ ಹೊರಡುವ ಟ್ರೈನ್ ಮೂಲಕ ಶನಿವಾರ ಬೆಳಗ್ಗೆ 6.00ಕ್ಕೆ ಮುರುಡೇಶ್ವರಕ್ಕೆ ತಲುಪುತ್ತಾರೆ. ಬಳಿಕ ತಮ್ಮ ವೀಕ್ ಎಡ್ ಎಂಜಾಯ್ ಮಾಡ್ತಾರೆ. ಇನ್ನು ಸ್ಕೂಬಾ ಡೈವಿಂಗ್ ಮಾಡಲು ಮೊದಲೆ ಬುಕ್ಕಿಂಗ್ ಮಾಡಬೇಕು. ಆನ್​ಲೈನ್ ಮೂಲಕ ಪ್ಯಾಕೇಜ್ ಬುಕ್ಕಿಂಗ್ ಮಾಡಿಕೊಂಡು ಬರಬೇಕು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ