AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಓಪನ್, ಬಂದ್ ಆಗಿದ್ದ ಜಲಸಾಹಸ ಕ್ರೀಡೆಗಳಿಗೆ ಅನುಮತಿ ಕೊಟ್ಟ ಜಿಲ್ಲಾಡಳಿತ

ಎಲ್ಲಾದ್ರು ಟ್ರಿಪ್ ಹೋಗ್ಬೇಕು. ಫುಲ್ ಗಿಡ, ಮರ ಇರ್ಬೇಕು. ಆಟ ಆಡೋಕೆ ನೀರು ಇರಬೇಕು ಅಂತಾ ಅದೆಷ್ಟೋ ಜನ ಉತ್ತರಕನ್ನಡ ಜಿಲ್ಲೆಯ ಪ್ರವಾಸಿ ತಾಣಕ್ಕೆ ಆಗಮಿಸ್ತಿದ್ರು. ಆದ್ರೆ ಪ್ರವಾಸಿಗರು ಸ್ವಲ್ಪ ಬೇಸರಗೊಂಡಿದ್ರು. ಯಾಕಂದ್ರೆ, ಜಲಕ್ರೀಡೆ ಅವಕಾಶ ಇರಲಿಲ್ಲ. ಆದ್ರೀಗ, ಜಿಲ್ಲಾಡಳಿತ ಜಲಕ್ರೀಡೆ ನಡೆಸಲು ಅನುಮತಿ ನೀಡಿದೆ.

ಉತ್ತರಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಓಪನ್, ಬಂದ್ ಆಗಿದ್ದ ಜಲಸಾಹಸ ಕ್ರೀಡೆಗಳಿಗೆ ಅನುಮತಿ ಕೊಟ್ಟ ಜಿಲ್ಲಾಡಳಿತ
ಬಂದ್ ಆಗಿದ್ದ ಜಲಸಾಹಸ ಕ್ರೀಡೆಗಳಿಗೆ ಅನುಮತಿ ಕೊಟ್ಟ ಜಿಲ್ಲಾಡಳಿತ
TV9 Web
| Updated By: ಆಯೇಷಾ ಬಾನು|

Updated on: Sep 23, 2021 | 1:41 PM

Share

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕಾರವಾರ, ಗೋಕರ್ಣ, ಹೊನ್ನಾವರ ಹಾಗೂ ಮುರ್ಡೇಶ್ವರ ಸೇರಿ ಹತ್ತಾರು ಕಡಲತೀರಗಳಿವೆ. ಇಲ್ಲಿನ ಬೀಚ್‌ಗಳಲ್ಲಿ ಆಟವಾಡಿ ಎಂಜಾಯ್ ಮಾಡೋಕೆ ಅಂತ್ಲೇ ರಾಜ್ಯ, ಹೊರ ರಾಜ್ಯಗಳಿಂದ್ಲೂ ಪ್ರವಾಸಿಗರು ಆಗಮಿಸ್ತಾರೆ. ಅದ್ರಲ್ಲೂ ದಾಂಡೇಲಿ, ಜೋಯಿಡಾ ಭಾಗಗಳಿಗೆ ಕಾಳಿ ನದಿಯಲ್ಲಿನ ವಿವಿಧ ಜಲಸಾಹಸ ಕ್ರೀಡೆಗಳಲ್ಲಿ ಭಾಗಿ ಆಗೋಕೆ ಸಾವಿರಾರು ಮಂದಿ ಬರ್ತಿದ್ರು. ಆದ್ರೆ ರಾಜ್ಯ ಅನ್‌ಲಾಕ್ ಆಗಿದ್ರೂ, 3ನೆ ಅಲೆ ಭೀತಿಯಿಂದ ಜಲಸಾಹಸ ಕ್ರೀಡೆಗಳಿಗೆ ಬ್ರೇಕ್ ಹಾಕಿದ್ರಿಂದ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ ಜಲಸಾಹಸ ಕ್ರೀಡೆಗಳನ್ನ ನಡೆಸಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ. ಕೊರೊನಾ ಮಾರ್ಗಸೂಚಿಗಳ ಪಾಲನೆಯೊಂದಿಗೆ ವಾಟರ್ ಸ್ಪೋರ್ಟ್ಸ್ ಆಯೋಜಿಸುವಂತೆ ಸೂಚನೆ ಕೊಟ್ಟಿದೆ.

ಇನ್ನು ಜಿಲ್ಲೆಯ ಕಾರವಾರ ರವೀಂದ್ರನಾಥ ಠಾಗೋರ್ ಕಡಲತೀರ, ಗೋಕರ್ಣದ ಓಂ ಬೀಚ್, ಕುಡ್ಲೇ ಬೀಚ್ ಹಾಗೂ ಮುರ್ಡೇಶ್ವರ ಕಡಲತೀರಗಳಲ್ಲಿ ಹಿಂದಿನಿಂದಲೂ ಜಲಸಾಹಸ ಕ್ರೀಡೆಗಳನ್ನ ನಡೆಸಲಾಗುತ್ತಿತ್ತು. ಬೋಟ್ ರೈಡ್, ಜೆಟ್ ಸ್ಕೀ ಸೇರಿದಂತೆ ರಿವರ್ ಱಫ್ಟಿಂಗ್ ನಂತಹ ವಾಟರ್ ಕ್ರೀಡೆ ಆಯೋಜಿಸಲಾಗುತ್ತಿತ್ತು. ಆದ್ರೆ ಕೊರೊನಾ ಕಾರಣದಿಂದ ವಾಟರ್ ಸ್ಪೋರ್ಟ್ಸ್ ಗೆ ಬ್ರೇಕ್ ಬಿದ್ದಿತ್ತು. ಇದ್ರಿಂದ ಜಲಸಾಹಸ ಕ್ರೀಡೆಗಳನ್ನ ನಡೆಸುತ್ತಿದ್ದವರು ನಷ್ಟದ ಸುಳಿಯಲ್ಲಿ ಸಿಲುಕಿದ್ರು. ಇದೀಗ ಜಲ ಕ್ರೀಡೆಗೆ ಮತ್ತೆ ಅನುಮತಿ ನೀಡಿರುವುದಕ್ಕೆ ಆಯೋಜಕರು ಸಂತಸಗೊಂಡಿದ್ದಾರೆ. ಈಗಾಗಲೇ ಜಲಸಾಹಸ ಕ್ರೀಡೆಗಳನ್ನ ಪ್ರಾರಂಭಿಸಲು ಸಿದ್ಧತೆಗಳನ್ನ ಮಾಡಿಕೊಂಡಿದ್ದಾರೆ.

ಸದ್ಯ, ಕೊರೊನಾ ಅಬ್ಬರದಿಂದಾಗಿ ಕಳೆದೆರಡು ವರ್ಷಗಳಿಂದ ಮಂಕಾಗಿದ್ದ ಪ್ರವಾಸೋದ್ಯಮ ಇದೀಗ ಜಲಸಾಹಸ ಕ್ರೀಡೆಗಳ ಪ್ರಾರಂಭದೊಂದಿಗೆ ಮತ್ತೆ ಚೇತರಿಸಿಕೊಳ್ತಿದೆ. ವಾಟರ್ ಸ್ಪೋರ್ಟ್ಸ್ ಆಯೋಜಕರಿಗೆ ಜಿಲ್ಲಾಡಳಿತದ ಆದೇಶ ಖುಷಿ ಕೊಟ್ಟಿದೆ. Karwar water sports

ಇದನ್ನೂ ಓದಿ: ಕಾರವಾರದ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಆಮೆ ಕಳೆಬರ ಪತ್ತೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!