AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದಲ್ಲಿ ವಿಷ ಬೆರೆಸಿಟ್ಟಿದ್ದ ಅಕ್ಕಿಯನ್ನು ತಿಂದು 5 ಜಾನುವಾರುಗಳು ಸಾವು: ಕಣ್ಣೀರಿಟ್ಟ ಮಾಲೀಕರು

ತೋಟದ ಮಾಲೀಕನೊಬ್ಬ ಕಾಡುಪ್ರಾಣಿಗಳ ಕಾಟ ತಪ್ಪಿಸಲು ತೋಟದಲ್ಲಿ ವಿಷ ಬೆರೆಸಿಸಿಟ್ಟಿದ್ದ ಅಕ್ಕಿಯನ್ನು ತಿಂದು ಹಲವು ಐದು ಜಾನುವಾರಗಳು ಬಲಿಯಾಗಿವೆ.

ತೋಟದಲ್ಲಿ ವಿಷ ಬೆರೆಸಿಟ್ಟಿದ್ದ ಅಕ್ಕಿಯನ್ನು ತಿಂದು 5 ಜಾನುವಾರುಗಳು ಸಾವು: ಕಣ್ಣೀರಿಟ್ಟ ಮಾಲೀಕರು
ಮೃತಪಟ್ಟ ಜಾನುವಾರುಗಳ ಮಾಲೀಕರು
TV9 Web
| Edited By: |

Updated on:Oct 27, 2022 | 10:54 PM

Share

ಜೋಯಿಡಾ(ಉತ್ತರ ಕನ್ನಡ ): ಸ್ವಾರ್ಥಿ ಮನುಷ್ಯ ನೀಚ ಕ್ರಿಮಿ ವಿಷ ಜಂತು ಅನ್ನುವುದನ್ನು ಪದೇ ಪದೇ ಸಾಬೀತು ಮಾಡುತ್ತಲೇ ಇದ್ದಾನೆ. ಮನುಷ್ಯನೊಳಗಿನ ರಾಕ್ಷಸ ಪ್ರವೃತ್ತಿ ವಿಜೃಂಭಿಸಿದಾಗ ಈ ರೀತಿಯ ಪರಮ ನೀಚ ಕೃತ್ಯಗಳು ಜರುಗುತ್ತವೆ. ಹೌದು.. ಕಾಡುಪ್ರಾಣಿಗಳ ಕಾಟ ತಪ್ಪಿಸಲು ತೋಟದಲ್ಲಿ ವಿಷ ಬೆರೆಸಿಸಿಟ್ಟಿದ್ದ ಅಕ್ಕಿಯನ್ನು ತಿಂದು ಐದು ಜಾನುವಾರುಗಳು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ನಾಗೋಡಾದಲ್ಲಿ ನಡೆದಿದೆ.

ಕಾಡುಪ್ರಾಣಿಗಳ ಕಾಟ ತಪ್ಪಿಸಲು ತೋಟದಲ್ಲಿ ವಿಷ ಬೇರಸಿದ ಅಕ್ಕಿ ಇಡಲಾಗಿದೆ. ಆದ್ರೆ, ಮಮತಾ ಮಹಾಬಲೇಶ್ವರ ಗಾಳಕರ ಎಂಬುವವರಿಗೆ ಸೇರಿದ ಜಾನುವಾರುಗಳು ಬಂದು ವಿಷ ಮಿಶ್ರಿತ ಅಕ್ಕಿಯನ್ನು ತಿಂದಿದ್ದಾವೆ. ಪರಿಣಾಮ ಐದು ಜಾನುವಾರುಗಳು ಮೃತಪಟ್ಟಿದ್ದು,, ಏಳು ಗೋವುಗಳು ಅಸ್ವಸ್ಥಗೊಂಡಿವೆ. ಅನಂತ ನರಸಿಂಹ ಭಾಗ್ವತ್ ಎಂಬುವವರ ತೋಟದಲ್ಲಿ ನಡೆದ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಷಪ್ರಾಷನದಿಂದ ಒಟ್ಟು ನಾಲ್ಕು ಎತ್ತು ಮತ್ತು ಒಂದು ಆಕಳು ಸಾವನ್ನಪ್ಪಿವೆ. ಜೀವನಕ್ಕೆ ಆಧಾರವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡು ಮಾಲೀಕರು ಕಣ್ಣೀರಿಟ್ಟಿದ್ದಾರೆ. ಈ ಬಗ್ಗೆ ಜೊಯಿಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತೋಟದ ಮಾಲೀಕರನ್ನು ವಿಚಾರಣೆ ನಡೆಸಿದ್ದಾರೆ. ಕಾಡುಪ್ರಾಣಿಗಳ ಕಾಟಕ್ಕೆ ಈ ರೀತಿ ವಿಷ ಇಡುವುದು ಮಹಾ ಅಪರಾಧ.

ಚಕ್ಕಡಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ: ಎತ್ತು ಸ್ಥಳದಲ್ಲೇ ಸಾವು

ಧಾರವಾಡ: ನಗರದ ಹೊರವಲಯದಲ್ಲಿರುವ ಯರಿಕೊಪ್ಪ ಗ್ರಾಮದ ಬಳಿ ಸಾರಿಗೆ ಸಂಸ್ಥೆ ಬಸ್ ಚಕ್ಕಡಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದು ಎತ್ತು ಸ್ಥಳದಲ್ಲೇ ಸಾವು, ಮತ್ತೊಂದು ಎತ್ತಿಗೆ ಗಂಭೀರ ಗಾಯಗಳಾಗಿವೆ.

ಇನ್ನು ಚಕ್ಕಡಿಯಲ್ಲಿದ್ದ ಈರಪ್ಪ ಜಮ್ಮಿಹಾಳ, ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Published On - 10:38 pm, Thu, 27 October 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್