AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡ, ಸಹಚರರಿಂದ ASP ಮೇಲೆ ಕಾರು ಚಲಾಯಿಸುವುದಕ್ಕೆ ಯತ್ನ.. ಐವರು ಅರೆಸ್ಟ್

ASP ಬದ್ರಿನಾಥ್ ಕಾರ್ ತಡೆದು ತಪಾಸಣೆಯ ಮಾಡಲು ಮುಂದಾಗಿದ್ದಾರೆ. ಆಗ ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ASP ಮೇಲೆ ಕಾರನ್ನ ಹಾಯಿಸಲು ಪ್ರಯತ್ನಿಸಿದ್ದಾರೆ. ASP ಕಾಲಿಗೆ ಕಾರು ತಾಕಿದ್ದು ಅವರು ನೆಲಕ್ಕೆ ಬಿದ್ದಿದ್ದಾರೆ.

ಕಾಂಗ್ರೆಸ್ ಮುಖಂಡ, ಸಹಚರರಿಂದ ASP ಮೇಲೆ ಕಾರು ಚಲಾಯಿಸುವುದಕ್ಕೆ ಯತ್ನ.. ಐವರು ಅರೆಸ್ಟ್
ASP ಮೇಲೆ ಕಾರು ಚಲಾಯಿಸುವುದಕ್ಕೆ ಪ್ರಯತ್ನ
ಆಯೇಷಾ ಬಾನು
|

Updated on: Mar 30, 2021 | 3:34 PM

Share

ಕಾರವಾರ: ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಮೇಲೆ ಕಾರು ಚಲಾಯಿಸುವುದಕ್ಕೆ ಪ್ರಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಐಆರ್‌ಬಿ ಟೋಲ್ ಬಳಿ ನಡೆದಿದೆ. ಈ ಸಂಬಂಧ ಸದ್ಯ ಐವರನ್ನು ವಶಕ್ಕೆ ಪಡೆಯಲಾಗಿದೆ.

ನಿನ್ನೆ ಮಧ್ಯಾಹ್ನ ಟೋಲ್​ನಲ್ಲಿ ಗಲಾಟೆ ನಡೆಯುತ್ತಿತ್ತು. ಇದೇ ವೇಳೆ ಉತ್ತರ ಕನ್ನಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದ್ರಿನಾಥ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ASP ಬದ್ರಿನಾಥ್ ಕಾರ್ ತಡೆದು ತಪಾಸಣೆಯ ಮಾಡಲು ಮುಂದಾಗಿದ್ದಾರೆ. ಆಗ ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ASP ಮೇಲೆ ಕಾರನ್ನ ಹಾಯಿಸಲು ಪ್ರಯತ್ನಿಸಿದ್ದಾರೆ. ASP ಕಾಲಿಗೆ ಕಾರು ತಾಕಿದ್ದು ಅವರು ನೆಲಕ್ಕೆ ಬಿದ್ದಿದ್ದಾರೆ. ಸದ್ಯ ಅಲ್ಲೇ ಇದ್ದ ಸಿಬ್ಬಂದಿ ಅವರನ್ನು ಮೇಲಕ್ಕೆ ಎತ್ತಿದ್ದಾರೆ. ಈ ಎಲ್ಲಾ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಟೋಲ್ ಸಿಬ್ಬಂದಿ ದೂರು ಆಧರಿಸಿ ಐವರನ್ನು ಬಂಧಿಸಲಾಗಿದೆ. ಸುರೇಶ್ ನಾಯಕ ಅಲಗೇರಿ, ಬೊಮ್ಮಯ್ಯ ನಾಯಕ, ಗೋಪಾಲ ನಾಯಕ, ಸುರೇಶ್ ಗಿರಿಯಣ್ಣ ನಾಯಕ, ಅಪ್ರಾಪ್ತ ಬಾಲಕ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ