AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಥಿಲಗೊಂಡ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ದ್ವಾರದ ಕಟ್ಟಡ; ನವೀಕರಣಕ್ಕೆ ಪುರಾತತ್ವ ಇಲಾಖೆಯಿಂದ ಸಿಗುತ್ತಿಲ್ಲ ಅನುಮತಿ

ಮಹಾಬಲೇಶ್ವರ ದೇವಸ್ಥಾನಕ್ಕೆ ಎರಡು ದ್ವಾರಗಳಿದ್ದು, ಭಕ್ತರು ದಕ್ಷಿಣ ದ್ವಾರ ಹಾಗೂ ಪಶ್ಚಿಮ ದ್ವಾರದ ಮೂಲಕ ದೇವರ ದರ್ಶನ ಮಾಡಿ ಆತ್ಮಲಿಂಗ ಪೂಜೆ ಮಾಡುತ್ತಾರೆ. ಆದ್ರೆ, ದಕ್ಷಿಣ ದ್ವಾರದಲ್ಲಿ ಪ್ರವೇಶಿಸಿ ಆತ್ಮಲಿಂಗ ಪೂಜೆಗೆ ತೆರಳಿದರೇ ಪುಣ್ಯ ಹೆಚ್ಚು ಎಂಬ ನಂಬಿಕೆಯಿದೆಯೋ, ಆ ದ್ವಾರದ ಚಾವಣಿಯೇ ಬೀಳುವ ಹಂತ ತಲುಪಿದೆ.

ಶಿಥಿಲಗೊಂಡ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ದ್ವಾರದ ಕಟ್ಟಡ; ನವೀಕರಣಕ್ಕೆ ಪುರಾತತ್ವ ಇಲಾಖೆಯಿಂದ ಸಿಗುತ್ತಿಲ್ಲ ಅನುಮತಿ
ಗೋಕರ್ಣ ಮಹಾಬಲೇಶ್ವರ ದೇವಸ್ಥಾನ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: May 30, 2024 | 12:13 PM

Share

ಕಾರವಾರ, ಮೇ.30: ಶಿವಭಕ್ತರ ಪುಣ್ಯ ಕ್ಷೇತ್ರ, ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ದ್ವಾರದ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿರುವ ಮಹಾಬಲೇಶ್ವರ ದೇವಸ್ಥಾನದ ದ್ವಾರದ ಕಟ್ಟಡ ಮಳೆಯಿಂದ ಸಂಪೂರ್ಣವಾಗಿ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಭಕ್ತರಲ್ಲಿ ಆತಂಕ ಹೆಚ್ಚಾಗಿದೆ.

ಗೋಕರ್ಣದಲ್ಲಿನ ಮಹಾಬಲೇಶ್ವರ ದೇವಸ್ಥಾನದ ದಕ್ಷಿಣ ದ್ವಾರದ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ. ಶಿಥಿಲ ಗೊಂಡಿರುವ ದ್ವಾರದ ಮೂಲಕವೇ ನಿತ್ಯ ಸಾವಿರಾರು ಜನ ದರ್ಶನ ಪಡೆದು ಹೊರ ಬರುತ್ತಾರೆ. ಭಕ್ತರು ಆತಂಕದಲ್ಲೇ ದರ್ಶನ ಪಡೆದು ದೇವಸ್ಥಾನದಿಂದ ಹೊರಬರುವ ಪರಿಸ್ಥಿತಿ ಇದೆ. ಆತ್ಮಲಿಂಗದ ದರ್ಶನ ಪಡೆದು ದಕ್ಷಿಣ ದ್ವಾರದ ಮೂಲಕ ಹೊರ ಬಂದ್ರೆ ಪುಣ್ಯ ಸಿಗುತ್ತೆ ಎಂಬ ಪ್ರತೀತಿ ಇದೆ. ಹೀಗಾಗಿ ಶಿಥಿಲಗೊಂಡಿದ್ರು ಸಹ ಅದೇ ದ್ವಾರದ ಮೂಲಕ ಭಕ್ತರು ಓಡಾಡುತ್ತಿದ್ದಾರೆ. ಪಿಡಬ್ಲೂಡಿ ಇಂಜಿನಿಯರ್ ಕಟ್ಟಡ ಸಂಪೂರ್ಣ ಶಿಥಿಲ ಗೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕಟ್ಟಡವನ್ನ ಸಂಪೂರ್ಣವಾಗಿ ಕೆಡವಿ ಮತ್ತೆ ಕಟ್ಟಬೇಕೆಂದು ಸೂಚಿಸಿದ್ದಾರೆ. ಇತ್ತ ಪರಾತತ್ವ ಇಲಾಖೆ ಕೂಡ ಶಿಥಿಲ ಗೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡಿದೆ. ಕಟ್ಟಡ ಸಂಪೂರ್ಣ ಕುಸಿಯುವ ಹಂತಕ್ಕೆ ಬಂದಿದ್ದು ಆದಷ್ಟು ಬೇಗ ಹೊಸ ಕಟ್ಟಡ ಕಟ್ಟ ಬೇಕಿದೆ.

ಇನ್ನು ಕಟ್ಟಡ ಕಟ್ಟುವುದಕ್ಕೆ ಪುರಾತತ್ವ ಇಲಾಖೆಯ ಅನುಮತಿ ಅಗತ್ಯ. ಆದರೆ ಇದುವರೆಗೂ ಪುರಾತತ್ವ ಇಲಾಖೆ ಅನುಮತಿ ನೀಡಿಲ್ಲ. ಈ ಹಿನ್ನೆಲೆ ಯಥಾಸ್ಥಿತಿ ಮುಂದುವರಿದಿದೆ. ಪುರಾತತ್ವ ಇಲಾಖೆ ಅನುಮತಿ ನೀಡಿದ್ರೆ ದೇವಸ್ಥಾನದ ಹಣದಲ್ಲೆ ಕಟ್ಟಡ ನಿರ್ಮಿಸಲು ಆಡಳಿತ ಮಂಡಳಿ ಪ್ಲಾನ್ ಮಾಡಿದೆ.

ಇದನ್ನೂ ಓದಿ: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಇನ್ಮುಂದೆ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ದಕ್ಷಿಣದ ಕಾಶಿ ಎಂದು ಕರೆಯುವ ಗೋಕರ್ಣವು ದೇವತೆಗಳು ವಾಸವಾಗಿರುವ ಪವಿತ್ರ ಭೂಮಿ ಎಂಬ ನಂಬಿಕೆ ಇದೆ. ಇಲ್ಲಿ ಶಿವನಿಗೆ ಸಂಬಂಧಿಸಿದ ಮಹಾಬಲೇಶ್ವರ ದೇವಸ್ಥಾನವಿದ್ದು ನಿತ್ಯವೂ ವಿಶೇಷ ಪೂಜೆಗಳು ನಡೆಯುತ್ತವೆ. ಈ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.

ಗೋಕರ್ಣ ಹೆಸರು ಬಂದದ್ದು ಹೇಗೆ?

ಒಮ್ಮೆ ಬ್ರಹ್ಮ ದೇವನು ಶಿವನನ್ನು ಪಾತಾಳಕ್ಕೆ ಕಳುಹಿಸಿದ್ದನು. ಆಗ ಶಿವನು ಗೋವಿನ ಕಿವಿಯಿಂದ ಕಾಣಿಸಿಕೊಂಡನು. ಅದಕ್ಕಾಗಿ ಗೋ ಎಂದರೆ ಹಸು, ಕರ್ಣ ಎಂದರೆ ಕಿವಿ ಎಂದರ್ಥ. ಒಟ್ಟಿಗೆ ಈ ಅಕ್ಷರಗಳನ್ನು ಸೇರಿಸಿ ಗೋಕರ್ಣ ಎಂದು ಕರೆಯಲಾಯಿತು. ಇಲ್ಲಿ ಇಂದಿಗೂ ಗೋವಿನ ಕಿವಿಯನ್ನು ಹೋಲುವ ಒಂದು ಗುಹೆಯಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ