AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಸಿಯುವ ಹಂತಕ್ಕೆ ತಲುಪಿದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ; ನವೀಕರಣಕ್ಕೆ ಬೇಕಿದೆ ಪುರಾತತ್ವ ಇಲಾಖೆಯ ಅನುಮತಿ

ದಕ್ಷಿಣ ಕಾಶಿ ಎಂದೆ ಪ್ರಸಿದ್ದ ಪಡೆದಿರುವ ಗೋಕರ್ಣದ ಮಹಾಬಲೆಶ್ವರ ದೇವಸ್ಥಾನದ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿದೆ. ಶತಮಾನಗಳ ಹಿಂದೆ ನಿರ್ಮಾಣವಾಗಿರುವ ದೇವಸ್ಥಾನದ ಕಟ್ಟಡ ನವೀಕರಣಕ್ಕೆ ಪುರಾತತ್ವ ಇಲಾಖೆಯ ಅನುಮತಿ ಬೇಕಿದೆ. ಸದ್ಯ ಭಕ್ತರು ಭಯದಲ್ಲೇ ದೇವರ ದರ್ಶನ ಪಡೆಯುವಂತಾಗಿದೆ.

ಕುಸಿಯುವ ಹಂತಕ್ಕೆ ತಲುಪಿದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ; ನವೀಕರಣಕ್ಕೆ ಬೇಕಿದೆ ಪುರಾತತ್ವ ಇಲಾಖೆಯ ಅನುಮತಿ
ಗೋಕರ್ಣ ಮಹಾಬಲೇಶ್ವರ್​ ದೇವಸ್ಥಾನ
ಸೂರಜ್​, ಮಹಾವೀರ್​ ಉತ್ತರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 13, 2023 | 9:31 PM

Share

ಉತ್ತರ ಕನ್ನಡ, ಡಿ.13: ಗೋಕರ್ಣ ಮಹಾಬಲೇಶ್ವರ ದೇವಸ್ಥಾನ (Gokarna Mahabaleshwar Temple) ಎಂದರೇ ಶಿವಭಕ್ತರಿಗೆ ಪುಣ್ಯ ಕ್ಷೇತ್ರ. 11 ನೇ ಶತಮಾನದ ಪೂರ್ವದಲ್ಲೇ ನಿರ್ಮಿತವಾಯಿತು ಎಂಬ ಐತಿಹ್ಯವುಳ್ಳ ಈ ದೇವಸ್ಥಾನ, ದಕ್ಷಿಣ ಕಾಶಿ ಎಂದೇ ಖ್ಯಾತಿ ಹೊಂದಿದೆ. ಈ ಕ್ಷೇತ್ರಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದ್ರೆ, 18 ನೇ ಶತಮಾನದಲ್ಲಿ ಬ್ರಿಟೀಷರಿಂದ ಪುನರ್ ನಿರ್ಮಿಸಿದ ಚಂದ್ರ ಶಾಲೆಯ ದ್ವಾರದ ಭಾಗ ಹಲವು ಭಾಗಗಳು ಶಿಥಿಲಾವಸ್ತೆ ತಲುಪಿದ್ದು, ಇದೀಗ ಯಾವ ಸಂದರ್ಭದಲ್ಲಿಯಾದರೂ ಬೀಳುವ ಹಂತದಲ್ಲಿದೆ.

ಆಡಳಿತ ಮಂಡಳಿ ಶೀಘ್ರ ಸರಿಪಡಿಸಬೇಕು ಎಂದು ಭಕ್ತರ ಆಗ್ರಹ

ಮಹಾಬಲೇಶ್ವರ ದೇವಸ್ಥಾನಕ್ಕೆ ಎರಡು ದ್ವಾರಗಳಿದ್ದು, ಭಕ್ತರು ದಕ್ಷಿಣ ದ್ವಾರ ಹಾಗೂ ಪಶ್ಚಿಮ ದ್ವಾರದ ಮೂಲಕ ದೇವರ ದರ್ಶನ ಮಾಡಿ ಆತ್ಮಲಿಂಗ ಪೂಜೆಗೈಯುತ್ತಾರೆ. ಆದ್ರೆ, ದಕ್ಷಿಣ ದ್ವಾರದಲ್ಲಿ ಪ್ರವೇಶಿಸಿ ಆತ್ಮಲಿಂಗ ಪೂಜೆಗೆ ತೆರಳಿದರೇ ಪುಣ್ಯ ಹೆಚ್ಚು ಎಂಬ ನಂಬಿಕೆಯಿದೆಯೋ, ಆ ದ್ವಾರದ ಚಾವಣಿಯೇ ಬೀಳುವ ಹಂತ ತಲುಪಿದೆ. ಚಾವಣಿಯ ಮೇಲ್ಭಾಗದಲ್ಲಿ ಗೋಡೆಗಳು, ನೆಲಹಾಸುವಿನಲ್ಲಿ ದೊಡ್ಡ ದೊಡ್ಡ ಬಿರುಕು ಮೂಡಿದೆ. ಗೋಡೆಯ ಒಂದು ಭಾಗ ಕಿತ್ತು ಬಿದ್ದಿದ್ದು, ನೆಲಹಾಸಿನ ಬಾರಕ್ಕೆ ಕಂಬದ ಬಳಿ ಒಂದು ಭಾಗ ಕುಸಿದು ಬೀಳುವ ಹಂತ ತಲುಪಿದೆ. ಇದೇ ಭಾಗದಲ್ಲಿ ಪೊಲೀಸ್ ಉಪಠಾಣೆ ಸಹ ಇದೆ. ಮುಂಭಾಗದ ದಕ್ಷಿಣ ದ್ವಾರದಿಂದ ಸಾವಿರಾರು ಭಕ್ತರು ದೇವರ ದರ್ಶನಕ್ಕೆ ಸಾಗುತಿದ್ದು, ಒಂದು ವೇಳೆ ಕುಸಿದು ಬಿದ್ದರೇ ಸಾವು- ನೋವು ಸಂಭವಿಸುವ ಆತಂಕವಿದೆ. ಹೀಗಾಗಿ ಅವಘಡ ಸಂಭವಿಸುವ ಮುಂಚೆ ಶೀಘ್ರ ಆಡಳಿತ ಮಂಡಳಿ ಸರಿಪಡಿಸಬೇಕು ಎಂದು ಭಕ್ತರಾದ ಪ್ರವೀಣ್​ ಎಂಬುವವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಧಾರವಾಡದಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್; ದೇವಸ್ಥಾನಗಳಲ್ಲಿ ಅನ್ಯ ಧರ್ಮದವರ ವ್ಯಾಪಾರ ನಿಷೇಧಕ್ಕೆ ಆಗ್ರಹ

ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಪುರಾತತ್ವ ಇಲಾಖೆಗೆ ಸೇರುತ್ತದೆ. ಇಲ್ಲಿಯ ಯಾವ ವಸ್ತುಗಳನ್ನು ಸರಿಪಡಿಸಬೇಕು ಅಥವಾ ಹೊಸದಾಗಿ ನಿರ್ಮಿಸಬೇಕು ಎಂದಾದರೇ ಪುರಾತತ್ವ ಇಲಾಖೆ ಅನುಮತಿ ಅವಶ್ಯ. ಆದ್ರೆ, ಹೀಗೆ ಬಿರುಕು ಬಿಟ್ಟರೂ ಪುರಾತತ್ವ ಇಲಾಖೆ ಮಾತ್ರ ಸರಿಪಡಿಸುವ ಗೋಜಿಗೆ ಹೋಗದೇ ನಿರ್ಲಕ್ಷಿಸಿದೆ. ಇನ್ನು ಜಿಲ್ಲಾಡಳಿತ ಸಹ ಈ ಬಗ್ಗೆ ಪುರಾತತ್ವ ಇಲಾಖೆಗೆ ಮಾಹಿತಿ ನೀಡಿದೆ. ಇದಲ್ಲದೇ ಹಲವು ಭಾಗದಲ್ಲಿ ಶಿಥಿಲಗೊಂಡಿದ್ದು, ಕೆಲವು ಭಾಗ ಹೊಸದಾಗಿ ನಿರ್ಮಿಸಲು ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ಹೀಗಾಗಿ ಕೇಂದ್ರದ ಪುರಾತತ್ವ ಇಲಾಖೆಯಿಂದ ಅನುಮತಿಗಾಗಿ ಕಾಯುತ್ತಿದೆ. ಸದ್ಯ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ದಕ್ಷಿಣ ದ್ವಾರ ಭಾಗವು ಯಾವ ಸಂದರ್ಭದಲ್ಲಾದರೂ ಬೀಳುವ ಆತಂಕ ವಿದ್ದು, ಶೀಘ್ರ ಸರಿಪಡಿಸದೇ ನಿರ್ಲಕ್ಷಿಸಿದಲ್ಲಿ ಅವಘಡ ಸಂಭವಿಸುವ ಸಾಧ್ಯತೆಗಳಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Wed, 13 December 23

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ