AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ತಾಲೂಕಿನಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ; ಬೋಟ್ ಮೂಲಕ ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕಾರಾವಾರ ತಾಲೂಕಿನ ಚಂಡಿಯಾ, ಕೋಲ್ ಚಂಡಿಯಾ, ಇಳಸೂರು ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಮನೆ, ರಸ್ತೆ ಕೃಷಿ ಜಮೀನು ಜಲಾವೃತವಾಗಿದೆ. ಮನೆಗಳಲ್ಲಿ ಸಿಲುಕಿದ್ದ 5 ಕುಟುಂಬಗಳನ್ನು ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ.

ಕಾರವಾರ ತಾಲೂಕಿನಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ; ಬೋಟ್ ಮೂಲಕ ಜನರ  ರಕ್ಷಣೆ
ಕಾರವಾರ ತಾಲೂಕಿನಾದ್ಯಂತ ಮಳೆಗೆ ಪ್ರವಾಹ ಸೃಷ್ಟಿ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Jul 14, 2024 | 2:17 PM

Share

ಕಾರವಾರ, ಜುಲೈ.14: ಕಳೆದ ನಾಲ್ಕು ದಿನದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಅಬ್ಬರಿಸ್ತಿದೆ (Karnataka Rain). ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ನಿತ್ಯ ಸುರಿಯುತ್ತಿರೋ ರಣ ಮಳೆ, ಕಾರಾವಾರ ಜನರನ್ನ ಹಿಂಡಿ ಹಿಪ್ಪೆ ಮಾಡಿದೆ. ಜಮೀನು, ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಕಾರಾವಾರ ತಾಲೂಕಿನ ಚಂಡಿಯಾ, ಕೋಲ್ ಚಂಡಿಯಾ, ಇಳಸೂರು ಭಾಗದಲ್ಲಿ ಭಾರೀ ಮಳೆಯಾಗ್ತಿದ್ದು, ಮನೆ, ರಸ್ತೆ ಕೃಷಿ ಜಮೀನು ಜಲಾವೃತವಾಗಿದೆ.

ಐಸ್‌ ಫ್ಯಾಕ್ಟರಿ ಬಳಿ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ನೂರಾರು ಎಕರೆ ಕೃಷಿ ಭೂಮಿ ಮುಳುಗಡೆಯಾಗಿದೆ. ಮನೆಗಳಿಗೂ ನೀರು ನುಗ್ಗಿ, ಮನೆಯಿಂದಾಚೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದ ಕಂಗಲಾಗಿರೋ ಜನರು, ನಮ್ಮ ಕಷ್ಟ ಕೇಳರೋ ಯಾರು ಇಲ್ಲ ಅಂತಾ ಆಕ್ರೋಶ ಹೊರಹಾಕ್ತಿದ್ದಾರೆ.

ಅರಗ ಗ್ರಾಮದಲ್ಲೂ ಭಾರೀ ಮಳೆಯಾಗಿದ್ದು, ಡಾಬಾಗೆ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ನೀರು ಹೋಗಲು ಜಾಗವಿಲ್ಲದೇ ಡಾಬಾಗೆ ನುಗ್ಗುತ್ತಿದೆ. ಇನ್ನೂ ಗೋಕರ್ಣದ ತಾರಮಕ್ಕಿ ಸರ್ಕಾರಿ ಶಾಲೆ ಬಳಿ ಗುಡ್ಡ ಕುಸಿತವಾಗಿದೆ. ರಸ್ತೆಯಲ್ಲಿ ಮಣ್ಣು ಕುಸಿತು ಸಂಚಾರ ಅಸ್ತವ್ಯಸ್ತಗೊಂಡಿದೆ.

ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ಬೋಟ್ ಮೂಲಕ ರಕ್ಷಣೆ

ಇನ್ನು ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಚೆಂಡಿಯಾ ಗ್ರಾಮ ವ್ಯಾಪ್ತಿಯಲ್ಲಿ ಪ್ರವಾಹದಲ್ಲಿ ಜನರು ಸಿಲುಕಿದ್ದರು. ಮನೆಗಳಲ್ಲಿ ಸಿಲುಕಿದ್ದ 5 ಕುಟುಂಬಗಳನ್ನು ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯ ಅಂದಾಜು ಗೊತ್ತಾಗದೆ ನಿವಾಸಿಗಳು ಮನೆಯಲ್ಲೇ ಉಳಿದಿದ್ರು. ಕಳೆದ 4 ದಿನಗಳ ಹಿಂದೆ ಸುರಿದ ಮಳೆಗೆ ಇಷ್ಟೊಂದು ನೀರು ಬಂದಿರಲಿಲ್ಲ. ಆದ್ರೆ ಇಂದು ಹೆಚ್ಚು ನೀರು ಬಂದಿದ್ದರಿಂದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ರಸ್ತೆಗಳು ಹಾಗೂ ಜಮೀನುಗಳು ಸಂಪೂರ್ಣವಾಗಿ ಜಲಾವೃತವಾದ ಹಿನ್ನೆಲೆ ರಸ್ತೆ ಯಾವುದು ಅಂತಾ ಗೊತ್ತಾಗದೆ ಮನೆಯಲ್ಲೇ ಕಾಲ ಕಳೆಯುವಂತಾಗಿತ್ತು. ಚಿಕ್ಕ ಚಿಕ್ಕ ಮಕ್ಕಳು, ಮಹಿಳೆಯರು ಆತಂಕದಲ್ಲೇ ಕಾಲ ಕಳೆಯುತ್ತಿದ್ದರು. ಗ್ರಾಮಸ್ಥರಿಗೆ ವಿಷಯ ತಿಳಿಯುತ್ತಿದ್ದಂತೆ ಬೋಟ್ ಮೂಲಕ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳೀಯರು ಕರೆತಂದಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತವಾಗದೆ. ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಗುಡ್ಡ ಕುಸಿತವಾಗಿದ್ದು, ಭಾರೀ ವಾಹನಗಳನ್ನ ಸಂಚಾರ ನಿಷೇಧಿಸಲಾಗಿದೆ. ರಾಜ್ಯದ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವೆಡೆ ಧಾರಾಕಾರ ಮಳೆ ಸುರಿದ ಕಾರಣ ಕೆಲವು ಪ್ರವಾಸಿ ತಾಣಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಇದ್ರಿಂದ ರಾಜಧಾನಿ ಬೆಂಗಳೂರಿನ ಜನ ಬೆಳಂಬೆಳಗ್ಗೆ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ನುಗ್ಗಿದ್ದಾರೆ.

ಕೊಡಗಿನಲ್ಲೂ ಭಾರಿ ಮಳೆಯಾಗ್ತಿದ್ದು, ಇಂದು ಬೆಳ್ಳಂ ಬೆಳಗ್ಗೆಯೇ ವರುಣ್ಣ ಆರ್ಭಟಿಸಿದೆ. ಕೊಡಗಿನಲ್ಲಿ ಮಳೆಯಾಗ್ತಿರೋದ್ರಿಂದ ನದಿಗಳ ನೀರಿನ ಮಟ್ಟ ಗಣನೀಯವಾಗ ಏರಿಕೆಯಾಗಿದೆ. ಅತ್ತ ಕೇರಳದಲ್ಲೂ ಭರ್ಜರಿ ಮಳೆಯಾಗ್ತಿರೋದ್ರಿಂದ ಕಬಿನಿ ಜಲಾಶಯ ಭರ್ತಿಯಾಗಿದೆ. ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಬಳಿ ಇರೋ ಕಬಿನ ಜಲಾಶಯದಿಂದ ಕಪಿಲಾ ನದಿಗೆ 20 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡಲಾಗಿದೆ. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಗ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ