AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttara Kannada: ದುಬಾರಿ ಮರದ ದಿಮ್ಮಿಗಳ ಅಕ್ರಮ ಸಾಗಾಟ ಪ್ರಕರಣ: ಐವರು ಡಿಆರ್​ಎಫ್​​​​​ಒಗಳ ಅಮಾನತು

ಅಕ್ರಮವಾಗಿ ಬೆಳೆಬಾಳುವ ಮರದ ದಿಮ್ಮಿಗಳ ಸಾಗಾಟ ಮಾಡಿದ ಪ್ರಕರಣ ಸಂಬಂಧ ಉತ್ತರ ಕನ್ನಡ ಜಿಲ್ಲಾ ಅರಣ್ಯ ಇಲಾಖೆ ಐವರು ಡಿಆರ್​ಎಫ್​ಒಗಳನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

Uttara Kannada: ದುಬಾರಿ ಮರದ ದಿಮ್ಮಿಗಳ ಅಕ್ರಮ ಸಾಗಾಟ ಪ್ರಕರಣ: ಐವರು ಡಿಆರ್​ಎಫ್​​​​​ಒಗಳ ಅಮಾನತು
ಉತ್ತರ ಕನ್ನಡದಲ್ಲಿ ದುಬಾರಿ ಮರದ ದಿಮ್ಮಿಗಳ ಅಕ್ರಮ ಸಾಗಾಟದ ವೇಳೆ ಬಂಧಿತರಾದ ಆರೋಪಿಗಳು
Rakesh Nayak Manchi
|

Updated on:Jun 14, 2023 | 4:10 PM

Share

ಕಾರವಾರ: ಅಕ್ರಮವಾಗಿ ಬೆಳೆಬಾಳುವ ಮರದ ದಿಮ್ಮಿಗಳ ಸಾಗಾಟ ಮಾಡಿದ ಪ್ರಕರಣ ಸಂಬಂಧ ಉತ್ತರ ಕನ್ನಡ (Uttara Kannada) ಜಿಲ್ಲಾ ಅರಣ್ಯ ಮುಖ್ಯಾಧಿಕಾರಿ ವಸಂತ್ ರೆಡ್ಡಿ ಅವರು ಐವರು ಡಿಆರ್​ಎಫ್​ಒಗಳನ್ನು (DRFO) ಅಮಾನತು ಮಾಡಿ ಆದೇಶಿಸಿದ್ದಾರೆ. ಸುರೇಶ್ ವಡ್ಡರ್, ಮಾರುತಿ ಸೋರಗಾವಿ, ಮಹೇಶ್ ಬೋರ್ಕರ್, ಹನುಮಂತ ಬಂಡಿವಡ್ಡರ್, ಗುರುಚಂದ್ರ ಎಂ. ಬ್ಯಾಳಿ ಅಮಾನತುಗೊಂಡ ಅಧಿಕಾರಿಗಳು.

ಅರಣ್ಯ ಇಲಾಖೆಗೆ ಸಂಬಂಧಿಸಿದ 30 ಲಕ್ಷಕ್ಕೂ ಅಧಿಕ ಮೌಲ್ಯದ 52 ಮರದ ದಿಮ್ಮಿಗಳನ್ನು ಎರಡು ಲಾರಿಗಳ ಮೂಲಕ ಅಕ್ರಮವಾಗಿ ಶಿರಸಿಗೆ ಸಾಗಾಟ ಮಾಡಲಾಗುತ್ತಿತ್ತು. ಮಾಹಿತಿ ತಿಳಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಅಧಿಕಾರಿಗಳು ಇದರ ಹಿಂದಿರುವ ಬಗ್ಗೆ ಆರೋಪಿಗಳು ಬಾಯಿಬಿಟ್ಟಿದ್ದರು.

ಇದನ್ನೂ ಓದಿ: ಶರ್ಟ್​ ಧರಿಸದೆ ಆನ್​ಲೈನ್​ ಮೀಟಿಂಗ್​ಗೆ ಹಾಜರಾದ ಶಿಕ್ಷಣ ಇಲಾಖೆ ಅಧಿಕಾರಿ ಅಮಾನತು

ಆರೋಪಿಗಳು ಹೊರಗಾಕಿದ ಮಾಹಿತಿ ಆಧರಿಸಿ ಡಿಆರ್​ಎಫ್​ಒಗಳನ್ನು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಮರದ ದಿಮ್ಮಿಗಳ ಸಾಗಾಟದಲ್ಲಿ ಅಧಿಕಾರಿಗಳು ಶಾಮೀಲು ಆರೋಪ ಸಾಬೀತಾದ ಹಿನ್ನೆಲೆ ಐವರು ಡಿಆರ್​ಎಫ್​​​​​ಒಗಳ ಅಮಾನತು ಮಾಡಲಾಗಿದೆ. ಅಲ್ಲದೆ, ವಲಯ ಅರಣ್ಯಾಧಿಕಾರಿ ಜಿಟಿ ರೇವಕರ್ ವಿರುದ್ಧ ಕ್ರಮಕ್ಕೆ ರಾಜ್ಯ ಅರಣ್ಯ ಮುಖ್ಯಸ್ಥರಿಗೆ ಶಿಫಾರಸ್ಸು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Wed, 14 June 23

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ