AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ

ಇಂದು(ಜೂ.07) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ (Rain)ಯಾಗಿದ್ದು, ಉತ್ತರ ಕನ್ನಡ, ಬಳ್ಳಾರಿ, ಕಲಬುರಗಿಯಲ್ಲಿ ಅವಾಂತರ ಸೃಷ್ಟಿ ಮಾಡಿದೆ. ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದು, ಮಹಾಬಲೇಶ್ವರನ ಆತ್ಮಲಿಂಗ ಹೊರ ನೀರಿನಿಂದ ಜಲಾವೃತವಾದರೆ, ಇತ್ತ ಬಳ್ಳಾರಿಯಲ್ಲಿ ಮಳೆಯ ಆರ್ಭಟಕ್ಕೆ ಕೆಲ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ.

ಉತ್ತರ ಕನ್ನಡದಲ್ಲಿ ಭಾರೀ ಮಳೆ:  ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ
ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ
ಕಿರಣ್ ಹನುಮಂತ್​ ಮಾದಾರ್
|

Updated on:Jun 07, 2024 | 10:53 PM

Share

ಉತ್ತರ ಕನ್ನಡ, ಜೂ.07: ಬೆಂಗಳೂರು ಸೇರಿದಂತೆ ಇಂದು(ಜೂ.07) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ (Rain)ಯಾಗಿದ್ದು, ಹಲವಾರು ಅವಾಂತರಗಳು ಆಗಿವೆ. ಅದರಂತೆ ಉತ್ತರ ಕನ್ನಡ(Uttara Kannada) ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದು, ಮಹಾಬಲೇಶ್ವರನ ಆತ್ಮಲಿಂಗ ಹೊರ ನೀರಿನಿಂದ ಜಲಾವೃತವಾಗಿದೆ. ಈ ಹಿನ್ನಲೆ ದೇವಸ್ಥಾನದ ಸಿಬ್ಬಂದಿಗಳು ಗರ್ಭಗುಡಿಯಲ್ಲಿನ ನೀರು ಹೊರಹಾಕಲು ಪರದಾಟ ನಡೆಸಿದ್ದಾರೆ.

ಗಣಿನಾಡಿನಲ್ಲಿ ಮಳೆಯ ಆರ್ಭಟ; ಕೆಲ ಪ್ರದೇಶ ಸಂಪೂರ್ಣ ಜಲಾವೃತ

ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಮಳೆಯ ಆರ್ಭಟಕ್ಕೆ ನಗರದ ಬಂಡಿಮೋಟ್, ಕೌಲಬಜಾರ ದೋಬಿಘಟ್ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ಜೊತೆಗೆ ಚರಂಡಿ ನೀರು ಬ್ಲಾಕ್​ ಆಗಿ, ಹಲವು ಏರಿಯಾಗಳಲ್ಲಿ ಮಳೆ ನೀರಿನಿಂದ ಅವಾಂತರ ಸೃಷ್ಟಿಯಾಗಿದೆ. ಐವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿ ಪಾತ್ರೆ, ವಸ್ತುಗಳು ತೇಲಾಡುತ್ತಿದೆ. ಪಾಲಿಕೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ಬಾರಿ ದೂರು ನೀಡಿದರೂ ಚರಂಡಿ ಸ್ವಚ್ಛ ಮಾಡದ ಪಾಲಿಕೆಯಿಂದ ಇಷ್ಟೇಲ್ಲ ಅವಾಂತರ ಸೃಷ್ಟಿಯಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಭಾರಿ ಮಳೆಗೆ ಕುಸಿದ ರಸ್ತೆ; ಸವಾರರಿಗೆ ತಟ್ಟಿದ ಟ್ರಾಫಿಕ್​ ಬಿಸಿ

ಭಾರಿ ಮಳೆಯಿಂದ ಸೇಡಂ ಠಾಣೆಗೆ ನುಗ್ಗಿದ ಮಳೆ ನೀರು

ಕಲಬುರಗಿ: ಭಾರಿ ಮಳೆಯಿಂದ ಜಿಲ್ಲೆಯ ಸೇಡಂ ಪೊಲೀಸ್​ ಠಾಣೆ ಜಲಾವೃತವಾಗಿದೆ. ಇತ್ತ ನೀರು ಹೊರ ಹಾಕಲು ಪೊಲೀಸ್ ಸಿಬ್ಬಂದಿ ಪರದಾಟ ನಡೆಸಿದ್ದಾರೆ. ಸೇಡಂ ಪಟ್ಟಣದಲ್ಲಿ ಒಂದು ಗಂಟೆಗಳ ಕಾಲ ಅಬ್ಬರಿಸಿದ ವರುಣಾರ್ಭಟಕ್ಕೆ ತಗ್ಗು ಪ್ರದೇಶದಲ್ಲಿರುವ ಕಾರಣ ಠಾಣೆಗೆ ನೀರು ನುಗ್ಗಿದೆ. ಇದರಿಂದ ಠಾಣೆ ಒಳಗೆ, ಹೊರಗೆ ಹೋಗಲು ಪೊಲೀಸ್ ಸಿಬ್ಬಂದಿ ಪರದಾಟ ನಡೆಸಿದ್ದಾರೆ. ಪ್ರತಿ ಬಾರಿ ಭಾರೀ ಮಳೆ ಬಂದಾಗ ಠಾಣೆಗೆ ಮಳೆ ನೀರು ನುಗ್ಗುತ್ತದೆ.

ವಿಜಯಪುರ ಜಿಲ್ಲೆಯಲ್ಲಿ ಧಾರಾಕಾರ ಮಳೆ

ವಿಜಯಪುರ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ 15 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ದಿಢೀರ್ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದು, ಮನೆಯಿಂದ ನೀರು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ.

 ಮಳೆಗೆ ಗಂಗಾವತಿ ಪಟ್ಚಣದ ಬೈಪಾಸ್ ರಸ್ತೆ ಜಲಾವೃತ

ಕೊಪ್ಪಳ: ನಗರ ಸೇರಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಹೆಚ್ಚಾಗಿದ್ದು, ಗಂಗಾವತಿ ಪಟ್ಚಣದ ಬೈಪಾಸ್ ರಸ್ತೆ ಜಲಾವೃತವಾಗಿದೆ. ಕಳೆದ ಒಂದು ಗಂಟೆಯಿಂದ ಮಳೆ ಸುರಿಯುತ್ತಿದ್ದು, ಜಲಾವೃತವಾದ ರಸ್ತೆಯಲ್ಲಿ ಸಂಚರಿಸಲು ಸವಾರರು ಪರದಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 pm, Fri, 7 June 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು