AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಶಿವರಾತ್ರಿಗೆ ಮಹಾಬಲೇಶ್ವರನ ತೇರು ಏಳೆದು ಭಕ್ತಿ ಸಮರ್ಪಣೆ: ಗೋಕರ್ಣದಲ್ಲಿ ವಿದೇಶಿ ಭಕ್ತರ ಸಡಗರ

ಒಟ್ಟಾರೆಯಾಗಿ ಆತ್ಮಲಿಂಗ ನೆಲೆಸಿರುವ ಪುಣ್ಯಕ್ಷೇತ್ರದಲ್ಲಿ ನಡೆಯುವ ಜಾತ್ರೆಗೆ ಭಕ್ತ ಸಾಗರವೇ ಹರಿದು ಬಂದಿತ್ತು. ಈ ವೇಳೆ ಬಾಳೆ ಹಣ್ಣನ್ನು ತೇರಿಗೆ ಎಸೆಯುವದರ ಮೂಲಕ ತಮ್ಮ ಹರಕೆಯನ್ನ ಆದಷ್ಟು ಬೇಗ ಈಡೇರಿಸುವಂತೆ ಮನವಿ ಮಾಡಿಕೊಂಡರು.

ಮಹಾಶಿವರಾತ್ರಿಗೆ ಮಹಾಬಲೇಶ್ವರನ ತೇರು ಏಳೆದು ಭಕ್ತಿ ಸಮರ್ಪಣೆ: ಗೋಕರ್ಣದಲ್ಲಿ ವಿದೇಶಿ ಭಕ್ತರ ಸಡಗರ
ಮಹಾಶಿವರಾತ್ರಿಗೆ ಮಹಾಬಲೇಶ್ವರನ ತೇರು ಏಳೆದು ಭಕ್ತಿ ಸಮರ್ಪಣೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Mar 12, 2024 | 3:03 PM

Share

ಆತ್ಮಲಿಂಗ ನೆಲಿಸಿದ ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಜಾತ್ರೆ ಸಡಗರ ಮನೆ ಮಾಡಿದೆ. ಕಳೆದ ಎಂಟು ದಿನಗಳಿಂದ ನಡೆಯುತ್ತಿರುವ ಜಾತ್ರೆಗೆ ಭಕ್ತ ಸಾಗರ ಹರಿದು ಬಂದಿತ್ತು. ಇಂದು ನಡೆದ ತೇರು ಏಳೆಯುವ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗಿ ಆಗಿ ಭಕ್ತಿಯಿಂದ ತೇರು ಏಳೆದು ಭಕ್ತಿಯನ್ನ ಸಮರ್ಪಿಸಿದ್ರು. ಈ ಕುರಿತ ವರದಿ ಇಲ್ಲಿದೆ ನೋಡಿ. ಎಲ್ಲಿ ನೋಡಿದರಲ್ಲಿ ಜನವೋ ಜನ… ಜನಸ್ತೋಮದ ಮಧ್ಯೆ ಬೃಹತ್ ಗಾತ್ರದ ತೇರು ಏಳೆಯುತ್ತಿರುವ ಭಕ್ತ ಸಾಗರ… ಈ ಮಧ್ಯೆ ಹರಕೆ ತೀರಿಸಲು ಬಾಳೆ ಹಣ್ಣು ಎಸೆಯುತ್ತಿರುವ ಜನ ಈ ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಗೋಕರ್ಣದಲ್ಲಿ.

ಹೌದು ಮಹಾಶಿವರಾತ್ರಿ ನಿಮಿತ್ತ ಒಟ್ಟು ಒಂಬತ್ತು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಎಂಟನೆ ದಿನವಾದ ನಿನ್ನೆ ಸೋಮವಾರ ವಿಜೃಂಭಣೆ ಮನೆ ಮಾಡಿತ್ತು. ಮಹಾಬಳೇಶ್ವರ ದೇವರು ವಿರಾಜಮಾನವಾದ ಬೃಹತ್ ರಥೋತ್ಸವ ಮಾಡಲಾಯಿತು. ರಥೋತ್ಸವದಲ್ಲಿ ಕರ್ನಾಟಕ, ಮಹಾರಾಷ್ಟ್ರ ಗೋವಾ ಸೇರಿದಂತೆ ಹೊರ ದೇಶಗಳಿಂದಲೂ ಭಕ್ತರ ದಂಡು ಪಾಲ್ಗೊಂಡಿತ್ತು. ಸುಮಾರು 40 ಅಡಿಗೂ ಎತ್ತರವಾದ ಬೃಹತ್ ರಥದಲ್ಲಿ ಮಹಾಬಳೇಶ್ವರನ ಮೂರ್ತಿ ಇಟ್ಟು ಭಕ್ತರು ತಾ ಮುಂದೆ ನಾ ಮುಂದೆ ಎಂದು ರಥವನ್ನ ಎಳೆಯುವದರ ಮೂಲಕ ಭಕ್ತಿ ಸಮರ್ಪಣೆ ಮಾಡಿದ್ರು.

ಇನ್ನು ಒಟ್ಟು ಎಂಟು ದಿನಗಳ ಕಾಲ ನಡೆಯುವ ಗೋಕರ್ಣ ಜಾತ್ರೆಯಲ್ಲಿ, ನಿತ್ಯವೂ ಒಂದೊಂದು ವಿಶೇಷ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಮಹಾಶಿವರಾತ್ರಿಗೆ ಮುನ್ನಾ ನಾಲ್ಕು ದಿನ ಹಾಗೂ ಮಹಾಶಿವರಾತ್ರಿಯ ಬಳಿಕದ ನಾಲ್ಕು ದಿನ ನಡೆಯುವ ಜಾತ್ರೆಯಲ್ಲಿ, ಅಮಾವಾಸ್ಯೆಯ ಮರುದಿನ ಬೃಹತ್ ರಥೋತ್ಸವ ಮಾಡಲಾಗುತ್ತದೆ. ಈ ರಥೋತ್ಸವಕ್ಕೆ ಬಂದವರು, ಯಾಲಕ್ಕಿ ಬಾಳೆ ಹಣ್ಣನ್ನು ಕೈಯಲ್ಲಿ ಹಿಡಿದು ಹರಕೆ ಕೇಳಿಕೊಂಡು ರಥದಲ್ಲಿರುವ ಮಹಾಬಳೇಶ್ವರನಿಗೆ ಎಸೆದರೆ ಒಂದು ವರ್ಷದಲ್ಲಿ ತಮ್ಮ ಹರಕೆಯನ್ನ ಆ ಮಹಾಬಳೇಶ್ವರ ಈಡೇರುಸುತ್ತಾನೆ ಎಂಬ ಪ್ರತೀತಿ ಇದೆ.

Also Read: ಶನಿ ಗೋಚರ -ಶೀಘ್ರದಲ್ಲೇ ನಕ್ಷತ್ರವನ್ನು ಬದಲಾಯಿಸಲಿರುವ ಶನೇಶ್ವರ… ಈ ಮೂರು ರಾಶಿಯವರಿಗೆ ಅದೃಷ್ಟವೋ ಅದೃಷ್ಟ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!