AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿವೆ ಹೊಸ 32 ಸುಂದರ ತಾಣಗಳು!

ಉತ್ತರ ಕನ್ನಡ ಜಿಲ್ಲಾಡಳಿತವು ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದೆ. ಅರಣ್ಯ ಇಲಾಖೆಯ ಸರ್ವೆ ಪ್ರಕಾರ, ಜಿಲ್ಲೆಯಲ್ಲಿ 32 ಹೊಸ ಟ್ರೆಕ್ಕಿಂಗ್ ಮಾರ್ಗಗಳನ್ನು ಗುರುತಿಸಲಾಗಿದೆ. ಈ ಮಾರ್ಗಗಳಿಗೆ ಅನುಮತಿ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ನಂತರ, ಅನುಭವಿ ಮಾರ್ಗದರ್ಶಿಗಳೊಂದಿಗೆ ಈ ಮಾರ್ಗಗಳಲ್ಲಿ ಟ್ರೆಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗುವುದು. ಇದುವರೆಗೂ ನಿಷೇಧಿತವಾಗಿದ್ದ ಅನೇಕ ಪ್ರದೇಶಗಳನ್ನು ಈ ಮೂಲಕ ಅನ್ವೇಷಿಸಲು ಸಾಧ್ಯವಾಗಲಿದೆ.

ಚಾರಣಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿವೆ ಹೊಸ 32  ಸುಂದರ ತಾಣಗಳು!
ಚಾರಣಿಗರು
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ

Updated on:Apr 09, 2025 | 4:00 PM

ಕಾರವಾರ, ಏಪ್ರಿಲ್​ 09: ಚಾರಣಕ್ಕೆ (Trekking) ಕೇವಲ ಚಿಕ್ಕಮಗಳೂರು (Chikkamagaluru) ಮತ್ತು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಗಳತ್ತ ಹೊರಡುವ ಜನರಿಗೆ ಉತ್ತರ ಕನ್ನಡ (Uttar Kannada) ಜಿಲ್ಲಾಡಳಿತ ಸಿಹಿ ಸುದ್ದಿ ನೀಡಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲದೆ ನಮ್ಮ ಜಿಲ್ಲೆಯಲ್ಲೂ 32 ಚಾರಣ ಪಥಗಳು ಇವೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಹೌದು, ಟಿವಿ9 ಪ್ರತಿನಿಧಿ ಜೊತೆ ಮಾತನಾಡಿದ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಅರಣ್ಯ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸರ್ವೆ ಮಾಡಿ 32 ಚಾರಣ ಪಥಗಳ ಗುರುತು ಮಾಡಿದೆ ಎಂದು ತಿಳಿಸಿದರು.

32 ಸ್ಥಳಗಳಲ್ಲಿ ಚಾರಣಕ್ಕೆ ಅನುಮತಿ ನೀಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಪತ್ರ ಕಳುಹಿಸಲಾಗಿದೆ. ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡಿದ ಬಳಿಕ 32 ಕಡೆ ಚಾರಣಕ್ಕೆ ಅವಕಾಶ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಯಾರೂ ಕಾಣದ ಪ್ರದೇಶಗಳನ್ನು ಇನ್ಮುಂದೆ ಕಾಣಬಹುದು. ಚಾರಣಕ್ಕೆ ಅನುಮತಿ ದೊರೆತ ಬಳಿಕ, ಅನುಭವಿ ಗೈಡ್​ ಮೂಲಕ ಚಾರಣಕ್ಕೆ ಅವಕಾಶ ನೀಡಲಾಗುವುದು. ಈ ಚಾರಣದ ಬಗ್ಗೆ ಜಿಲ್ಲಾಡಳಿತ ವೆಬ್​ಸೈಟ್​ ಮತ್ತು ಪ್ರವಾಸೋದ್ಯಮ ಇಲಾಖೆ ಕಮಿಟಿ ಮುಖಾಂತರ ಪ್ರಚಾರ ಮಾಡಲಾಗುವುದು ಎಂದರು.

ಚಾರಣ ಸ್ಥಳಗಳನ್ನು ಅರಣ್ಯ ಇಲಾಖೆ ನಿರ್ವಹಣೆ ಮಾಡುತ್ತಿದೆ. ಜಿಲ್ಲೆಯಲ್ಲಿ ಶೇ72 ರಷ್ಟು ಅರಣ್ಯವಿದ್ದರೂ ಅಧಿಕೃತವಾಗಿ ಒಂದೆ ಚಾರಣ ಪಥವಿತ್ತು. ಕುಳಗಿ ನೇಚರ್ ಕ್ಯಾಂಪ್​ನಲ್ಲಿ ಮಾತ್ರ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಬಹಳಷ್ಟು ಪ್ರವಾಸಿಗರು ಇಲಾಖೆಯ ಕಣ್ಣು ತಪ್ಪಿಸಿ ನಿಷೇಧಿತ ಪಥದಲ್ಲಿ ಚಾರಣ ಮಾಡಿ ಅವಘಡಕ್ಕೆ ಸಿಲುಕಿದ್ದ ಘಟನೆಗಳು ನಡೆದಿವೆ. ಅನೇಕರು ಅಸುರಕ್ಷಿತ ತಾಣಗಳಲ್ಲಿ ಚಾರಣಕ್ಕೆ ಹೋಗಿ ಜೀವ ಕಳೆದುಕೊಂಡಿರುವ ಉದಾಹರಣಗಳಿವೆ. ಇದನ್ನು ತಪ್ಪಿಸಲು ಅರಣ್ಯ ಇಲಾಖೆ 32 ಚಾರಣ ಸ್ಥಳಗಳನ್ನು ಗುರುತು ಮಾಡಿದೆ.

ಇದನ್ನೂ ಓದಿ
Image
ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ:ಹುಟ್ಟುವ ಮಕ್ಕಳು ಅಂಗವಿಕಲರು
Image
ಹೆಚ್ಚಿದ ಫೇಕ್ ನ್ಯೂಸ್ ಹಾವಳಿ: ಬೆಂಗಳೂರು, ಉತ್ತರ ಕನ್ನಡ ಮುಂಚೂಣಿಯಲ್ಲಿ
Image
ಶಿರೂರು ಗುಡ್ಡ ದುರಂತದಲ್ಲಿ ಅನಾಥವಾಗಿದ್ದ ಶ್ವಾನ ಮ್ಯಾರಥಾನ್​​ನಲ್ಲಿ ಓಟ
Image
‘ನಾನೂ ಡಿಸಿ ಆಗಬೇಕು’: ವಿದ್ಯಾರ್ಥಿನಿ ಮಾತಿಗೆ ಡಿಸಿ ಮಾಡಿದ್ದೇನು ಗೊತ್ತಾ?

ಪ್ರವಾಸೋದ್ಯಮಕ್ಕೆ ಇಂಬು ನೀಡಲು ಮುಂದಾದ ಡಿಸಿ

ಉತ್ತರ ಕನ್ನಡ ಜಿಲ್ಲೆಗೆ ಸಾಕಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ. ಕೆಲವರಿಗೆ ದೇವಸ್ಥಾನ ಇಷ್ಟ ಆದ್ರೆ, ಇನ್ನೂ ಕೆಲವರಿಗೆ ಚಾರಣಕ್ಕೆ ಹೋಗುವ ಆಶಯ ಇರುತ್ತೆ. ಇನ್ನೂ, ಕೆಲವರಿಗೆ ಕಡಲ ತೀರ ಹಾಗೂ ಕಾಡಿನಲ್ಲಿ ಸುತ್ತಾಡುವ ಮಾಡುವ ಅಭಿರುಚಿ ಇರುತ್ತದೆ. ಹೀಗಾಗಿ, ದೇವಸ್ಥಾನಗಳಿಗೆ ಭೇಟಿ ಕೊಡಲು ಬಯಸುವವರಿಗೆ ಜಿಲ್ಲಾಡಳಿತ ಹೊಸ ವೆಬ್​ ಪೋರ್ಟಲ್​​ ತೆರದಿದೆ. ಈ ವೆಬ್​ ಪೋರ್ಟಲ್​ನಲ್ಲಿ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ, ತಾವು ಭೇಟಿ ಕೊಡಲು ಮುಂದಾಗಿರುವ ದೇವಸ್ಥಾನದ ಸುತ್ತಮುತ್ತಲಿನ ಅತ್ಯಾಕರ್ಷಣೆ ಸ್ಥಳಗಳ ಹಾಗೂ ಐತಿಹಾಸಿಕ ದೇವಸ್ಥಾನಗಳ ರೂಟ್ ಮ್ಯಾಪ್ ಹಾಗೂ ಅಲ್ಲಿನ ಮಾಹಿತಿಯನ್ನು ಒದಗಿಸಲಾಗಿತ್ತೆ.

ಉತ್ತರ ಕನ್ನಡ ಅಂದ್ರೆ ಗೋಕರ್ಣ, ಮುರ್ಡೆಶ್ವರ, ಕಡಲ ತೀರ ಮತ್ತು ರೆಸಾರ್ಟ್​ಗಳಿಗೆ ಅಷ್ಟೇ ಸಿಮಿತ ಎಂಬುವುದು ಅನೇಕರ ಅಭಿಪ್ರಾಯ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ತಾಣಗಳಿಗಿಂತ, ಬೆಳಕಿಗೆ ಬಾರದ ತಾಣಗಳೇ ಹೆಚ್ಚಿವೆ. ಕೇವಲ ಸ್ಥಳಿಯರಿಗೆ ಮತ್ತು ವಿಶೇಷ ತಾಣಗಳ ಬಗ್ಗೆ ಅಧ್ಯಯನ ಮಾಡುವವರಿಗೆ ಮಾತ್ರ ಗೊತ್ತಿದೆ.

ಇದನ್ನೂ ಓದಿ: ಉತ್ತರ ಕನ್ನಡ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ಲಾನ್ ಮಾಡ್ತಿದ್ದೀರಾ? ಹಾಗಾದರೆ ಈ ವಿಚಾರ ಗಮನಿಸಿ

ಇಂತಹ ತಾಣಗಳ ಬಗ್ಗೆ ಎಲ್ಲರಿಗೂ ಪರಿಚಯಿಸಿ ಜಿಲ್ಲೆಯ ಪ್ರವಾಸೊದ್ಯಮಕ್ಕೆ ಇಂಬು ನೀಡಲು ಮುಂದಾಗಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, “ಅನಸೀನ್ ಉತ್ತರ ಕನ್ನಡ” ಎಂಬ ಶಿರ್ಷಿಕೆ ಅಡಿಯಲ್ಲಿ ಖಾಸಗಿ ಕಂಪನಿಗಳ ಮೂಲಕ, ಜಿಲ್ಲೆಯಲ್ಲಿ ಬೆಳಕಿಗೆ ಬಾರದ ಪ್ರವಾಸಿ ತಾಣಗಳ ಬಗ್ಗೆ ಅಧ್ಯಯನ ಮಾಡಿಸಿ, ಜನರಿಗೆ ಪರಿಚಯಿಸಲು ಜಿಲ್ಲಾಧಿಕಾರಿ ಮುಂದಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Wed, 9 April 25

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?