AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರದಿಂದ ಗೋವಾಗೆ ಸಾಗಿಸುತ್ತಿದ್ದ 41 ಕಪ್ಪೆಗಳ ರಕ್ಷಣೆ, ಕಪ್ಪೆ ರಕ್ಷಣೆ ಏಕೆ? ಏನಿದರ ಗುಟ್ಟು?

ಬಸ್‌ನಲ್ಲಿ ಗೋವಾಗೆ ಸಾಗಾಟ ಮಾಡುತ್ತಿದ್ದ 41 ಬುಲ್ ಫ್ರಾಗ್ ಕಪ್ಪೆಗಳನ್ನು ಕಾರವಾರದ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಹಾಗಾದ್ರೆ, ಕಪ್ಪೆ ರಕ್ಷಣೆ ಏಕೆ? ಬುಲ್ ಫ್ರಾಗ್ ಕಪ್ಪೆ ತೆಗೆದುಕೊಂಡು ಹೋಗಿ ಏನ್ ಮಾಡ್ತಾರೆ? ಏನಿದರ ಹಿಂದಿನ ಗುಟ್ಟು? ಇಲ್ಲಿದೆ ವಿವರ

ಕಾರವಾರದಿಂದ ಗೋವಾಗೆ ಸಾಗಿಸುತ್ತಿದ್ದ 41 ಕಪ್ಪೆಗಳ ರಕ್ಷಣೆ, ಕಪ್ಪೆ ರಕ್ಷಣೆ ಏಕೆ? ಏನಿದರ ಗುಟ್ಟು?
ರಮೇಶ್ ಬಿ. ಜವಳಗೇರಾ
|

Updated on:Jun 18, 2024 | 3:35 PM

Share

ಕಾರವಾರ, (ಜೂನ್ 18): ಭಕ್ಷಣೆಗಾಗಿ ಗೋವಾಗೆ (Goa) ಬಸ್‌ನಲ್ಲಿ ಸಾಗಾಟ ಮಾಡುತ್ತಿದ್ದ 41 ಬುಲ್ ಫ್ರಾಗ್ ಕಪ್ಪೆಗಳನ್ನು(bullfrog) ಕಾರವಾರದ (Karwar) ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಗೋವಾ ಮೂಲದ ಇಬ್ಬರನ್ನು ಬಂಧಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕಾಳಿ ಬ್ರಿಡ್ಜ್ ಬಳಿ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು, ಗೋವಾ ಮೂಲದ ಕಾಣಕೋಣ್ ನಿವಾಸಿ ಚಾಲಕ ಸಿದ್ದೇಶ್ ದೇಸಾಯಿ ಹಾಗೂ ನಿರ್ವಾಹಕ ಜಾನು ಲೂಲಿಮ್ ಎಂಬವರನ್ನು ಬಂಧಿಸಿದ್ದಾರೆ.

ಕಪ್ಪೆ ರಕ್ಷಣೆ ಏಕೆ? ಏನಿದರ ಹಿಂದಿನ ಗುಟ್ಟು?

ಗೋವಾದಲ್ಲಿ ಜಂಪಿಂಗ್ ಚಿಕನ್ ಎಂದೇ ಹೆಸರು ಪಡೆದಿರುವ ಕಪ್ಪೆಗಳ ಖಾದ್ಯ ಪ್ರಖ್ಯಾತಿ ಗಳಿಸಿದೆ. ಬುಲ್ ಫ್ರಾಗ್ ಜಾತಿಯ ಕಪ್ಪೆಗಳು ಅತೀ ದೊಡ್ಡದಾಗಿರುತ್ತದೆ. ಇದನ್ನು ಜೀವಂತವಾಗಿ ಹಿಡಿದು ಗೋವಾದಲ್ಲಿ ಇವುಗಳ ಕಾಲುಗಳನ್ನು ಕಡಿದು ಫ್ರೈ ಮಾಡಿ ಭಕ್ಷಿಸುತ್ತಾರೆ. ಇದಲ್ಲದೇ ಜೀವಂತವಾಗಿಯೇ ಇವುಗಳ ಚರ್ಮ ತೆಗೆದು ಫ್ರೈ ಮಾಡಿ ತಿನ್ನುತ್ತಾರೆ. ಗೋವಾ ಭಾಗದಲ್ಲಿ ಈ ಕಪ್ಪೆಗಳ ಭಕ್ಷವನ್ನು ಜಂಪಿಂಗ್ ಚಿಕನ್ ಎನ್ನುತ್ತಾರೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಅಬ್ದುಲ್​ ಸುಕ್ಕೂರ್ ಎನ್ಐಎ ವಶಕ್ಕೆ

ಗೋವಾ ಜನರು ಸೇರಿ, ವಿದೇಶಿಗರಿಗೂ ಈ ಕಪ್ಪೆ ಖಾದ್ಯ ಬಲು ಪ್ರೀತಿ. ಒಂದು ಕಪ್ಪೆ ಖಾಧ್ಯಕ್ಕೆ 1,500ಕ್ಕೂ ಹೆಚ್ಚು ದರ ವಿಧಿಸಲಾಗುತ್ತದೆ. ಇನ್ನು ಈ ಕಪ್ಪೆಗಳು ಗೋವಾ ಭಾಗದಲ್ಲಿ ಸಿಗುವುದಿಲ್ಲ. ಹೀಗಾಗಿ ಪಶ್ಚಿಮ ಘಟ್ಟ ಪ್ರದೇಶವಾದ ಕಾರವಾರ, ಅಂಕೋಲ ಸೇರಿದಂತೆ ಇತರೆ ಭಾಗದಿಂದ ಇವುಗಳನ್ನು ಕಳ್ಳಸಾಗಾಣಿಕೆ ಮಾಡಲಾಗುತ್ತದೆ. ಒಂದು ದೊಡ್ಡ ಕಪ್ಪೆಗೆ ಕನಿಷ್ಟ 500 ರೂ.ಗಳ ದರ ನೀಡಲಾಗುತ್ತದೆ. ಹೀಗಾಗಿ ಇವುಗಳ ಬೇಟೆ ಕಾರವಾರ, ಅಂಕೋಲ ಭಾಗದಲ್ಲಿ ಅತೀ ಹೆಚ್ಚಿದ್ದು ಜೀವಂತವಾಗಿ ಹಿಡಿದು ಗೋವಾಕ್ಕೆ ಸಾಗಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:32 pm, Tue, 18 June 24

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ