AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರದಿಂದ ಗೋವಾಗೆ ಸಾಗಿಸುತ್ತಿದ್ದ 41 ಕಪ್ಪೆಗಳ ರಕ್ಷಣೆ, ಕಪ್ಪೆ ರಕ್ಷಣೆ ಏಕೆ? ಏನಿದರ ಗುಟ್ಟು?

ಬಸ್‌ನಲ್ಲಿ ಗೋವಾಗೆ ಸಾಗಾಟ ಮಾಡುತ್ತಿದ್ದ 41 ಬುಲ್ ಫ್ರಾಗ್ ಕಪ್ಪೆಗಳನ್ನು ಕಾರವಾರದ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಹಾಗಾದ್ರೆ, ಕಪ್ಪೆ ರಕ್ಷಣೆ ಏಕೆ? ಬುಲ್ ಫ್ರಾಗ್ ಕಪ್ಪೆ ತೆಗೆದುಕೊಂಡು ಹೋಗಿ ಏನ್ ಮಾಡ್ತಾರೆ? ಏನಿದರ ಹಿಂದಿನ ಗುಟ್ಟು? ಇಲ್ಲಿದೆ ವಿವರ

ಕಾರವಾರದಿಂದ ಗೋವಾಗೆ ಸಾಗಿಸುತ್ತಿದ್ದ 41 ಕಪ್ಪೆಗಳ ರಕ್ಷಣೆ, ಕಪ್ಪೆ ರಕ್ಷಣೆ ಏಕೆ? ಏನಿದರ ಗುಟ್ಟು?
ರಮೇಶ್ ಬಿ. ಜವಳಗೇರಾ
|

Updated on:Jun 18, 2024 | 3:35 PM

Share

ಕಾರವಾರ, (ಜೂನ್ 18): ಭಕ್ಷಣೆಗಾಗಿ ಗೋವಾಗೆ (Goa) ಬಸ್‌ನಲ್ಲಿ ಸಾಗಾಟ ಮಾಡುತ್ತಿದ್ದ 41 ಬುಲ್ ಫ್ರಾಗ್ ಕಪ್ಪೆಗಳನ್ನು(bullfrog) ಕಾರವಾರದ (Karwar) ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಗೋವಾ ಮೂಲದ ಇಬ್ಬರನ್ನು ಬಂಧಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕಾಳಿ ಬ್ರಿಡ್ಜ್ ಬಳಿ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು, ಗೋವಾ ಮೂಲದ ಕಾಣಕೋಣ್ ನಿವಾಸಿ ಚಾಲಕ ಸಿದ್ದೇಶ್ ದೇಸಾಯಿ ಹಾಗೂ ನಿರ್ವಾಹಕ ಜಾನು ಲೂಲಿಮ್ ಎಂಬವರನ್ನು ಬಂಧಿಸಿದ್ದಾರೆ.

ಕಪ್ಪೆ ರಕ್ಷಣೆ ಏಕೆ? ಏನಿದರ ಹಿಂದಿನ ಗುಟ್ಟು?

ಗೋವಾದಲ್ಲಿ ಜಂಪಿಂಗ್ ಚಿಕನ್ ಎಂದೇ ಹೆಸರು ಪಡೆದಿರುವ ಕಪ್ಪೆಗಳ ಖಾದ್ಯ ಪ್ರಖ್ಯಾತಿ ಗಳಿಸಿದೆ. ಬುಲ್ ಫ್ರಾಗ್ ಜಾತಿಯ ಕಪ್ಪೆಗಳು ಅತೀ ದೊಡ್ಡದಾಗಿರುತ್ತದೆ. ಇದನ್ನು ಜೀವಂತವಾಗಿ ಹಿಡಿದು ಗೋವಾದಲ್ಲಿ ಇವುಗಳ ಕಾಲುಗಳನ್ನು ಕಡಿದು ಫ್ರೈ ಮಾಡಿ ಭಕ್ಷಿಸುತ್ತಾರೆ. ಇದಲ್ಲದೇ ಜೀವಂತವಾಗಿಯೇ ಇವುಗಳ ಚರ್ಮ ತೆಗೆದು ಫ್ರೈ ಮಾಡಿ ತಿನ್ನುತ್ತಾರೆ. ಗೋವಾ ಭಾಗದಲ್ಲಿ ಈ ಕಪ್ಪೆಗಳ ಭಕ್ಷವನ್ನು ಜಂಪಿಂಗ್ ಚಿಕನ್ ಎನ್ನುತ್ತಾರೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಅಬ್ದುಲ್​ ಸುಕ್ಕೂರ್ ಎನ್ಐಎ ವಶಕ್ಕೆ

ಗೋವಾ ಜನರು ಸೇರಿ, ವಿದೇಶಿಗರಿಗೂ ಈ ಕಪ್ಪೆ ಖಾದ್ಯ ಬಲು ಪ್ರೀತಿ. ಒಂದು ಕಪ್ಪೆ ಖಾಧ್ಯಕ್ಕೆ 1,500ಕ್ಕೂ ಹೆಚ್ಚು ದರ ವಿಧಿಸಲಾಗುತ್ತದೆ. ಇನ್ನು ಈ ಕಪ್ಪೆಗಳು ಗೋವಾ ಭಾಗದಲ್ಲಿ ಸಿಗುವುದಿಲ್ಲ. ಹೀಗಾಗಿ ಪಶ್ಚಿಮ ಘಟ್ಟ ಪ್ರದೇಶವಾದ ಕಾರವಾರ, ಅಂಕೋಲ ಸೇರಿದಂತೆ ಇತರೆ ಭಾಗದಿಂದ ಇವುಗಳನ್ನು ಕಳ್ಳಸಾಗಾಣಿಕೆ ಮಾಡಲಾಗುತ್ತದೆ. ಒಂದು ದೊಡ್ಡ ಕಪ್ಪೆಗೆ ಕನಿಷ್ಟ 500 ರೂ.ಗಳ ದರ ನೀಡಲಾಗುತ್ತದೆ. ಹೀಗಾಗಿ ಇವುಗಳ ಬೇಟೆ ಕಾರವಾರ, ಅಂಕೋಲ ಭಾಗದಲ್ಲಿ ಅತೀ ಹೆಚ್ಚಿದ್ದು ಜೀವಂತವಾಗಿ ಹಿಡಿದು ಗೋವಾಕ್ಕೆ ಸಾಗಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:32 pm, Tue, 18 June 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್