AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಧಾರಾಕಾರ ಮಳೆಗೆ ಗಂಗಾವಳಿ ನದಿ ಸೇತುವೆ ಮುಳುಗಡೆ, ಐದಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಷ್ಟ

ರಾಜ್ಯದೆಲ್ಲೆಡೆ ಮಳೆಯ ಅಬ್ಬರ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಂಗಾವಳಿ ನದಿ ಪಕ್ಕದ ಗ್ರಾಮಗಳ ಸಂಪರ್ಕ ಸೇತುವೆ ಮುಳುಗುಡೆ ಗೊಂಡಿದ್ದು, ಪ್ರಾಣವನ್ನೂ ಲೆಕ್ಕಿಸದೆ ಮುಳುಗಿದ ಸೇತುವೆ ಮೂಲಕ ಗ್ರಾಮಸ್ಥರು ಸಂಚರಿಸುತ್ತಿದ್ದಾರೆ. ಐದಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಷ್ಟವಾಗಿದೆ. ಮುಳುಗಿದ ಸೇತುವೆಯಲ್ಲೇ ಜನರು ಅಪಾಯಕಾರಿ ಪ್ರಯಾಣ ಮಾಡುತ್ತಿರುವುದು ಆತಂಕ ಹೆಚ್ಚಿಸಿದೆ.

ಉತ್ತರ ಕನ್ನಡ: ಧಾರಾಕಾರ ಮಳೆಗೆ ಗಂಗಾವಳಿ ನದಿ ಸೇತುವೆ ಮುಳುಗಡೆ, ಐದಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಷ್ಟ
ತುಂಬಿ ಹರಿಯುತ್ತಿರುವ ಗಂಗಾವಳಿ ನದಿಯ ಮುಳುಗಡೆಯಾಗಿರುವ ಸೇತುವೆಯಲ್ಲೇ ಅಪಾಯಕಾರಿ ವಾಹನ ಚಾಲನೆ
ಸೂರಜ್​, ಮಹಾವೀರ್​ ಉತ್ತರೆ
| Updated By: Ganapathi Sharma|

Updated on:Jul 02, 2024 | 12:38 PM

Share

ಕಾರವಾರ, ಜುಲೈ 2: ಮೈದುಂಬಿ ಹರಿಯುತ್ತಿರುವ ಗಂಗಾವಳಿ ನದಿ, ಅದರ ನೀರಿನಲ್ಲಿ ಮುಳುಗಡೆ ಗೊಂಡಿರುವ ಸೇತುವೆ. ಅದೇ ಸೇತುವೆ ಮೂಲಕ ಸಂಚರಿಸುತ್ತಿರುವ ಜನರು. ಈ ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ. ಕಳೆದ ಮೂರು ವರ್ಷಗಳ ಹಿಂದೆ ಗ್ರಾಮಸ್ಥರ ಒತ್ತಾಯದ ಮೇರೆಗೆ ನಿರ್ಮಿಸಿರುವ ಸೇತುವೆ ಸದ್ಯ ಮುಳುಗುಡೆಯಾಗಿದ್ದು ಐದಕ್ಕೂ ಹೆಚ್ಚು ಗ್ರಾಮಗಳ ಜನರು ಪ್ರಾಣ ಭಯದಲ್ಲೇ ಸಂಚರಿಸುವಂತಾಗಿದೆ.

ಕಾಡಂಚಿನ ಗ್ರಾಮಗಳಿಗೆ ಸಂಪರ್ಕ ಕಡಿತದ ಭೀತಿ

ಗಂಗಾವಳಿ ನದಿಗೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಾದ ಗುಳ್ಳಾಪುರ, ಕಲ್ಲೆಶ್ವರ, ಹಳವಳ್ಳಿ ಪಣಸಗುಳಿ, ಶೇವ್ ಕಾರ್ ಹಾಗೂ ಕೈಗಡಿ, ಸೇರಿದಂತೆ ಒಟ್ಟು ಆರು ಗ್ರಾಮಗಳಲ್ಲಿ ಸೂಕ್ತ ಮೂಲ ಸೌಕರ್ಯ ಇಲ್ಲದ ಕಾರಣ, ಶಿಕ್ಷಣ ಆರೋಗ್ಯ, ಬ್ಯಾಂಕ್ ವ್ಯವಹಾರ, ಗ್ರಾಮ ಪಂಚಾಯತಿ ಕೆಲಸ ಸೇರಿದಂತೆ ಅಗತ್ಯ ಕೆಲಸಕ್ಕಾಗಿ ಇಡಗುಂದಿ ಗ್ರಾಮಕ್ಕೆ ಬರ ಬೇಕಾಗುತ್ತದೆ. ಪರ್ಯಾಯವಾಗಿ ಇನ್ನೊಂದು ಮಾರ್ಗವಿದ್ದು ಆ ಮಾರ್ಗದಿಂದ ಹೋಗಬೇಕಾದರೆ ಸುಮಾರು 30 ಕಿಮೀ ಸಂಚರಿಸಬೇಕಾಗುತ್ತದೆ. ಹಾಗಾಗಿ ಪ್ರಾಣಭಯ ಲೆಕ್ಕಿಸದೆ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರೆಲ್ಲರೂ ಮುಳುಗುಡೆಗೊಂಡ ಸೆತುವೆ ಮೂಲಕ ನಿತ್ಯ ಸಂಚರಿಸುತ್ತಿದ್ದಾರೆ.

ಕಳೆದ ಐದು ವರ್ಷಗಳ ಹಿಂದೆ ಧಾರಕಾರವಾಗಿ ಸುರಿದ ಮಳೆಗೆ ಸೇತುವೆ ಸಂಪೂರ್ಣವಾಗಿ ಹಾಳಾಗಿತ್ತು. ನಿತ್ಯ ಚಿಕ್ಕ ದೋಣಿಯಲ್ಲಿ ಓಡಾಟ ಮಾಡಬೇಕಾದ ಪರಿಸ್ತಿತಿ ಉದ್ಭವಿಸಿತ್ತು. ಸಣ್ಣ ಪುಟ್ಟ ಕೆಲಸಕ್ಕೂ ದೋಣಿ ಮೂಲಕ ನದಿ ದಾಟುವುದು ಕಷ್ಟ ಎಂಬುವುದನ್ನ ಅರಿತ ಗ್ರಾಮಸ್ಥರು, ತಮ್ಮ ಸ್ವಂತ ಹಣದಲ್ಲೆ ಸೇತುವೆ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಅವಶ್ಯಕತೆ ಇದ್ದಷ್ಟು ಹಣ ಕ್ರೋಡೀಕರಣ ಆಗಿರಲಿಲ್ಲ.

ತುಂಬಿ ಹರಿಯುತ್ತಿರುವ ಗಂಗಾವಳಿ ನದಿ

ಆ ಸಂದರ್ಭದಲ್ಲಿ ಶಾಸಕ ಶಿವರಾಂ ಹೆಬ್ಬಾರ್ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿಕೊಟ್ಟು, ದೊಡ್ಡ ಸೇತುವೆ ಆದಷ್ಟು ಬೇಗ ಮಾಡಿಕೊಡುವುದಾಗಿ ಭರವಸೆಯನ್ನು ಕೊಟ್ಟಿದ್ದರು. ಆದರೆ ಇದುವರೆಗೂ ದೊಡ್ಡ ಸೇತುವೆ ನಿರ್ಮಾಣ ಆಗದ ಹಿನ್ನೆಲೆ ತಾತ್ಕಾಲಿಕ ಸೇತುವೆಯೇ ಖಾಯಂ ಸೇತುವೆ ಆಗಿದ್ದು, ಪ್ರಾಣ ಲೆಕ್ಕಸದೆ ನದಿ ದಾಟುತ್ತಾ ಜೀವನ ಸಾಗಿಸುವ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ: ಉದ್ಘಾಟನೆಗೊಂಡು ಕೆಲವೇ ತಾಸುಗಳಲ್ಲಿ ಕ್ಲೋಸ್​ ಆದ ಕಾರವಾರ ಯುದ್ಧ ವಿಮಾನ ವಸ್ತು ಸಂಗ್ರಹಾಲಯ: ಕಾರಣ ಏನು?

ಒಟ್ಟಾರೆಯಾಗಿ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಜನ ಸಂಕಷ್ಟಕ್ಕೀಡಾಗಿದ್ದಾರೆ. ಈ ಮಧ್ಯೆ, ಈಗಾಗಲೇ ಸೇತುವೆ ಮುಳುಗುಡೆ ಗೊಂಡಿದ್ದು, ಮುಂದೆ ಇನ್ನಷ್ಟು ಮಳೆ ಸುರಿದಾಗ ಸೇತುವೆ ಸಂಪೂರ್ಣ ಮುಳುಗಡೆಗೊಂಡು ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲೇ ಗ್ರಾಮಸ್ಥರು ಕಾಲ ಕಳೆಯುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 am, Tue, 2 July 24

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ