AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡ, ಸಹಚರರಿಂದ ASP ಮೇಲೆ ಕಾರು ಚಲಾಯಿಸುವುದಕ್ಕೆ ಯತ್ನ.. ಐವರು ಅರೆಸ್ಟ್

ASP ಬದ್ರಿನಾಥ್ ಕಾರ್ ತಡೆದು ತಪಾಸಣೆಯ ಮಾಡಲು ಮುಂದಾಗಿದ್ದಾರೆ. ಆಗ ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ASP ಮೇಲೆ ಕಾರನ್ನ ಹಾಯಿಸಲು ಪ್ರಯತ್ನಿಸಿದ್ದಾರೆ. ASP ಕಾಲಿಗೆ ಕಾರು ತಾಕಿದ್ದು ಅವರು ನೆಲಕ್ಕೆ ಬಿದ್ದಿದ್ದಾರೆ.

ಕಾಂಗ್ರೆಸ್ ಮುಖಂಡ, ಸಹಚರರಿಂದ ASP ಮೇಲೆ ಕಾರು ಚಲಾಯಿಸುವುದಕ್ಕೆ ಯತ್ನ.. ಐವರು ಅರೆಸ್ಟ್
ASP ಮೇಲೆ ಕಾರು ಚಲಾಯಿಸುವುದಕ್ಕೆ ಪ್ರಯತ್ನ
ಆಯೇಷಾ ಬಾನು
|

Updated on: Mar 30, 2021 | 3:34 PM

Share

ಕಾರವಾರ: ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ASP) ಮೇಲೆ ಕಾರು ಚಲಾಯಿಸುವುದಕ್ಕೆ ಪ್ರಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹಟ್ಟಿಕೇರಿಯ ಐಆರ್‌ಬಿ ಟೋಲ್ ಬಳಿ ನಡೆದಿದೆ. ಈ ಸಂಬಂಧ ಸದ್ಯ ಐವರನ್ನು ವಶಕ್ಕೆ ಪಡೆಯಲಾಗಿದೆ.

ನಿನ್ನೆ ಮಧ್ಯಾಹ್ನ ಟೋಲ್​ನಲ್ಲಿ ಗಲಾಟೆ ನಡೆಯುತ್ತಿತ್ತು. ಇದೇ ವೇಳೆ ಉತ್ತರ ಕನ್ನಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದ್ರಿನಾಥ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ASP ಬದ್ರಿನಾಥ್ ಕಾರ್ ತಡೆದು ತಪಾಸಣೆಯ ಮಾಡಲು ಮುಂದಾಗಿದ್ದಾರೆ. ಆಗ ಕಾಂಗ್ರೆಸ್ ಮುಖಂಡ ಹಾಗೂ ಸಹಚರರು ASP ಮೇಲೆ ಕಾರನ್ನ ಹಾಯಿಸಲು ಪ್ರಯತ್ನಿಸಿದ್ದಾರೆ. ASP ಕಾಲಿಗೆ ಕಾರು ತಾಕಿದ್ದು ಅವರು ನೆಲಕ್ಕೆ ಬಿದ್ದಿದ್ದಾರೆ. ಸದ್ಯ ಅಲ್ಲೇ ಇದ್ದ ಸಿಬ್ಬಂದಿ ಅವರನ್ನು ಮೇಲಕ್ಕೆ ಎತ್ತಿದ್ದಾರೆ. ಈ ಎಲ್ಲಾ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಟೋಲ್ ಸಿಬ್ಬಂದಿ ದೂರು ಆಧರಿಸಿ ಐವರನ್ನು ಬಂಧಿಸಲಾಗಿದೆ. ಸುರೇಶ್ ನಾಯಕ ಅಲಗೇರಿ, ಬೊಮ್ಮಯ್ಯ ನಾಯಕ, ಗೋಪಾಲ ನಾಯಕ, ಸುರೇಶ್ ಗಿರಿಯಣ್ಣ ನಾಯಕ, ಅಪ್ರಾಪ್ತ ಬಾಲಕ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು 

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು