AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ, ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ಸಮಯ ಬದಲಾವಣೆಯಾಗಿದ್ದು, ಕೆಲವು ರೈಲುಗಳನ್ನು ಪರ್ಯಾಯ ಮಾರ್ಗಗಳಲ್ಲಿ ಕಳುಹಿಸಲಾಗಿದೆ. ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಕಲ್ಲಿದ್ದಲು ಕೊಂಡೊಯ್ಯುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿರುವ ಬಗ್ಗೆ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ.

ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ
ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು
ಸೂರಜ್​, ಮಹಾವೀರ್​ ಉತ್ತರೆ
| Updated By: Ganapathi Sharma|

Updated on: Aug 09, 2024 | 1:47 PM

Share

ಕಾರವಾರ, ಆಗಸ್ಟ್ 9: ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ತುಸು ವ್ಯತ್ಯಯವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆ ಬಳಿಯ ಜಿಂದಲ್ ಕಂಪನಿಗೆ ಕಲ್ಲಿದ್ದಲು ಕೊಂಡೊಯ್ಯುತಿದ್ದ ರೈಲು ಇದಾಗಿದೆ.

ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಬೆಳಗಾವಿ, ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ಸಮಯ ಬದಲಾಗಿದೆ. ಗೋವಾ ಮೂಲಕ ಸಂಚರಿಸುವ ಎರಡು ಟ್ರೈನ್​ಗಳ ಸಂಚಾರ ಬಂದ್ ಆಗಿದೆ.

ಗೂಡ್ಸ್ ರೈಲು ಹಳಿತಪ್ಪಿದೆ ಬಗ್ಗೆ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ್ ಕನಮಡಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ರೈಲು ಸಂಖ್ಯೆ 17420/17022 ವಾಸ್ಕೋಡಗಾಮಾ-ತಿರುಪತಿ/ಹೈದರಾಬಾದ್ ವೀಕ್ಲಿ ಎಕ್ಸ್‌ಪ್ರೆಸ್ ಸೇರಿದಂತೆ ಮೂರು ರೈಲುಗಳ ಮಾರ್ಗ ಬದಲಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

Goods train derailed in Sonalim and Dudhsagar section, South Western Railway traffic affected, Kannada news

ಈ ರೈಲುಗಳು ಮಡಗಾಂವ್, ಕಾರವಾರ, ಪಡೀಲ್, ಸುಬ್ರಹ್ಮಣ್ಯ ರಓಡ್, ಹಾಸನ, ಅರಸೀಕೆರೆ, ಚಿಕ್ಕಜಾಜೂರು, ರಾಯದದುರ್ಗ, ಮಾರ್ಗವಾಗಿ ಸಂಚರಿಸಿವೆ. ಬಳ್ಳಾರಿಯಿಂದ ಈ ರೈಲುಗಳು ನಿಗದಿತ ಮಾರ್ಗದಲ್ಲಿ ಮುಂದುವರಿಯಲಿವೆ.

ಇದನ್ನೂ ಓದಿ: ಹುಬ್ಬಳ್ಳಿ ಅಂಕೋಲಾ ಜೋಡಿ ರೈಲು ಹಳಿ: ಕರ್ನಾಟಕಕ್ಕೆ ಅಶ್ವಿನಿ ವೈಷ್ಣವ್ ಕೊಟ್ಟರು ಗುಡ್ ನ್ಯೂಸ್

ರೈಲು ಸಂಖ್ಯೆ 12779 ವಾಸ್ಕೋಡ ಗಾಮಾ – ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಅನ್ನು ಮಡಗಾಂವ್, ರೋಹಾ, ಪನ್ವೆಲ್, ಕಲ್ಯಾಣ್ ಮತ್ತು ಪುಣೆ ಮೂಲಕ ಕಳುಹಿಸಲಾಗಿದೆ. ಮತ್ತೊಂದು ರೈಲು ಸಂಖ್ಯೆ 12780 ಹಜರತ್ ನಿಜಾಮುದ್ದೀನ್ – ವಾಸ್ಕೋಡ ಗಾಮಾ ಎಕ್ಸ್‌ಪ್ರೆಸ್ ಅನ್ನು ಪುಣೆ, ಕಲ್ಯಾಣ್, ಪನ್ವೆಲ್, ರೋಹಾ ಮತ್ತು ಮಡಗಾಂವ್ ಮೂಲಕ ಕಳುಹಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ