AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ದೇಹ ಪತ್ತೆ: ತಲೆ, ಉಗುರು ಕದ್ದೊಯ್ದ ಖದೀಮರು

ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲಬಾರಿ ಬರ್ಚಿ ವ್ಯಾಪ್ತಿಯ ನಂಕೇಸರೋದ್ಗಾ ಗ್ರಾಮದಲ್ಲಿ ಹುಲಿ ಶವ ಪತ್ತೆಯಾಗಿದೆ. ಪತ್ತೆಯಾದ ಹುಲಿಯ ಮೃತದೇಹದಲ್ಲಿ ತಲೆ ಮತ್ತು ಅವುಗಳ ಗುರುರುಗಳು ನಾಪತ್ತೆಯಾಗಿದೆ.

ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ದೇಹ ಪತ್ತೆ: ತಲೆ, ಉಗುರು ಕದ್ದೊಯ್ದ ಖದೀಮರು
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ
TV9 Web
| Edited By: |

Updated on:Dec 19, 2022 | 12:37 PM

Share

ಹಳಿಯಾಳ: ಕಾಳಿ ಹುಲಿ ಸಂರಕ್ಷಿತ ಪ್ರದೇಶ (Kali Tiger Reserve)ದ ಬಳಿ ತಲೆ ಮತ್ತು ಉಗುರುಗಳು ಇಲ್ಲದ ಹುಲಿಯ ಕೊಳೆತ ಶವ ಪತ್ತೆ (Tiger dead body found)ಯಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬರ್ಚಿ ವ್ಯಾಪ್ತಿಯ ನಂಕೇಸರೋದ್ಗಾ ಗ್ರಾಮದಲ್ಲಿ ಇದೇ ಮೊದಲ ಬಾರಿ ಹುಲಿ ಶವ ಪತ್ತೆಯಾಗಿದ್ದು, ತಲೆ ಮತ್ತು ಉಗುರುಗಳು ನಾಪತ್ತೆಯಾಗಿವೆ. ಆರಂಭದಲ್ಲಿ ಹುಲಿ ಬೇಟೆಯಾಡಿದ ಶಂಕೆ ವ್ಯಕ್ತವಾಗಿತ್ತು. ಆದರೆ, ಪ್ರಾಣಿಗಳ ನಡುವಿನ ಸಂಘಟರ್ಷದಲ್ಲಿ ಹುಲಿ ಸಾವನ್ನಪ್ಪಿದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರಾದೇಶಿಕ ಸಂಘರ್ಷದಲ್ಲಿ ಗಂಡು ಹುಲಿ ಸಾವನ್ನಪ್ಪಿದೆ. ಅದರ ದೇಹದ ಮೇಲೆ ಉಗುರುಗಳ ಗಾಯಗಳಿವೆ ಮತ್ತು ಮರಣೋತ್ತರ ಪರೀಕ್ಷೆಯ ವರದಿಯಂತೆ ಹುಲಿಯ ಬೆನ್ನುಮೂಳೆ ಮುರಿದಿದೆ. ಇದು ಸಾಮಾನ್ಯವಾಗಿ ಪ್ರಾಣಿಗಳ ನಡುವಿನ ಸಂಘರ್ಷದ ಸಮಯದಲ್ಲಿ ಸಂಭವಿಸುತ್ತದೆ ಎಂದು ಉತ್ತರ ಕನ್ನಡದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ TNIE ಗೆ ತಿಳಿಸಿದರು.

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಚಿರತೆ ಹಾವಳಿ: ಕಬ್ಬಿನ ಗದ್ದೆಗೆ ನೀರು ಬಿಡಲು ಹೋದ ವ್ಯಕ್ತಿಯ ಮೇಲೆ ದಾಳಿ

ಅಧಿಕಾರಿಗಳ ಪ್ರಕಾರ, ಕೆಲವು ಕಿಡಿಗೇಡಿಗಳು ಸತ್ತ ಹುಲಿಯನ್ನು ಕಂಡ ಕೂಡಲೇ ತಲೆ ಮತ್ತು ಉಗುರುಗಳನ್ನು ಕದ್ದೊಯ್ದಿರಬಹುದು. ವನ್ಯಜೀವಿ ಕಾಯ್ದೆಯ ಶೆಡ್ಯೂಲ್ 1 ರ ಅಡಿಯಲ್ಲಿ ಹುಲಿಯನ್ನು ಸಂರಕ್ಷಿಸಲಾಗಿರುವುದರಿಂದ ನಾವು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಪ್ರಕಾರ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ವಸಂತ ರೆಡ್ಡಿ ಹೇಳಿದರು. ಸದ್ಯ ಜೆಎಂಎಫ್‌ಸಿ ನ್ಯಾಯಾಲಯದ ನಿರ್ದೇಶನದಂತೆ ಹುಲಿ ಶವ ಪರೀಕ್ಷೆ ನಡೆಸಿ ಶವವನ್ನು ವಿಲೇವಾರಿ ಮಾಡಲಾಗಿದೆ.

ಅರಣ್ಯಾಧಿಕಾರಿಗಳ ಪ್ರಕಾರ, ಮೂರು ದಿನಗಳ ಹಿಂದೆ ಪ್ರಾಣಿ ಸತ್ತಿರಬಹುದು. ಪ್ರಾಣಿಯ ತಲೆ ಮತ್ತು ಉಗುರುಗಳನ್ನು ಕಿತ್ತುಕೊಂಡ ದುಷ್ಕರ್ಮಿಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ. ತಂಡಕ್ಕೆ ಶ್ವಾನ ದಳ ಹಾಗೂ ವಿಧಿವಿಜ್ಞಾನ ತಜ್ಞರು ನೆರವು ನೀಡಲಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿ ಮತ್ತು ಉತ್ತರ ಕನ್ನಡ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯ ಸಂರಕ್ಷಣಾಧಿಕಾರಿಗಳು, ಉತ್ತರ ಕನ್ನಡ ಮತ್ತು ಡಿಸಿಎಫ್ ಹಳಿಯಾಳ ಸೇರಿದಂತೆ ಹಿರಿಯ ಅರಣ್ಯಾಧಿಕಾರಿಗಳು ಹಾಗೂ ರೇಂಜ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Mon, 19 December 22

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ